Homeಮುಖಪುಟತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

- Advertisement -
- Advertisement -

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ನ್ಯೂಸ್‌18 ಮಾಧ್ಯಮ ಗುಂಪಿಗೆ ಲೀಗಲ್‌ ನೋಟೀಸ್‌ ಕಳುಹಿಸಿದ್ದು, ಮಾರ್ಚ್ 7ರಂದು ಪ್ರಕಟವಾದ ಸುದ್ದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 7ರಂದು ‘ಶಶಿಕಲಾ ಒಗ್ಗಟ್ಟಿನ ಬಿಕ್ಕಟ್ಟು… ಪಳನಿಸ್ವಾಮಿ ಪ್ರತ್ಯೇಕ ಪಕ್ಷವನ್ನು ಆರಂಭಿಸುತ್ತಿದ್ದಾರೆಯೇ?’ ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸಿದ್ದಕ್ಕಾಗಿ ನ್ಯೂಸ್ 18 ಮಾಧ್ಯಮ ಗುಂಪಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ವರದಿಯು ಸುಳ್ಳು, ಕ್ಷುಲ್ಲಕ ಮತ್ತು ಅವಹೇಳನಕಾರಿಯಾಗಿದೆ ಎಂದು ಪಳನಿಸ್ವಾಮಿ ಆರೋಪಿಸಿದ್ದು, ಟಿವಿ 18 ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ನ್ಯೂಸ್ 18ಗೆ ಸೂಚನೆಯನ್ನು ನೀಡಲಾಗಿದೆ. ಈ ಸುದ್ದಿಯನ್ನು ‘ನ್ಯೂಸ್ 18 ತಮಿಳು ವೆಬ್‌ಸೈಟ್‌’ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯು ಪಕ್ಷದ (ಎಐಎಡಿಎಂಕೆ) ಕಾರ್ಯಕರ್ತರಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಕೂಡಿದೆ. ಸುದ್ದಿಯನ್ನು ಪ್ರಕಟಿಸುವ ಮೊದಲು, ಸುದ್ದಿಯ ಸತ್ಯಾಸತ್ಯೆಯನ್ನು ಸಂಬಂಧಪಟ್ಟರಿಂದ ಪರಿಶೀಲಿಸಲಾಗಿಲ್ಲ ಎಂದು ಆಕ್ಷೇಪಿಸಲಾಗಿದೆ. ಸಂಸ್ಥೆಯು ಎಚ್ಚರಿಕೆ ವಹಿಸದೆ ಪಳನಿಸ್ವಾಮಿಯವರ ಪ್ರತಿಷ್ಠೆಗೆ ತೊಂದರೆಯುಂಟು ಮಾಡಿದೆ ಎಂದು ದೂರಲಾಗಿದೆ.

ಪಳನಿಸ್ವಾಮಿ ಅವರು ತಮ್ಮ ನೋಟಿಸ್‌ನಲ್ಲಿ, ಸುದ್ದಿಯಲ್ಲಿನ ಹಲವಾರು ವಿಷಯಗಳತ್ತ ಬೆರಳು ತೋರಿಸಿದ್ದಾರೆ. “ಪಕ್ಷದ ಕಾರ್ಯಕರ್ತರಲ್ಲಿ, ಸಾರ್ವಜನಿಕರ ಮನಸ್ಸಿನಲ್ಲಿ ಈ ಸುದ್ದಿಯು ಗೊಂದಲ ಮೂಡಿಸಿದೆ. ನನಗೆ ಹಾಗೂ ಪಕ್ಷದ ಪ್ರತಿಷ್ಠೆಗೆ ಅಡ್ಡಿಪಡಿಸಿದೆ” ಎಂದಿದ್ದಾರೆ.

“ಅವಹೇಳನಕಾರಿ, ಆಧಾರ ರಹಿತ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ತಮ್ಮ ಎಲ್ಲಾ ಚಾನೆಲ್‌, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಸುದ್ದಿಯನ್ನು ತೆಗೆದುಹಾಕಬೇಕು, ಬೇರೆ ಮಾಧ್ಯಮಗಳು ಈ ಸುದ್ದಿಯನ್ನು ಉಲ್ಲೇಖಿಸುವುದನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ 18 ಸಂಸ್ಥೆಯು ಒಂದು ವೇಳೆ ಈ ಕೆಲಸವನ್ನು ಮಾಡುವಲ್ಲಿ ವಿಫಲವಾದಲ್ಲಿ ಮುಂದೆ ಯಾವುದೇ ಸೂಚನೆ ನೀಡದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಳನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಪಳನಿಸ್ವಾಮಿ ಪರ ವಕೀಲ ಎಸ್‌ಆರ್‌ ರಾಜಗೋಪಾಲ್‌ ಅವರು ನೋಟಿಸ್‌ ಕಳುಹಿಸಿದ್ದಾರೆ.

ನ್ಯೂಸ್‌18 ಸಂಸ್ಥೆಗಿದೆ ಕ್ಷಮೆಯಾಚಿಸಿದ ಇತಿಹಾಸ

ನ್ಯೂಸ್‌18 ಸಂಸ್ಥೆಯ ಕನ್ನಡ ಆವೃತ್ತಿಯು ಈ ಹಿಂದೆ ಕ್ಷಮೆಯಾಚಿಸಿತ್ತು. ಕೊರೊನಾ ಒಂದನೆ ಅಲೆಯ ಸಮಯದಲ್ಲಿ ‘ತಬ್ಲೀಘಿ ಜಮಾಅತ್‌‌’ ವಿರುದ್ದ ಅಪಪ್ರಚಾರ ಮಾಡಿದ್ದಕ್ಕೆ ‘ನ್ಯೂಸ್ 18 ಕನ್ನಡ’ ಚಾನೆಲ್‌‌‌ ಕ್ಷಮೆ ಕೇಳಿತ್ತು. ಕೊರೊನಾ ಹರಡುವಿಕೆಗೆ ‘ಒಂದು ಸಮುದಾಯ ಕಾರಣ’ ಎಂಬಂತೆ ಬಿಂಬಿಸಿ ಹಲವು ಚಾನೆಲ್‌ಗಳು ದ್ವೇಷ ಹರಡಿದ್ದವು. ಈ ಚಾನೆಲ್‌ಗಳ ವಿರುದ್ದ, ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದ ಅಭಿಯಾನದ ತಂಡವು ನಡೆಸಿದ ಹೋರಾಟಕ್ಕೆ ಗೆಲುವು ದೊರೆತ್ತಿತ್ತು.

‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ್ದ NBSA, ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ 1 ಲಕ್ಷ ದಂಡ ವಿಧಿಸಿತ್ತು. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿತ್ತು. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಆದೇಶಿಸಿತ್ತು.

ಅದು ತನ್ನ ವಿಷಾದ ಸಂದೇಶದಲ್ಲಿ, “ನ್ಯೂಸ್‌18 ಕನ್ನಡವು 1-4-2020 ರಂದು ಪ್ರಸಾರ ಮಾಡಿದ ‘ದೇಶಕ್ಕೆ ಕೊರೊನಾ ವೈರಸ್ ಹಬ್ಬಿಸಿದ ದೆಹಲಿ ನಿಝಾಮುದ್ದೀನ್ ಹೇಗಿದೆ ಗೊತ್ತಾ?’ ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್‌ ಸಭೆಗೆ ಹೋದವರ ಸಂಖ್ಯೆ ಎಷ್ಟು?’ ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಹಾಗೂ ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷತೆ, ವಸ್ತುನಿಷ್ಠತೆ ಹಾಗೂ ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೇಳಿತ್ತು.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...