Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

- Advertisement -
- Advertisement -

ತಮಿಳುನಾಡಿನಲ್ಲಿ ಫೆಬ್ರವರಿ 19 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಜನಿಕಾಂತ್, ಅಜಿತ್ ಸೇರಿದಂತೆ ತಮಿಳು ಸ್ಟಾರ್‌ ನಟರು ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿದೆ.

ಸೂಪರ್‌ ಸ್ಟಾರ್‌ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ತ್ರಿಶಾ ಕೃಷ್ಣನ್ ಮತದಾನಕ್ಕೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ತಮ್ಮ ತಮ್ಮ ಬೂತ್‌ಗಳಲ್ಲಿ ಕಾಯುತ್ತಿದ್ದರು. ಆದರೆ, ಅವರು ಮತ ಚಲಾಯಿಸಲು ಬಂದಿಲ್ಲ. ಇದರಿಂದ ಜನ ನಿರಾಶರಾಗಿದ್ದಾರೆ.

ಚೆನ್ನೈನ ಕಾಲೇಜೊಂದರ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿರುವ ರಾಜಕೀಯ ವಿಶ್ಲೇಷಕ ಎಂ.ಚಿದಂಬರೇಶನ್ ಅವರನ್ನು ಉಲ್ಲೇಖಿಸಿರುವ IANS, “ಕಮಲ್ ಹಾಸನ್, ಸೀಮಾನ್‌ನಂತಹ ತಾರೆಯರು ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿಲ್ಲ ಎಂಬುದು ತಿಳಿದು ಬರುತ್ತದೆ. ನಟ ವಿಜಯ್ ಅವರನ್ನು ಹೊರತುಪಡಿಸಿ, ತಮಿಳುನಾಡಿನಲ್ಲಿ ಈಗ ಸಾಮಾಜಿಕ ಮತ್ತು ರಾಜಕೀಯ ವಿಷಯಗಳಿಗೆ ಪ್ರತಿಕ್ರಿಯಿಸುವ ಯಾವುದೇ ಸ್ಟಾರ್ ಇಲ್ಲ. ಇದು ಚುನಾವಣೆಯಲ್ಲಿ ಮತ ಚಲಾಯಿಸಲು ಅವರ ಆಸಕ್ತಿಯ ಕೊರತೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ತಮಿಳು ನಟ ವಿಜಯ್ ಬೆಳಗ್ಗೆಯೇ ಚೆನ್ನೈನ ನಂಗೇರಾಣಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದರು. 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ವಿಜಯ್ ಅವರು ತಮ್ಮ ಮನೆಯಿಂದ ಮತಗಟ್ಟೆಗೆ ಬೈಸಿಕಲ್ ಮೂಲಕ ತೆರಳುವ ಮೂಲಕ ಸಾಕಷ್ಟು ಚರ್ಚೆಗೆ ಹುಟ್ಟುಹಾಕಿದ್ದರು. ದೇಶದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸಂದೇಶವನ್ನು ತಿಳಿಸಲು ಬೂತ್‌ಗೆ ಸೈಕಲ್‌ನಲ್ಲಿ ಇಳಿದಿದ್ದಾರೆ ಎನ್ನಲಾಗಿತ್ತು.

ಮತ ಚಲಾಯಿಸಿಸಲು ಬಂದಿದ್ದ ನಟ ವಿಜಯ್

ಚೆನ್ನೈನ ಅಶೋಕ್ ನಗರದ ಟೀ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ರತ್ನಕುಮಾರ್, “ರಾಜ್ಯ ಚುನಾವಣಾ ಆಯೋಗವು ನಮ್ಮಂತಹ ಸ್ಥಳೀಯರಿಗೆ ಮತ ಚಲಾಯಿಸುವಂತೆ ಪ್ರೇರೇಪಿಸುತ್ತಿರುವಾಗ, ಸೆಲೆಬ್ರಿಟಿಗಳೂ ಮತ ಚಲಾಯಿಸುವಂತೆ ಅವರು ಏಕೆ ತಿಳಿಸುವುದಿಲ್ಲ? ಮತದಾನ ನನ್ನಂತಹ ಸಾಮಾನ್ಯ ಜನರಿಗೆ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದೇವೆ ಎಂಬ ಭಾವನೆಯನ್ನು ನೀಡುತ್ತದೆ. ಆದರೆ, ಈಗ ಅವರು ಬೇರೆ ವರ್ಗ ಮತ್ತು ನಾವು ಕೀಳು ಎಂಬುದನ್ನು ತೋರಿಸಿದಂತಾಗುತ್ತದೆ” ಎಂದಿದ್ದಾರೆ.

ಸ್ಟಾರ್‌ ನಟ, ನಟಿಯರು ಚುನಾವಣೆಯಲ್ಲಿ ಮತ ಚಲಾಯಿಸಲು ಬರದಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗವೂ ಟೀಕೆ ಮಾಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಆಯೋಗವು, ಇಂತಹ ಚುನಾವಣೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವುದಿಲ್ಲ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಮತದಾನವಾಗಿಲ್ಲ, ಶೇಕಡಾ 61 ರಷ್ಟು ಮತದಾನವಾಗಿದ್ದು, ಚೆನ್ನೈ ಕಾರ್ಪೋರೇಶನ್‌ನಲ್ಲಿ ಶೇಕಡಾ 43 ರಷ್ಟು ಮತದಾನವಾಗಿದೆ.


ಇದನ್ನೂ ಓದಿ: ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...