Homeಮುಖಪುಟತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ತಮಿಳುನಾಡು: ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

- Advertisement -
- Advertisement -

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ನ್ಯೂಸ್‌18 ಮಾಧ್ಯಮ ಗುಂಪಿಗೆ ಲೀಗಲ್‌ ನೋಟೀಸ್‌ ಕಳುಹಿಸಿದ್ದು, ಮಾರ್ಚ್ 7ರಂದು ಪ್ರಕಟವಾದ ಸುದ್ದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 7ರಂದು ‘ಶಶಿಕಲಾ ಒಗ್ಗಟ್ಟಿನ ಬಿಕ್ಕಟ್ಟು… ಪಳನಿಸ್ವಾಮಿ ಪ್ರತ್ಯೇಕ ಪಕ್ಷವನ್ನು ಆರಂಭಿಸುತ್ತಿದ್ದಾರೆಯೇ?’ ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸಿದ್ದಕ್ಕಾಗಿ ನ್ಯೂಸ್ 18 ಮಾಧ್ಯಮ ಗುಂಪಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ವರದಿಯು ಸುಳ್ಳು, ಕ್ಷುಲ್ಲಕ ಮತ್ತು ಅವಹೇಳನಕಾರಿಯಾಗಿದೆ ಎಂದು ಪಳನಿಸ್ವಾಮಿ ಆರೋಪಿಸಿದ್ದು, ಟಿವಿ 18 ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ನ್ಯೂಸ್ 18ಗೆ ಸೂಚನೆಯನ್ನು ನೀಡಲಾಗಿದೆ. ಈ ಸುದ್ದಿಯನ್ನು ‘ನ್ಯೂಸ್ 18 ತಮಿಳು ವೆಬ್‌ಸೈಟ್‌’ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯು ಪಕ್ಷದ (ಎಐಎಡಿಎಂಕೆ) ಕಾರ್ಯಕರ್ತರಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಕೂಡಿದೆ. ಸುದ್ದಿಯನ್ನು ಪ್ರಕಟಿಸುವ ಮೊದಲು, ಸುದ್ದಿಯ ಸತ್ಯಾಸತ್ಯೆಯನ್ನು ಸಂಬಂಧಪಟ್ಟರಿಂದ ಪರಿಶೀಲಿಸಲಾಗಿಲ್ಲ ಎಂದು ಆಕ್ಷೇಪಿಸಲಾಗಿದೆ. ಸಂಸ್ಥೆಯು ಎಚ್ಚರಿಕೆ ವಹಿಸದೆ ಪಳನಿಸ್ವಾಮಿಯವರ ಪ್ರತಿಷ್ಠೆಗೆ ತೊಂದರೆಯುಂಟು ಮಾಡಿದೆ ಎಂದು ದೂರಲಾಗಿದೆ.

ಪಳನಿಸ್ವಾಮಿ ಅವರು ತಮ್ಮ ನೋಟಿಸ್‌ನಲ್ಲಿ, ಸುದ್ದಿಯಲ್ಲಿನ ಹಲವಾರು ವಿಷಯಗಳತ್ತ ಬೆರಳು ತೋರಿಸಿದ್ದಾರೆ. “ಪಕ್ಷದ ಕಾರ್ಯಕರ್ತರಲ್ಲಿ, ಸಾರ್ವಜನಿಕರ ಮನಸ್ಸಿನಲ್ಲಿ ಈ ಸುದ್ದಿಯು ಗೊಂದಲ ಮೂಡಿಸಿದೆ. ನನಗೆ ಹಾಗೂ ಪಕ್ಷದ ಪ್ರತಿಷ್ಠೆಗೆ ಅಡ್ಡಿಪಡಿಸಿದೆ” ಎಂದಿದ್ದಾರೆ.

“ಅವಹೇಳನಕಾರಿ, ಆಧಾರ ರಹಿತ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ತಮ್ಮ ಎಲ್ಲಾ ಚಾನೆಲ್‌, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಸುದ್ದಿಯನ್ನು ತೆಗೆದುಹಾಕಬೇಕು, ಬೇರೆ ಮಾಧ್ಯಮಗಳು ಈ ಸುದ್ದಿಯನ್ನು ಉಲ್ಲೇಖಿಸುವುದನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ 18 ಸಂಸ್ಥೆಯು ಒಂದು ವೇಳೆ ಈ ಕೆಲಸವನ್ನು ಮಾಡುವಲ್ಲಿ ವಿಫಲವಾದಲ್ಲಿ ಮುಂದೆ ಯಾವುದೇ ಸೂಚನೆ ನೀಡದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಳನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಪಳನಿಸ್ವಾಮಿ ಪರ ವಕೀಲ ಎಸ್‌ಆರ್‌ ರಾಜಗೋಪಾಲ್‌ ಅವರು ನೋಟಿಸ್‌ ಕಳುಹಿಸಿದ್ದಾರೆ.

ನ್ಯೂಸ್‌18 ಸಂಸ್ಥೆಗಿದೆ ಕ್ಷಮೆಯಾಚಿಸಿದ ಇತಿಹಾಸ

ನ್ಯೂಸ್‌18 ಸಂಸ್ಥೆಯ ಕನ್ನಡ ಆವೃತ್ತಿಯು ಈ ಹಿಂದೆ ಕ್ಷಮೆಯಾಚಿಸಿತ್ತು. ಕೊರೊನಾ ಒಂದನೆ ಅಲೆಯ ಸಮಯದಲ್ಲಿ ‘ತಬ್ಲೀಘಿ ಜಮಾಅತ್‌‌’ ವಿರುದ್ದ ಅಪಪ್ರಚಾರ ಮಾಡಿದ್ದಕ್ಕೆ ‘ನ್ಯೂಸ್ 18 ಕನ್ನಡ’ ಚಾನೆಲ್‌‌‌ ಕ್ಷಮೆ ಕೇಳಿತ್ತು. ಕೊರೊನಾ ಹರಡುವಿಕೆಗೆ ‘ಒಂದು ಸಮುದಾಯ ಕಾರಣ’ ಎಂಬಂತೆ ಬಿಂಬಿಸಿ ಹಲವು ಚಾನೆಲ್‌ಗಳು ದ್ವೇಷ ಹರಡಿದ್ದವು. ಈ ಚಾನೆಲ್‌ಗಳ ವಿರುದ್ದ, ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದ ಅಭಿಯಾನದ ತಂಡವು ನಡೆಸಿದ ಹೋರಾಟಕ್ಕೆ ಗೆಲುವು ದೊರೆತ್ತಿತ್ತು.

‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ್ದ NBSA, ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ 1 ಲಕ್ಷ ದಂಡ ವಿಧಿಸಿತ್ತು. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿತ್ತು. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಆದೇಶಿಸಿತ್ತು.

ಅದು ತನ್ನ ವಿಷಾದ ಸಂದೇಶದಲ್ಲಿ, “ನ್ಯೂಸ್‌18 ಕನ್ನಡವು 1-4-2020 ರಂದು ಪ್ರಸಾರ ಮಾಡಿದ ‘ದೇಶಕ್ಕೆ ಕೊರೊನಾ ವೈರಸ್ ಹಬ್ಬಿಸಿದ ದೆಹಲಿ ನಿಝಾಮುದ್ದೀನ್ ಹೇಗಿದೆ ಗೊತ್ತಾ?’ ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್‌ ಸಭೆಗೆ ಹೋದವರ ಸಂಖ್ಯೆ ಎಷ್ಟು?’ ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಹಾಗೂ ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷತೆ, ವಸ್ತುನಿಷ್ಠತೆ ಹಾಗೂ ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೇಳಿತ್ತು.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...