Homeಮುಖಪುಟಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ನನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ ಪೊಲೀಸರು ದೂರು ದಾಖಲಿಸುತ್ತಿಲ್ಲ- ಮೃತನ ಸಹೋದರ

- Advertisement -
- Advertisement -

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 28 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಮೃತ ಸಂಬಂಧಿಕರು ಇದು ಮರ್ಯಾದೆಗೇಡು ಹತ್ಯೆ ಎಂದು ಆರೋಪಿಸಿದಾರೆ. ಆದರೆ, ಪೊಲೀಸರು ಈ ಸಾವನ್ನು ಆತ್ಮಹತ್ಯೆ ಎಂದು ಹೇಳಿದ್ದಾರೆ.

ಮೃತ ಸುರೇಶ್ ಕುಮಾರ್ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣ ಇದು ಮರ್ಯಾದಗೇಡು ಹತ್ಯೆ, ಯುವತಿಯ ಸಂಬಂಧಿಕರೇ ಆತನನ್ನು ಕೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುರೇಶ್ ಕುಮಾರ್ ಮೃತದೇಹ ಸ್ವೀಕರಿಸಲು ನಿರಾಕರಿಸಿರುವ ಸಂಬಂಧಿಕರು ಕನ್ಯಾಕುಮಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೃತನ ಸಂಬಂಧಿಕರು ಭಾರತೀಯ ದಂಡ ಸಂಹಿತೆ (ಐಪಿಸಿ) 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಯುವತಿಯ ಎದುರೇ ಪ್ರಿಯಕರನ ಕೊಲೆ

ಮೃತ ಸುರೇಶ್ ಕುಮಾರ್ ಬಿಕಾಂ ಪದವೀಧರರಾಗಿದ್ದು, ಅವರು ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ ಬಳಿಯ ತೋವಲೈ ಪುದೂರಿನ ನಿವಾಸಿಯಾಗಿದ್ದಾರೆ. ಪೇಂಟಿಂಗ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಕಟ್ಟುಪುತ್ತೂರಿನ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದರು. ಯುವಕನ ಮೃತದೇಹ ಯುವತಿ ಮನೆಯಿಂದ ಕೆಲವೇ ಗಜಗಳಷ್ಟು ದೂರದಲ್ಲಿ ಪತ್ತೆಯಾಗಿದೆ.

ಮೃತರ ಸಹೋದರ ಎಸ್. ಸುಮನ್ ಆನಂದ್ ಮಾತನಾಡಿ, ’ಸುರೇಶ್ ಕಳೆದ ಎಂಟು ವರ್ಷಗಳಿಂದ ಕಟ್ಟುಪುತ್ತೂರು ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದರು. ಇಬ್ಬರು ಪದವಿಪೂರ್ವ ಕಾಲೇಜಿನ ವ್ಯಾಸಂಗ ಮಾಡುವ ಸಮಯದಲ್ಲಿ ಭೇಟಿಯಾಗಿದ್ದರು” ಎಂದಿದ್ದಾರೆ.

“ಯುವತಿಯ ಮನೆಯಲ್ಲಿ ಆಕೆಯ ಮದುವೆಗೆ ತಯಾರಿ ನಡೆಸುತ್ತಿದ್ದ ಕಾರಣ ಸೆಪ್ಟೆಂಬರ್‌ನಲ್ಲಿ, ನನ್ನ ಸಹೋದರ ಮತ್ತು ಆತನ ಸ್ನೇಹಿತ ಯುವತಿಯ ಕುಟುಂಬವನ್ನು ಭೇಟಿಯಾಗಿ ಮದುವೆಗೆ ಅನುಮತಿ ಕೇಳಲು ಹೋಗಿದ್ದರು. ಆಕೆಯ ಮನೆಯವರು ತಕ್ಷಣ ಪ್ರತಿಕ್ರಿಯಿಸದಿದ್ದರೂ, ಸಮಸ್ಯೆಯನ್ನು ಚರ್ಚಿಸಲು ನಮ್ಮನ್ನು ತಮ್ಮ ಸಮುದಾಯಕ್ಕೆ ಸೇರಿದ ವಕೀಲರ ಮನೆಗೆ ಕರೆದಿದ್ದರು. ಸೆಪ್ಟೆಂಬರ್ 18 ರಂದು ಪ್ರತಿ ಕುಟುಂಬದ ನಾಲ್ವರು ಸದಸ್ಯರು ವಕೀಲರ ಮನೆಯಲ್ಲಿ ಜಮಾಯಿಸಿದ್ದೇವು. ಸಭೆಯಲ್ಲಿ ಮಹಿಳೆಯ ಸಹೋದರರು ಸುರೇಶ್‌ಗೆ ತಮ್ಮ ಸಹೋದರಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಸುರೇಶ್‌ನ ಇನ್ನೊಬ್ಬ ಸಂಬಂಧಿ ರಾಧಿಕಾ ಮಾತನಾಡಿ, “ಆತನ ಸಾವಿಗೆ ಒಂದು ದಿನ ಮೊದಲು, ಯುವತಿಯ ಸಂಬಂಧಿ ಇಬ್ಬರನ್ನೂ ಒಟ್ಟಿಗೆ ಕಂಡರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಭಾನುವಾರ ಬೆಳಿಗ್ಗೆ ಯುವತಿಯ ಸಹೋದರ ಮತ್ತು ಪೊಲೀಸ್ ಅಧಿಕಾರಿ ನಮ್ಮ ಮನೆಗೆ ಭೇಟಿ ನೀಡಿದ್ದರು ಮತ್ತು ಬೂತಪಾಂಡಿ ಪೊಲೀಸ್ ಠಾಣೆಗೆ ತಕ್ಷಣ ಭೇಟಿ ನೀಡುವಂತೆ ಸುರೇಶ್ ಅವರಿಗೆ ತಿಳಿಸಿದ್ದರು” ಎಂದಿದ್ದಾರೆ.

ಸುರೇಶ್ ಅವರ ಬಳಿ ಯುವತಿಯ ಗುರುತಿನ ಚೀಟಿ ಸೇರಿದಂತೆ ದಾಖಲೆಗಳು ಇದ್ದವು. ಅದನ್ನು ಪೊಲೀಸರಿಗೆ ಹಸ್ತಾಂತರಿಸಲು ಮನೆಯಿಂದ ಹೋಗಿದ್ದರು. ಸಂಜೆಯಾದರೂ ಸುರೇಶ್ ಹಿಂತಿರುಗದ ಕಾರಣ, ನಾವು ಅವನನ್ನು ಹುಡುಕುತ್ತಾ ಪೊಲೀಸ್ ಠಾಣೆಗೆ ಹೋದೆವು, ಆದರೆ, ಪೊಲೀಸರು ಅವರು ಬಂದಿಲ್ಲ ಎಂದು ಹೇಳಿದರು. ನಂತರ, ನಾವು ಯುವತಿಯ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದೇವು. ಆದರೆ ಆಕೆಯ ಮನೆಗೆ ಕೆಲವು ಗಜಗಳಷ್ಟು ಮೊದಲೇ ನಾವು ಸುರೇಶನ ಬೈಕ್‌ ಸಿಕ್ಕಿತು. ಹತ್ತಿರದ ಜಮೀನಿನಲ್ಲಿ ಆತ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಕೂಡಲೇ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರೂ ಚಿಕಿತ್ಸೆ ನೀಡಲು ನಿರಾಕರಿಸಿದರು. ಆದ್ದರಿಂದ, ನಾವು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದೆವು, ಅಲ್ಲಿ ವೈದ್ಯರು ಸುರೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು” ಎಂದು ವಿವರವನ್ನು ಬಿಚ್ಚಿಟ್ಟಿದ್ದಾರೆ.

ಸುರೇಶ್ ಸಾವು ಮತ್ತು ನನ್ನ ಮೇಲಿನ ಹಲ್ಲೆಯ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ ಪೊಲೀಸರು ಎರಡೂ ದೂರುಗಳ ಮೇಲೆ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ. ತನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ, ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಕನ್ಯಾಕುಮಾರಿ ಎಸ್ಪಿ ವಿ ಬದ್ರಿ ನಾರಾಯಣನ್, “ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ನಮಗೆ ತಿಳಿಸಿದ್ದಾರೆ. ಹಾಗಾಗಿ ಐಪಿಸಿ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೆ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ, ವಿಭಾಗಗಳನ್ನು ಬದಲಾಯಿಸಬಹುದು” ಎಂದಿದ್ದಾರೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...