Homeಮುಖಪುಟತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

- Advertisement -
- Advertisement -

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ನ್ಯೂಸ್‌18 ಮಾಧ್ಯಮ ಗುಂಪಿಗೆ ಲೀಗಲ್‌ ನೋಟೀಸ್‌ ಕಳುಹಿಸಿದ್ದು, ಮಾರ್ಚ್ 7ರಂದು ಪ್ರಕಟವಾದ ಸುದ್ದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 7ರಂದು ‘ಶಶಿಕಲಾ ಒಗ್ಗಟ್ಟಿನ ಬಿಕ್ಕಟ್ಟು… ಪಳನಿಸ್ವಾಮಿ ಪ್ರತ್ಯೇಕ ಪಕ್ಷವನ್ನು ಆರಂಭಿಸುತ್ತಿದ್ದಾರೆಯೇ?’ ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸಿದ್ದಕ್ಕಾಗಿ ನ್ಯೂಸ್ 18 ಮಾಧ್ಯಮ ಗುಂಪಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ವರದಿಯು ಸುಳ್ಳು, ಕ್ಷುಲ್ಲಕ ಮತ್ತು ಅವಹೇಳನಕಾರಿಯಾಗಿದೆ ಎಂದು ಪಳನಿಸ್ವಾಮಿ ಆರೋಪಿಸಿದ್ದು, ಟಿವಿ 18 ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ನ್ಯೂಸ್ 18ಗೆ ಸೂಚನೆಯನ್ನು ನೀಡಲಾಗಿದೆ. ಈ ಸುದ್ದಿಯನ್ನು ‘ನ್ಯೂಸ್ 18 ತಮಿಳು ವೆಬ್‌ಸೈಟ್‌’ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯು ಪಕ್ಷದ (ಎಐಎಡಿಎಂಕೆ) ಕಾರ್ಯಕರ್ತರಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಕೂಡಿದೆ. ಸುದ್ದಿಯನ್ನು ಪ್ರಕಟಿಸುವ ಮೊದಲು, ಸುದ್ದಿಯ ಸತ್ಯಾಸತ್ಯೆಯನ್ನು ಸಂಬಂಧಪಟ್ಟರಿಂದ ಪರಿಶೀಲಿಸಲಾಗಿಲ್ಲ ಎಂದು ಆಕ್ಷೇಪಿಸಲಾಗಿದೆ. ಸಂಸ್ಥೆಯು ಎಚ್ಚರಿಕೆ ವಹಿಸದೆ ಪಳನಿಸ್ವಾಮಿಯವರ ಪ್ರತಿಷ್ಠೆಗೆ ತೊಂದರೆಯುಂಟು ಮಾಡಿದೆ ಎಂದು ದೂರಲಾಗಿದೆ.

ಪಳನಿಸ್ವಾಮಿ ಅವರು ತಮ್ಮ ನೋಟಿಸ್‌ನಲ್ಲಿ, ಸುದ್ದಿಯಲ್ಲಿನ ಹಲವಾರು ವಿಷಯಗಳತ್ತ ಬೆರಳು ತೋರಿಸಿದ್ದಾರೆ. “ಪಕ್ಷದ ಕಾರ್ಯಕರ್ತರಲ್ಲಿ, ಸಾರ್ವಜನಿಕರ ಮನಸ್ಸಿನಲ್ಲಿ ಈ ಸುದ್ದಿಯು ಗೊಂದಲ ಮೂಡಿಸಿದೆ. ನನಗೆ ಹಾಗೂ ಪಕ್ಷದ ಪ್ರತಿಷ್ಠೆಗೆ ಅಡ್ಡಿಪಡಿಸಿದೆ” ಎಂದಿದ್ದಾರೆ.

“ಅವಹೇಳನಕಾರಿ, ಆಧಾರ ರಹಿತ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ತಮ್ಮ ಎಲ್ಲಾ ಚಾನೆಲ್‌, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಸುದ್ದಿಯನ್ನು ತೆಗೆದುಹಾಕಬೇಕು, ಬೇರೆ ಮಾಧ್ಯಮಗಳು ಈ ಸುದ್ದಿಯನ್ನು ಉಲ್ಲೇಖಿಸುವುದನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ 18 ಸಂಸ್ಥೆಯು ಒಂದು ವೇಳೆ ಈ ಕೆಲಸವನ್ನು ಮಾಡುವಲ್ಲಿ ವಿಫಲವಾದಲ್ಲಿ ಮುಂದೆ ಯಾವುದೇ ಸೂಚನೆ ನೀಡದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಳನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಪಳನಿಸ್ವಾಮಿ ಪರ ವಕೀಲ ಎಸ್‌ಆರ್‌ ರಾಜಗೋಪಾಲ್‌ ಅವರು ನೋಟಿಸ್‌ ಕಳುಹಿಸಿದ್ದಾರೆ.

ನ್ಯೂಸ್‌18 ಸಂಸ್ಥೆಗಿದೆ ಕ್ಷಮೆಯಾಚಿಸಿದ ಇತಿಹಾಸ

ನ್ಯೂಸ್‌18 ಸಂಸ್ಥೆಯ ಕನ್ನಡ ಆವೃತ್ತಿಯು ಈ ಹಿಂದೆ ಕ್ಷಮೆಯಾಚಿಸಿತ್ತು. ಕೊರೊನಾ ಒಂದನೆ ಅಲೆಯ ಸಮಯದಲ್ಲಿ ‘ತಬ್ಲೀಘಿ ಜಮಾಅತ್‌‌’ ವಿರುದ್ದ ಅಪಪ್ರಚಾರ ಮಾಡಿದ್ದಕ್ಕೆ ‘ನ್ಯೂಸ್ 18 ಕನ್ನಡ’ ಚಾನೆಲ್‌‌‌ ಕ್ಷಮೆ ಕೇಳಿತ್ತು. ಕೊರೊನಾ ಹರಡುವಿಕೆಗೆ ‘ಒಂದು ಸಮುದಾಯ ಕಾರಣ’ ಎಂಬಂತೆ ಬಿಂಬಿಸಿ ಹಲವು ಚಾನೆಲ್‌ಗಳು ದ್ವೇಷ ಹರಡಿದ್ದವು. ಈ ಚಾನೆಲ್‌ಗಳ ವಿರುದ್ದ, ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದ ಅಭಿಯಾನದ ತಂಡವು ನಡೆಸಿದ ಹೋರಾಟಕ್ಕೆ ಗೆಲುವು ದೊರೆತ್ತಿತ್ತು.

‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ್ದ NBSA, ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ 1 ಲಕ್ಷ ದಂಡ ವಿಧಿಸಿತ್ತು. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿತ್ತು. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಆದೇಶಿಸಿತ್ತು.

ಅದು ತನ್ನ ವಿಷಾದ ಸಂದೇಶದಲ್ಲಿ, “ನ್ಯೂಸ್‌18 ಕನ್ನಡವು 1-4-2020 ರಂದು ಪ್ರಸಾರ ಮಾಡಿದ ‘ದೇಶಕ್ಕೆ ಕೊರೊನಾ ವೈರಸ್ ಹಬ್ಬಿಸಿದ ದೆಹಲಿ ನಿಝಾಮುದ್ದೀನ್ ಹೇಗಿದೆ ಗೊತ್ತಾ?’ ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್‌ ಸಭೆಗೆ ಹೋದವರ ಸಂಖ್ಯೆ ಎಷ್ಟು?’ ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಹಾಗೂ ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷತೆ, ವಸ್ತುನಿಷ್ಠತೆ ಹಾಗೂ ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೇಳಿತ್ತು.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...