Homeಮುಖಪುಟತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಅಂತಿಮ ನಿರ್ಧಾರ ಹೊರಬಂದಿಲ್ಲ.

- Advertisement -
- Advertisement -

2021ರ ತಮಿಳುನಾಡು ವಿಧಾನಸಭೆ ಚುನಾವಣೆ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ನಟರು, ಪಕ್ಷಗಳ ಒಡಕುಗಳು, ಹೊಸ ಹೊಸ ಪಕ್ಷಗಳ ಹುಟ್ಟು ಇವುಗಳ ಆಚೆಗೂ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಹಳೆಯ ಅಭ್ಯಾಸದಂತೆ ಇತರ ಪಕ್ಷಗಳಿಂದ ಮುಖಂಡರನ್ನು ಸೆಳೆಯಲು ಮುಂದಾಗಿದೆ.

ನಟ, ರಾಜಕಾರಣಿ ಕಮಲ್ ಹಾಸನ್ ಈ ಬಾರಿಯ ವಿಧಾನಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಆದರೆ ಮಕ್ಕಳ ನಿಧಿ ಮಯ್ಯಂ ಪಕ್ಷದ ನಾಯಕ, ಪ್ರಧಾನ ಕಾರ್ಯದರ್ಶಿ ಎ.ಅರುಣಾಚಲಂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಮಲ್ ಹಾಸನ್ ತಮಿಳುನಾಡಿನಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರ ನಡೆಸುತ್ತಿರುವ ಹೊತ್ತಿನಲ್ಲೇ ತನ್ನ ಪಕ್ಷದ ಹಿರಿಯ ಮುಖಂಡರು ಭಾರತೀಯ ಜನತಾ ಪಾಟಿಗೆ ಸೇರ್ಪಡೆಗೊಂಡಿರುವುದು ಕಮಲ್ ಹಾಸನ್‌ಗೆ  ಚುನಾವಣೆಗೂ ಮುನ್ನವೇ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ಚೆನ್ನೈನ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಎಂಎನ್‌ಎಂ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲಂ, ತೂತುಕುಡಿ ಜಿಲ್ಲೆಯ ಒಂದು ಹಳ್ಳಿಯವರಾಗಿದ್ದು, ತಮಿಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ್ ನೀಧಿ ಮಯ್ಯಂಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಚುನಾವಣಾ ಪ್ರಚಾರ ಆರಂಭಿಸಿದ್ದ ವೇಳೆ ಪಕ್ಷದ ಮುಖಂಡ ಕಮಲ್ ಹಾಸನ್, ಪ್ರಚಾರ ಕಾರ್ಯಗಳಲ್ಲಿ ಅರುಣಾಚಲಂ ಅವರಿಗೆ ಪ್ರಾಮುಖ್ಯತೆ ನೀಡಲಾಗಿಲ್ಲ ಮತ್ತು ಕಮಲ್ ಹಾಸನ್ ಪಕ್ಷ ಮುನ್ನಡೆಸುತ್ತಿರುವ ಬಗ್ಗೆ ಇತರರಿಗೆ ಅಸಮಾಧಾನ ಇದೆ ಎಂದು ಮಾಹಿತಿ ದೊರೆತಿದೆ.

ಕಮಲ್ ಹಾಸನ್ ಈ ತಿಂಗಳ ಆರಂಭದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಈಗ ಎರಡನೇ ಹಂತದಲ್ಲಿದೆ ಪ್ರಚಾರ ಕಾರ್ಯ ನಡೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ತೀವ್ರ ಟೀಕೆ, ಆರೋಪಗಳನ್ನು ಮಾಡುತ್ತಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ಚುನಾವಣೆಗೆ  ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಎಲ್ಲ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ನಟ ರಜನಿಕಾಂತ್ ಇದೇ ತಿಂಗಳ ಅಂತ್ಯದಲ್ಲಿ ತಮ್ಮ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ.

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಯಾವುದೇ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿಲ್ಲ. ಆದರೆ, “ನಮ್ಮ ಸಿದ್ಧಾಂತವು ಹೊಂದಿಕೆಯಾಗುವಂತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ” ಎಂದು ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...