Homeಮುಖಪುಟಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ನನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ ಪೊಲೀಸರು ದೂರು ದಾಖಲಿಸುತ್ತಿಲ್ಲ- ಮೃತನ ಸಹೋದರ

- Advertisement -
- Advertisement -

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 28 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಮೃತ ಸಂಬಂಧಿಕರು ಇದು ಮರ್ಯಾದೆಗೇಡು ಹತ್ಯೆ ಎಂದು ಆರೋಪಿಸಿದಾರೆ. ಆದರೆ, ಪೊಲೀಸರು ಈ ಸಾವನ್ನು ಆತ್ಮಹತ್ಯೆ ಎಂದು ಹೇಳಿದ್ದಾರೆ.

ಮೃತ ಸುರೇಶ್ ಕುಮಾರ್ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣ ಇದು ಮರ್ಯಾದಗೇಡು ಹತ್ಯೆ, ಯುವತಿಯ ಸಂಬಂಧಿಕರೇ ಆತನನ್ನು ಕೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುರೇಶ್ ಕುಮಾರ್ ಮೃತದೇಹ ಸ್ವೀಕರಿಸಲು ನಿರಾಕರಿಸಿರುವ ಸಂಬಂಧಿಕರು ಕನ್ಯಾಕುಮಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೃತನ ಸಂಬಂಧಿಕರು ಭಾರತೀಯ ದಂಡ ಸಂಹಿತೆ (ಐಪಿಸಿ) 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಯುವತಿಯ ಎದುರೇ ಪ್ರಿಯಕರನ ಕೊಲೆ

ಮೃತ ಸುರೇಶ್ ಕುಮಾರ್ ಬಿಕಾಂ ಪದವೀಧರರಾಗಿದ್ದು, ಅವರು ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ ಬಳಿಯ ತೋವಲೈ ಪುದೂರಿನ ನಿವಾಸಿಯಾಗಿದ್ದಾರೆ. ಪೇಂಟಿಂಗ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಕಟ್ಟುಪುತ್ತೂರಿನ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದರು. ಯುವಕನ ಮೃತದೇಹ ಯುವತಿ ಮನೆಯಿಂದ ಕೆಲವೇ ಗಜಗಳಷ್ಟು ದೂರದಲ್ಲಿ ಪತ್ತೆಯಾಗಿದೆ.

ಮೃತರ ಸಹೋದರ ಎಸ್. ಸುಮನ್ ಆನಂದ್ ಮಾತನಾಡಿ, ’ಸುರೇಶ್ ಕಳೆದ ಎಂಟು ವರ್ಷಗಳಿಂದ ಕಟ್ಟುಪುತ್ತೂರು ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದರು. ಇಬ್ಬರು ಪದವಿಪೂರ್ವ ಕಾಲೇಜಿನ ವ್ಯಾಸಂಗ ಮಾಡುವ ಸಮಯದಲ್ಲಿ ಭೇಟಿಯಾಗಿದ್ದರು” ಎಂದಿದ್ದಾರೆ.

“ಯುವತಿಯ ಮನೆಯಲ್ಲಿ ಆಕೆಯ ಮದುವೆಗೆ ತಯಾರಿ ನಡೆಸುತ್ತಿದ್ದ ಕಾರಣ ಸೆಪ್ಟೆಂಬರ್‌ನಲ್ಲಿ, ನನ್ನ ಸಹೋದರ ಮತ್ತು ಆತನ ಸ್ನೇಹಿತ ಯುವತಿಯ ಕುಟುಂಬವನ್ನು ಭೇಟಿಯಾಗಿ ಮದುವೆಗೆ ಅನುಮತಿ ಕೇಳಲು ಹೋಗಿದ್ದರು. ಆಕೆಯ ಮನೆಯವರು ತಕ್ಷಣ ಪ್ರತಿಕ್ರಿಯಿಸದಿದ್ದರೂ, ಸಮಸ್ಯೆಯನ್ನು ಚರ್ಚಿಸಲು ನಮ್ಮನ್ನು ತಮ್ಮ ಸಮುದಾಯಕ್ಕೆ ಸೇರಿದ ವಕೀಲರ ಮನೆಗೆ ಕರೆದಿದ್ದರು. ಸೆಪ್ಟೆಂಬರ್ 18 ರಂದು ಪ್ರತಿ ಕುಟುಂಬದ ನಾಲ್ವರು ಸದಸ್ಯರು ವಕೀಲರ ಮನೆಯಲ್ಲಿ ಜಮಾಯಿಸಿದ್ದೇವು. ಸಭೆಯಲ್ಲಿ ಮಹಿಳೆಯ ಸಹೋದರರು ಸುರೇಶ್‌ಗೆ ತಮ್ಮ ಸಹೋದರಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಸುರೇಶ್‌ನ ಇನ್ನೊಬ್ಬ ಸಂಬಂಧಿ ರಾಧಿಕಾ ಮಾತನಾಡಿ, “ಆತನ ಸಾವಿಗೆ ಒಂದು ದಿನ ಮೊದಲು, ಯುವತಿಯ ಸಂಬಂಧಿ ಇಬ್ಬರನ್ನೂ ಒಟ್ಟಿಗೆ ಕಂಡರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಭಾನುವಾರ ಬೆಳಿಗ್ಗೆ ಯುವತಿಯ ಸಹೋದರ ಮತ್ತು ಪೊಲೀಸ್ ಅಧಿಕಾರಿ ನಮ್ಮ ಮನೆಗೆ ಭೇಟಿ ನೀಡಿದ್ದರು ಮತ್ತು ಬೂತಪಾಂಡಿ ಪೊಲೀಸ್ ಠಾಣೆಗೆ ತಕ್ಷಣ ಭೇಟಿ ನೀಡುವಂತೆ ಸುರೇಶ್ ಅವರಿಗೆ ತಿಳಿಸಿದ್ದರು” ಎಂದಿದ್ದಾರೆ.

ಸುರೇಶ್ ಅವರ ಬಳಿ ಯುವತಿಯ ಗುರುತಿನ ಚೀಟಿ ಸೇರಿದಂತೆ ದಾಖಲೆಗಳು ಇದ್ದವು. ಅದನ್ನು ಪೊಲೀಸರಿಗೆ ಹಸ್ತಾಂತರಿಸಲು ಮನೆಯಿಂದ ಹೋಗಿದ್ದರು. ಸಂಜೆಯಾದರೂ ಸುರೇಶ್ ಹಿಂತಿರುಗದ ಕಾರಣ, ನಾವು ಅವನನ್ನು ಹುಡುಕುತ್ತಾ ಪೊಲೀಸ್ ಠಾಣೆಗೆ ಹೋದೆವು, ಆದರೆ, ಪೊಲೀಸರು ಅವರು ಬಂದಿಲ್ಲ ಎಂದು ಹೇಳಿದರು. ನಂತರ, ನಾವು ಯುವತಿಯ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದೇವು. ಆದರೆ ಆಕೆಯ ಮನೆಗೆ ಕೆಲವು ಗಜಗಳಷ್ಟು ಮೊದಲೇ ನಾವು ಸುರೇಶನ ಬೈಕ್‌ ಸಿಕ್ಕಿತು. ಹತ್ತಿರದ ಜಮೀನಿನಲ್ಲಿ ಆತ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಕೂಡಲೇ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರೂ ಚಿಕಿತ್ಸೆ ನೀಡಲು ನಿರಾಕರಿಸಿದರು. ಆದ್ದರಿಂದ, ನಾವು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದೆವು, ಅಲ್ಲಿ ವೈದ್ಯರು ಸುರೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು” ಎಂದು ವಿವರವನ್ನು ಬಿಚ್ಚಿಟ್ಟಿದ್ದಾರೆ.

ಸುರೇಶ್ ಸಾವು ಮತ್ತು ನನ್ನ ಮೇಲಿನ ಹಲ್ಲೆಯ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ ಪೊಲೀಸರು ಎರಡೂ ದೂರುಗಳ ಮೇಲೆ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ. ತನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ, ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಕನ್ಯಾಕುಮಾರಿ ಎಸ್ಪಿ ವಿ ಬದ್ರಿ ನಾರಾಯಣನ್, “ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ನಮಗೆ ತಿಳಿಸಿದ್ದಾರೆ. ಹಾಗಾಗಿ ಐಪಿಸಿ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೆ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ, ವಿಭಾಗಗಳನ್ನು ಬದಲಾಯಿಸಬಹುದು” ಎಂದಿದ್ದಾರೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...