Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

- Advertisement -
- Advertisement -

ತಮಿಳುನಾಡಿನಲ್ಲಿ ಫೆಬ್ರವರಿ 19 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಜನಿಕಾಂತ್, ಅಜಿತ್ ಸೇರಿದಂತೆ ತಮಿಳು ಸ್ಟಾರ್‌ ನಟರು ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿದೆ.

ಸೂಪರ್‌ ಸ್ಟಾರ್‌ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ತ್ರಿಶಾ ಕೃಷ್ಣನ್ ಮತದಾನಕ್ಕೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ತಮ್ಮ ತಮ್ಮ ಬೂತ್‌ಗಳಲ್ಲಿ ಕಾಯುತ್ತಿದ್ದರು. ಆದರೆ, ಅವರು ಮತ ಚಲಾಯಿಸಲು ಬಂದಿಲ್ಲ. ಇದರಿಂದ ಜನ ನಿರಾಶರಾಗಿದ್ದಾರೆ.

ಚೆನ್ನೈನ ಕಾಲೇಜೊಂದರ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿರುವ ರಾಜಕೀಯ ವಿಶ್ಲೇಷಕ ಎಂ.ಚಿದಂಬರೇಶನ್ ಅವರನ್ನು ಉಲ್ಲೇಖಿಸಿರುವ IANS, “ಕಮಲ್ ಹಾಸನ್, ಸೀಮಾನ್‌ನಂತಹ ತಾರೆಯರು ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿಲ್ಲ ಎಂಬುದು ತಿಳಿದು ಬರುತ್ತದೆ. ನಟ ವಿಜಯ್ ಅವರನ್ನು ಹೊರತುಪಡಿಸಿ, ತಮಿಳುನಾಡಿನಲ್ಲಿ ಈಗ ಸಾಮಾಜಿಕ ಮತ್ತು ರಾಜಕೀಯ ವಿಷಯಗಳಿಗೆ ಪ್ರತಿಕ್ರಿಯಿಸುವ ಯಾವುದೇ ಸ್ಟಾರ್ ಇಲ್ಲ. ಇದು ಚುನಾವಣೆಯಲ್ಲಿ ಮತ ಚಲಾಯಿಸಲು ಅವರ ಆಸಕ್ತಿಯ ಕೊರತೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ತಮಿಳು ನಟ ವಿಜಯ್ ಬೆಳಗ್ಗೆಯೇ ಚೆನ್ನೈನ ನಂಗೇರಾಣಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದರು. 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ವಿಜಯ್ ಅವರು ತಮ್ಮ ಮನೆಯಿಂದ ಮತಗಟ್ಟೆಗೆ ಬೈಸಿಕಲ್ ಮೂಲಕ ತೆರಳುವ ಮೂಲಕ ಸಾಕಷ್ಟು ಚರ್ಚೆಗೆ ಹುಟ್ಟುಹಾಕಿದ್ದರು. ದೇಶದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸಂದೇಶವನ್ನು ತಿಳಿಸಲು ಬೂತ್‌ಗೆ ಸೈಕಲ್‌ನಲ್ಲಿ ಇಳಿದಿದ್ದಾರೆ ಎನ್ನಲಾಗಿತ್ತು.

ಮತ ಚಲಾಯಿಸಿಸಲು ಬಂದಿದ್ದ ನಟ ವಿಜಯ್

ಚೆನ್ನೈನ ಅಶೋಕ್ ನಗರದ ಟೀ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ರತ್ನಕುಮಾರ್, “ರಾಜ್ಯ ಚುನಾವಣಾ ಆಯೋಗವು ನಮ್ಮಂತಹ ಸ್ಥಳೀಯರಿಗೆ ಮತ ಚಲಾಯಿಸುವಂತೆ ಪ್ರೇರೇಪಿಸುತ್ತಿರುವಾಗ, ಸೆಲೆಬ್ರಿಟಿಗಳೂ ಮತ ಚಲಾಯಿಸುವಂತೆ ಅವರು ಏಕೆ ತಿಳಿಸುವುದಿಲ್ಲ? ಮತದಾನ ನನ್ನಂತಹ ಸಾಮಾನ್ಯ ಜನರಿಗೆ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದೇವೆ ಎಂಬ ಭಾವನೆಯನ್ನು ನೀಡುತ್ತದೆ. ಆದರೆ, ಈಗ ಅವರು ಬೇರೆ ವರ್ಗ ಮತ್ತು ನಾವು ಕೀಳು ಎಂಬುದನ್ನು ತೋರಿಸಿದಂತಾಗುತ್ತದೆ” ಎಂದಿದ್ದಾರೆ.

ಸ್ಟಾರ್‌ ನಟ, ನಟಿಯರು ಚುನಾವಣೆಯಲ್ಲಿ ಮತ ಚಲಾಯಿಸಲು ಬರದಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗವೂ ಟೀಕೆ ಮಾಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಆಯೋಗವು, ಇಂತಹ ಚುನಾವಣೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವುದಿಲ್ಲ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಮತದಾನವಾಗಿಲ್ಲ, ಶೇಕಡಾ 61 ರಷ್ಟು ಮತದಾನವಾಗಿದ್ದು, ಚೆನ್ನೈ ಕಾರ್ಪೋರೇಶನ್‌ನಲ್ಲಿ ಶೇಕಡಾ 43 ರಷ್ಟು ಮತದಾನವಾಗಿದೆ.


ಇದನ್ನೂ ಓದಿ: ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...