Homeಮುಖಪುಟತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

- Advertisement -
- Advertisement -

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ನ್ಯೂಸ್‌18 ಮಾಧ್ಯಮ ಗುಂಪಿಗೆ ಲೀಗಲ್‌ ನೋಟೀಸ್‌ ಕಳುಹಿಸಿದ್ದು, ಮಾರ್ಚ್ 7ರಂದು ಪ್ರಕಟವಾದ ಸುದ್ದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 7ರಂದು ‘ಶಶಿಕಲಾ ಒಗ್ಗಟ್ಟಿನ ಬಿಕ್ಕಟ್ಟು… ಪಳನಿಸ್ವಾಮಿ ಪ್ರತ್ಯೇಕ ಪಕ್ಷವನ್ನು ಆರಂಭಿಸುತ್ತಿದ್ದಾರೆಯೇ?’ ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸಿದ್ದಕ್ಕಾಗಿ ನ್ಯೂಸ್ 18 ಮಾಧ್ಯಮ ಗುಂಪಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ವರದಿಯು ಸುಳ್ಳು, ಕ್ಷುಲ್ಲಕ ಮತ್ತು ಅವಹೇಳನಕಾರಿಯಾಗಿದೆ ಎಂದು ಪಳನಿಸ್ವಾಮಿ ಆರೋಪಿಸಿದ್ದು, ಟಿವಿ 18 ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ನ್ಯೂಸ್ 18ಗೆ ಸೂಚನೆಯನ್ನು ನೀಡಲಾಗಿದೆ. ಈ ಸುದ್ದಿಯನ್ನು ‘ನ್ಯೂಸ್ 18 ತಮಿಳು ವೆಬ್‌ಸೈಟ್‌’ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯು ಪಕ್ಷದ (ಎಐಎಡಿಎಂಕೆ) ಕಾರ್ಯಕರ್ತರಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಕೂಡಿದೆ. ಸುದ್ದಿಯನ್ನು ಪ್ರಕಟಿಸುವ ಮೊದಲು, ಸುದ್ದಿಯ ಸತ್ಯಾಸತ್ಯೆಯನ್ನು ಸಂಬಂಧಪಟ್ಟರಿಂದ ಪರಿಶೀಲಿಸಲಾಗಿಲ್ಲ ಎಂದು ಆಕ್ಷೇಪಿಸಲಾಗಿದೆ. ಸಂಸ್ಥೆಯು ಎಚ್ಚರಿಕೆ ವಹಿಸದೆ ಪಳನಿಸ್ವಾಮಿಯವರ ಪ್ರತಿಷ್ಠೆಗೆ ತೊಂದರೆಯುಂಟು ಮಾಡಿದೆ ಎಂದು ದೂರಲಾಗಿದೆ.

ಪಳನಿಸ್ವಾಮಿ ಅವರು ತಮ್ಮ ನೋಟಿಸ್‌ನಲ್ಲಿ, ಸುದ್ದಿಯಲ್ಲಿನ ಹಲವಾರು ವಿಷಯಗಳತ್ತ ಬೆರಳು ತೋರಿಸಿದ್ದಾರೆ. “ಪಕ್ಷದ ಕಾರ್ಯಕರ್ತರಲ್ಲಿ, ಸಾರ್ವಜನಿಕರ ಮನಸ್ಸಿನಲ್ಲಿ ಈ ಸುದ್ದಿಯು ಗೊಂದಲ ಮೂಡಿಸಿದೆ. ನನಗೆ ಹಾಗೂ ಪಕ್ಷದ ಪ್ರತಿಷ್ಠೆಗೆ ಅಡ್ಡಿಪಡಿಸಿದೆ” ಎಂದಿದ್ದಾರೆ.

“ಅವಹೇಳನಕಾರಿ, ಆಧಾರ ರಹಿತ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ತಮ್ಮ ಎಲ್ಲಾ ಚಾನೆಲ್‌, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಸುದ್ದಿಯನ್ನು ತೆಗೆದುಹಾಕಬೇಕು, ಬೇರೆ ಮಾಧ್ಯಮಗಳು ಈ ಸುದ್ದಿಯನ್ನು ಉಲ್ಲೇಖಿಸುವುದನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ 18 ಸಂಸ್ಥೆಯು ಒಂದು ವೇಳೆ ಈ ಕೆಲಸವನ್ನು ಮಾಡುವಲ್ಲಿ ವಿಫಲವಾದಲ್ಲಿ ಮುಂದೆ ಯಾವುದೇ ಸೂಚನೆ ನೀಡದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಳನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಪಳನಿಸ್ವಾಮಿ ಪರ ವಕೀಲ ಎಸ್‌ಆರ್‌ ರಾಜಗೋಪಾಲ್‌ ಅವರು ನೋಟಿಸ್‌ ಕಳುಹಿಸಿದ್ದಾರೆ.

ನ್ಯೂಸ್‌18 ಸಂಸ್ಥೆಗಿದೆ ಕ್ಷಮೆಯಾಚಿಸಿದ ಇತಿಹಾಸ

ನ್ಯೂಸ್‌18 ಸಂಸ್ಥೆಯ ಕನ್ನಡ ಆವೃತ್ತಿಯು ಈ ಹಿಂದೆ ಕ್ಷಮೆಯಾಚಿಸಿತ್ತು. ಕೊರೊನಾ ಒಂದನೆ ಅಲೆಯ ಸಮಯದಲ್ಲಿ ‘ತಬ್ಲೀಘಿ ಜಮಾಅತ್‌‌’ ವಿರುದ್ದ ಅಪಪ್ರಚಾರ ಮಾಡಿದ್ದಕ್ಕೆ ‘ನ್ಯೂಸ್ 18 ಕನ್ನಡ’ ಚಾನೆಲ್‌‌‌ ಕ್ಷಮೆ ಕೇಳಿತ್ತು. ಕೊರೊನಾ ಹರಡುವಿಕೆಗೆ ‘ಒಂದು ಸಮುದಾಯ ಕಾರಣ’ ಎಂಬಂತೆ ಬಿಂಬಿಸಿ ಹಲವು ಚಾನೆಲ್‌ಗಳು ದ್ವೇಷ ಹರಡಿದ್ದವು. ಈ ಚಾನೆಲ್‌ಗಳ ವಿರುದ್ದ, ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದ ಅಭಿಯಾನದ ತಂಡವು ನಡೆಸಿದ ಹೋರಾಟಕ್ಕೆ ಗೆಲುವು ದೊರೆತ್ತಿತ್ತು.

‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ್ದ NBSA, ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ 1 ಲಕ್ಷ ದಂಡ ವಿಧಿಸಿತ್ತು. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿತ್ತು. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಆದೇಶಿಸಿತ್ತು.

ಅದು ತನ್ನ ವಿಷಾದ ಸಂದೇಶದಲ್ಲಿ, “ನ್ಯೂಸ್‌18 ಕನ್ನಡವು 1-4-2020 ರಂದು ಪ್ರಸಾರ ಮಾಡಿದ ‘ದೇಶಕ್ಕೆ ಕೊರೊನಾ ವೈರಸ್ ಹಬ್ಬಿಸಿದ ದೆಹಲಿ ನಿಝಾಮುದ್ದೀನ್ ಹೇಗಿದೆ ಗೊತ್ತಾ?’ ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್‌ ಸಭೆಗೆ ಹೋದವರ ಸಂಖ್ಯೆ ಎಷ್ಟು?’ ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಹಾಗೂ ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷತೆ, ವಸ್ತುನಿಷ್ಠತೆ ಹಾಗೂ ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೇಳಿತ್ತು.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...