Homeಮುಖಪುಟಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ನನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ ಪೊಲೀಸರು ದೂರು ದಾಖಲಿಸುತ್ತಿಲ್ಲ- ಮೃತನ ಸಹೋದರ

- Advertisement -
- Advertisement -

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 28 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಮೃತ ಸಂಬಂಧಿಕರು ಇದು ಮರ್ಯಾದೆಗೇಡು ಹತ್ಯೆ ಎಂದು ಆರೋಪಿಸಿದಾರೆ. ಆದರೆ, ಪೊಲೀಸರು ಈ ಸಾವನ್ನು ಆತ್ಮಹತ್ಯೆ ಎಂದು ಹೇಳಿದ್ದಾರೆ.

ಮೃತ ಸುರೇಶ್ ಕುಮಾರ್ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣ ಇದು ಮರ್ಯಾದಗೇಡು ಹತ್ಯೆ, ಯುವತಿಯ ಸಂಬಂಧಿಕರೇ ಆತನನ್ನು ಕೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುರೇಶ್ ಕುಮಾರ್ ಮೃತದೇಹ ಸ್ವೀಕರಿಸಲು ನಿರಾಕರಿಸಿರುವ ಸಂಬಂಧಿಕರು ಕನ್ಯಾಕುಮಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೃತನ ಸಂಬಂಧಿಕರು ಭಾರತೀಯ ದಂಡ ಸಂಹಿತೆ (ಐಪಿಸಿ) 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಯುವತಿಯ ಎದುರೇ ಪ್ರಿಯಕರನ ಕೊಲೆ

ಮೃತ ಸುರೇಶ್ ಕುಮಾರ್ ಬಿಕಾಂ ಪದವೀಧರರಾಗಿದ್ದು, ಅವರು ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ ಬಳಿಯ ತೋವಲೈ ಪುದೂರಿನ ನಿವಾಸಿಯಾಗಿದ್ದಾರೆ. ಪೇಂಟಿಂಗ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಕಟ್ಟುಪುತ್ತೂರಿನ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದರು. ಯುವಕನ ಮೃತದೇಹ ಯುವತಿ ಮನೆಯಿಂದ ಕೆಲವೇ ಗಜಗಳಷ್ಟು ದೂರದಲ್ಲಿ ಪತ್ತೆಯಾಗಿದೆ.

ಮೃತರ ಸಹೋದರ ಎಸ್. ಸುಮನ್ ಆನಂದ್ ಮಾತನಾಡಿ, ’ಸುರೇಶ್ ಕಳೆದ ಎಂಟು ವರ್ಷಗಳಿಂದ ಕಟ್ಟುಪುತ್ತೂರು ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದರು. ಇಬ್ಬರು ಪದವಿಪೂರ್ವ ಕಾಲೇಜಿನ ವ್ಯಾಸಂಗ ಮಾಡುವ ಸಮಯದಲ್ಲಿ ಭೇಟಿಯಾಗಿದ್ದರು” ಎಂದಿದ್ದಾರೆ.

“ಯುವತಿಯ ಮನೆಯಲ್ಲಿ ಆಕೆಯ ಮದುವೆಗೆ ತಯಾರಿ ನಡೆಸುತ್ತಿದ್ದ ಕಾರಣ ಸೆಪ್ಟೆಂಬರ್‌ನಲ್ಲಿ, ನನ್ನ ಸಹೋದರ ಮತ್ತು ಆತನ ಸ್ನೇಹಿತ ಯುವತಿಯ ಕುಟುಂಬವನ್ನು ಭೇಟಿಯಾಗಿ ಮದುವೆಗೆ ಅನುಮತಿ ಕೇಳಲು ಹೋಗಿದ್ದರು. ಆಕೆಯ ಮನೆಯವರು ತಕ್ಷಣ ಪ್ರತಿಕ್ರಿಯಿಸದಿದ್ದರೂ, ಸಮಸ್ಯೆಯನ್ನು ಚರ್ಚಿಸಲು ನಮ್ಮನ್ನು ತಮ್ಮ ಸಮುದಾಯಕ್ಕೆ ಸೇರಿದ ವಕೀಲರ ಮನೆಗೆ ಕರೆದಿದ್ದರು. ಸೆಪ್ಟೆಂಬರ್ 18 ರಂದು ಪ್ರತಿ ಕುಟುಂಬದ ನಾಲ್ವರು ಸದಸ್ಯರು ವಕೀಲರ ಮನೆಯಲ್ಲಿ ಜಮಾಯಿಸಿದ್ದೇವು. ಸಭೆಯಲ್ಲಿ ಮಹಿಳೆಯ ಸಹೋದರರು ಸುರೇಶ್‌ಗೆ ತಮ್ಮ ಸಹೋದರಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಸುರೇಶ್‌ನ ಇನ್ನೊಬ್ಬ ಸಂಬಂಧಿ ರಾಧಿಕಾ ಮಾತನಾಡಿ, “ಆತನ ಸಾವಿಗೆ ಒಂದು ದಿನ ಮೊದಲು, ಯುವತಿಯ ಸಂಬಂಧಿ ಇಬ್ಬರನ್ನೂ ಒಟ್ಟಿಗೆ ಕಂಡರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಭಾನುವಾರ ಬೆಳಿಗ್ಗೆ ಯುವತಿಯ ಸಹೋದರ ಮತ್ತು ಪೊಲೀಸ್ ಅಧಿಕಾರಿ ನಮ್ಮ ಮನೆಗೆ ಭೇಟಿ ನೀಡಿದ್ದರು ಮತ್ತು ಬೂತಪಾಂಡಿ ಪೊಲೀಸ್ ಠಾಣೆಗೆ ತಕ್ಷಣ ಭೇಟಿ ನೀಡುವಂತೆ ಸುರೇಶ್ ಅವರಿಗೆ ತಿಳಿಸಿದ್ದರು” ಎಂದಿದ್ದಾರೆ.

ಸುರೇಶ್ ಅವರ ಬಳಿ ಯುವತಿಯ ಗುರುತಿನ ಚೀಟಿ ಸೇರಿದಂತೆ ದಾಖಲೆಗಳು ಇದ್ದವು. ಅದನ್ನು ಪೊಲೀಸರಿಗೆ ಹಸ್ತಾಂತರಿಸಲು ಮನೆಯಿಂದ ಹೋಗಿದ್ದರು. ಸಂಜೆಯಾದರೂ ಸುರೇಶ್ ಹಿಂತಿರುಗದ ಕಾರಣ, ನಾವು ಅವನನ್ನು ಹುಡುಕುತ್ತಾ ಪೊಲೀಸ್ ಠಾಣೆಗೆ ಹೋದೆವು, ಆದರೆ, ಪೊಲೀಸರು ಅವರು ಬಂದಿಲ್ಲ ಎಂದು ಹೇಳಿದರು. ನಂತರ, ನಾವು ಯುವತಿಯ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದೇವು. ಆದರೆ ಆಕೆಯ ಮನೆಗೆ ಕೆಲವು ಗಜಗಳಷ್ಟು ಮೊದಲೇ ನಾವು ಸುರೇಶನ ಬೈಕ್‌ ಸಿಕ್ಕಿತು. ಹತ್ತಿರದ ಜಮೀನಿನಲ್ಲಿ ಆತ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಕೂಡಲೇ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರೂ ಚಿಕಿತ್ಸೆ ನೀಡಲು ನಿರಾಕರಿಸಿದರು. ಆದ್ದರಿಂದ, ನಾವು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದೆವು, ಅಲ್ಲಿ ವೈದ್ಯರು ಸುರೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು” ಎಂದು ವಿವರವನ್ನು ಬಿಚ್ಚಿಟ್ಟಿದ್ದಾರೆ.

ಸುರೇಶ್ ಸಾವು ಮತ್ತು ನನ್ನ ಮೇಲಿನ ಹಲ್ಲೆಯ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ ಪೊಲೀಸರು ಎರಡೂ ದೂರುಗಳ ಮೇಲೆ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ. ತನ್ನ ಸಹೋದರನ ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಕಂಡುಬಂದರೂ ಸಹ, ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಕನ್ಯಾಕುಮಾರಿ ಎಸ್ಪಿ ವಿ ಬದ್ರಿ ನಾರಾಯಣನ್, “ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ನಮಗೆ ತಿಳಿಸಿದ್ದಾರೆ. ಹಾಗಾಗಿ ಐಪಿಸಿ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೆ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ, ವಿಭಾಗಗಳನ್ನು ಬದಲಾಯಿಸಬಹುದು” ಎಂದಿದ್ದಾರೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...