Homeಮುಖಪುಟನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ 6.5 ಎಕರೆ ಜಮೀನು ಹೊಂದಿರುವ ಇಬ್ಬರು ರೈತರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ತಿಂಗಳು ನಿವೃತ್ತರಾಗಲಿರುವ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯೊಬ್ಬರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಚೆನ್ನೈ (ಉತ್ತರ) ಜಿಎಸ್‌ಟಿ ಮತ್ತು ಸೆಂಟ್ರಲ್ ಎಕ್ಸೈಸ್‌ನ ಡೆಪ್ಯುಟಿ ಕಮಿಷನರ್ ಬಿ ಬಾಲಮುರುಗನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ನಿರ್ಮಲಾ ಸೀತಾರಾಮನ್‌ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದಾರೆ.

ರೈತರು ತಮ್ಮ ಜಮೀನು ಕಬಳಿಸುವ ಪ್ರಯತ್ನವನ್ನು ವಿರೋಧಿಸಿದ್ದಕ್ಕೆ ಟಾರ್ಗೆಟ್ ಮಾಡಲಾಗಿದೆ ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಪ್ರಕರಣವು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುವುದನ್ನು ತೋರಿಸುತ್ತದೆ. ವಾಸ್ತವವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಾಲಮುರುಗನ್ ಹೇಳಿದ್ದಾರೆ.

ಬಡ ದಲಿತ ರೈತರಿಗೆ ನ್ಯಾಯ ಒದಗಿಸಲು ಮತ್ತು ಜಾರಿ ನಿರ್ದೇಶನಾಲಯವನ್ನು ಉಳಿಸಲು ಸೀತಾರಾಮನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರಪತಿಯನ್ನು ಒತ್ತಾಯಿಸಿದ್ದಾರೆ.

ಅಧಿಕಾರಿ ಬಾಲಮುರುಗನ್ ಅವರು ಈ ಹಿಂದೆ ತನ್ನ ಸಾರ್ವಜನಿಕ ಸೇವೆಯಿಂದ ಸ್ವಯಂ ನಿವೃತ್ತಿ (ವಿಆರ್‌ಎಸ್) ಕೋರಿದ್ದರು. ಆದರೆ, ಹಣಕಾಸು ಇಲಾಖೆ ಅದನ್ನು ಮಾನ್ಯ ಮಾಡಿರಲಿಲ್ಲ. ಇದೇ ಜನವರಿ 31ರಂದು ಅವರು ವಯೋ ನಿವೃತ್ತಿ ಹೊಂದಲಿದ್ದಾರೆ.

2020ರಲ್ಲಿ ತನ್ನ ಸಹೋದ್ಯೋಗಿಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಧಿಕಾರಿ ಬಾಲಮುರುಗನ್ ಸುದ್ದಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆಯೂ ಇವರು ಅನುಮಾನ ವ್ಯಕ್ತಪಡಿಸಿದ್ದರು.

ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನ ಕಣ್ಣಯ್ಯನ್ ಮತ್ತು ಕೃಷ್ಣನ್ ಎಂಬ ಇಬ್ಬರು ರೈತರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಡಿ ನೋಟಿಸ್ ನೀಡಿದೆ. ಇವರ ವಿರುದ್ಧ ಎರಡು ಭಾರತೀಯ ಕಾಡೆಮ್ಮೆಗಳ ಸಾವಿಗೆ ಕಾರಣವಾದ ಅಕ್ರಮ ವಿದ್ಯುತ್ ಬೇಲಿಯನ್ನು ನಿರ್ಮಿಸಿದ್ದಕ್ಕಾಗಿ 2017 ರಲ್ಲಿ ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅತ್ತೂರಿನ ಸ್ಥಳೀಯ ನ್ಯಾಯಾಲಯವು ಇಬ್ಬರನ್ನು ಖುಲಾಸೆಗೊಳಿಸಿತ್ತು. ವನ್ಯಜೀವಿ (ರಕ್ಷಣೆ) ಕಾಯ್ದೆಯಡಿ ದಾಖಲಿಸಲಾದ ಪ್ರಕರಣಗಳನ್ನು ತನಿಖೆ ಮಾಡಲು ಇಡಿಗೆ ಅಧಿಕಾರವಿದ್ದರೂ, 2021 ರಲ್ಲಿ ರೈತರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಸೂಚಿಸಿದೆ. ಇದಾಗಿ ಎರಡು ವರ್ಷಗಳ ನಂತರ ಇಡಿ ನೋಟಿಸ್ ನೀಡಿದೆ ಎಂದು ಅಧಿಕಾರಿ ಬಾಲಮುರುಗನ್‌ ಹೇಳಿದ್ದಾರೆ.

ಜೂನ್ 2023ರಲ್ಲಿ ಇಬ್ಬರು ರೈತ ಸಹೋದರರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ಸ್ಥಳೀಯ ವಕೀಲರ ಸಹಾಯದಿಂದ ಇಬ್ಬರು ಇಡಿ ಮುಂದೆ ಹಾಜರಾಗಿದ್ದರು. ಇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಈ ವಿಷಯ ಬಯಲಾಗಿತ್ತು.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...