Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

- Advertisement -
- Advertisement -

ತಮಿಳುನಾಡಿನಲ್ಲಿ ಫೆಬ್ರವರಿ 19 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಜನಿಕಾಂತ್, ಅಜಿತ್ ಸೇರಿದಂತೆ ತಮಿಳು ಸ್ಟಾರ್‌ ನಟರು ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿದೆ.

ಸೂಪರ್‌ ಸ್ಟಾರ್‌ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ತ್ರಿಶಾ ಕೃಷ್ಣನ್ ಮತದಾನಕ್ಕೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ತಮ್ಮ ತಮ್ಮ ಬೂತ್‌ಗಳಲ್ಲಿ ಕಾಯುತ್ತಿದ್ದರು. ಆದರೆ, ಅವರು ಮತ ಚಲಾಯಿಸಲು ಬಂದಿಲ್ಲ. ಇದರಿಂದ ಜನ ನಿರಾಶರಾಗಿದ್ದಾರೆ.

ಚೆನ್ನೈನ ಕಾಲೇಜೊಂದರ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿರುವ ರಾಜಕೀಯ ವಿಶ್ಲೇಷಕ ಎಂ.ಚಿದಂಬರೇಶನ್ ಅವರನ್ನು ಉಲ್ಲೇಖಿಸಿರುವ IANS, “ಕಮಲ್ ಹಾಸನ್, ಸೀಮಾನ್‌ನಂತಹ ತಾರೆಯರು ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿಲ್ಲ ಎಂಬುದು ತಿಳಿದು ಬರುತ್ತದೆ. ನಟ ವಿಜಯ್ ಅವರನ್ನು ಹೊರತುಪಡಿಸಿ, ತಮಿಳುನಾಡಿನಲ್ಲಿ ಈಗ ಸಾಮಾಜಿಕ ಮತ್ತು ರಾಜಕೀಯ ವಿಷಯಗಳಿಗೆ ಪ್ರತಿಕ್ರಿಯಿಸುವ ಯಾವುದೇ ಸ್ಟಾರ್ ಇಲ್ಲ. ಇದು ಚುನಾವಣೆಯಲ್ಲಿ ಮತ ಚಲಾಯಿಸಲು ಅವರ ಆಸಕ್ತಿಯ ಕೊರತೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ತಮಿಳು ನಟ ವಿಜಯ್ ಬೆಳಗ್ಗೆಯೇ ಚೆನ್ನೈನ ನಂಗೇರಾಣಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದರು. 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ವಿಜಯ್ ಅವರು ತಮ್ಮ ಮನೆಯಿಂದ ಮತಗಟ್ಟೆಗೆ ಬೈಸಿಕಲ್ ಮೂಲಕ ತೆರಳುವ ಮೂಲಕ ಸಾಕಷ್ಟು ಚರ್ಚೆಗೆ ಹುಟ್ಟುಹಾಕಿದ್ದರು. ದೇಶದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸಂದೇಶವನ್ನು ತಿಳಿಸಲು ಬೂತ್‌ಗೆ ಸೈಕಲ್‌ನಲ್ಲಿ ಇಳಿದಿದ್ದಾರೆ ಎನ್ನಲಾಗಿತ್ತು.

ಮತ ಚಲಾಯಿಸಿಸಲು ಬಂದಿದ್ದ ನಟ ವಿಜಯ್

ಚೆನ್ನೈನ ಅಶೋಕ್ ನಗರದ ಟೀ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ರತ್ನಕುಮಾರ್, “ರಾಜ್ಯ ಚುನಾವಣಾ ಆಯೋಗವು ನಮ್ಮಂತಹ ಸ್ಥಳೀಯರಿಗೆ ಮತ ಚಲಾಯಿಸುವಂತೆ ಪ್ರೇರೇಪಿಸುತ್ತಿರುವಾಗ, ಸೆಲೆಬ್ರಿಟಿಗಳೂ ಮತ ಚಲಾಯಿಸುವಂತೆ ಅವರು ಏಕೆ ತಿಳಿಸುವುದಿಲ್ಲ? ಮತದಾನ ನನ್ನಂತಹ ಸಾಮಾನ್ಯ ಜನರಿಗೆ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದೇವೆ ಎಂಬ ಭಾವನೆಯನ್ನು ನೀಡುತ್ತದೆ. ಆದರೆ, ಈಗ ಅವರು ಬೇರೆ ವರ್ಗ ಮತ್ತು ನಾವು ಕೀಳು ಎಂಬುದನ್ನು ತೋರಿಸಿದಂತಾಗುತ್ತದೆ” ಎಂದಿದ್ದಾರೆ.

ಸ್ಟಾರ್‌ ನಟ, ನಟಿಯರು ಚುನಾವಣೆಯಲ್ಲಿ ಮತ ಚಲಾಯಿಸಲು ಬರದಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗವೂ ಟೀಕೆ ಮಾಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಆಯೋಗವು, ಇಂತಹ ಚುನಾವಣೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವುದಿಲ್ಲ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಮತದಾನವಾಗಿಲ್ಲ, ಶೇಕಡಾ 61 ರಷ್ಟು ಮತದಾನವಾಗಿದ್ದು, ಚೆನ್ನೈ ಕಾರ್ಪೋರೇಶನ್‌ನಲ್ಲಿ ಶೇಕಡಾ 43 ರಷ್ಟು ಮತದಾನವಾಗಿದೆ.


ಇದನ್ನೂ ಓದಿ: ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...