Homeಮುಖಪುಟತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಅಂತಿಮ ನಿರ್ಧಾರ ಹೊರಬಂದಿಲ್ಲ.

- Advertisement -
- Advertisement -

2021ರ ತಮಿಳುನಾಡು ವಿಧಾನಸಭೆ ಚುನಾವಣೆ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ನಟರು, ಪಕ್ಷಗಳ ಒಡಕುಗಳು, ಹೊಸ ಹೊಸ ಪಕ್ಷಗಳ ಹುಟ್ಟು ಇವುಗಳ ಆಚೆಗೂ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಹಳೆಯ ಅಭ್ಯಾಸದಂತೆ ಇತರ ಪಕ್ಷಗಳಿಂದ ಮುಖಂಡರನ್ನು ಸೆಳೆಯಲು ಮುಂದಾಗಿದೆ.

ನಟ, ರಾಜಕಾರಣಿ ಕಮಲ್ ಹಾಸನ್ ಈ ಬಾರಿಯ ವಿಧಾನಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಆದರೆ ಮಕ್ಕಳ ನಿಧಿ ಮಯ್ಯಂ ಪಕ್ಷದ ನಾಯಕ, ಪ್ರಧಾನ ಕಾರ್ಯದರ್ಶಿ ಎ.ಅರುಣಾಚಲಂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಮಲ್ ಹಾಸನ್ ತಮಿಳುನಾಡಿನಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರ ನಡೆಸುತ್ತಿರುವ ಹೊತ್ತಿನಲ್ಲೇ ತನ್ನ ಪಕ್ಷದ ಹಿರಿಯ ಮುಖಂಡರು ಭಾರತೀಯ ಜನತಾ ಪಾಟಿಗೆ ಸೇರ್ಪಡೆಗೊಂಡಿರುವುದು ಕಮಲ್ ಹಾಸನ್‌ಗೆ  ಚುನಾವಣೆಗೂ ಮುನ್ನವೇ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ಚೆನ್ನೈನ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಎಂಎನ್‌ಎಂ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲಂ, ತೂತುಕುಡಿ ಜಿಲ್ಲೆಯ ಒಂದು ಹಳ್ಳಿಯವರಾಗಿದ್ದು, ತಮಿಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ್ ನೀಧಿ ಮಯ್ಯಂಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಚುನಾವಣಾ ಪ್ರಚಾರ ಆರಂಭಿಸಿದ್ದ ವೇಳೆ ಪಕ್ಷದ ಮುಖಂಡ ಕಮಲ್ ಹಾಸನ್, ಪ್ರಚಾರ ಕಾರ್ಯಗಳಲ್ಲಿ ಅರುಣಾಚಲಂ ಅವರಿಗೆ ಪ್ರಾಮುಖ್ಯತೆ ನೀಡಲಾಗಿಲ್ಲ ಮತ್ತು ಕಮಲ್ ಹಾಸನ್ ಪಕ್ಷ ಮುನ್ನಡೆಸುತ್ತಿರುವ ಬಗ್ಗೆ ಇತರರಿಗೆ ಅಸಮಾಧಾನ ಇದೆ ಎಂದು ಮಾಹಿತಿ ದೊರೆತಿದೆ.

ಕಮಲ್ ಹಾಸನ್ ಈ ತಿಂಗಳ ಆರಂಭದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಈಗ ಎರಡನೇ ಹಂತದಲ್ಲಿದೆ ಪ್ರಚಾರ ಕಾರ್ಯ ನಡೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ತೀವ್ರ ಟೀಕೆ, ಆರೋಪಗಳನ್ನು ಮಾಡುತ್ತಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ಚುನಾವಣೆಗೆ  ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಎಲ್ಲ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ನಟ ರಜನಿಕಾಂತ್ ಇದೇ ತಿಂಗಳ ಅಂತ್ಯದಲ್ಲಿ ತಮ್ಮ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ.

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಯಾವುದೇ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿಲ್ಲ. ಆದರೆ, “ನಮ್ಮ ಸಿದ್ಧಾಂತವು ಹೊಂದಿಕೆಯಾಗುವಂತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ” ಎಂದು ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...