Homeಮುಖಪುಟತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?. ಇದು ನಮ್ಮ “ವಿಕಾಸ” -  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ ಎಂದು ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಿಡಿ ಕಾರಿದ್ದಾರೆ.

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯೂ ಭಾರತದ ಜಾರ್ಜ್ ಫ್ಲಾಯ್ಡ್ ಪ್ರಕರಣ ಎಂದು ಹೇಳಿ #GeorgeFloydofIndia ಹಾಗೂ #JusticeForJeyarajAndFenix ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ತಿಂಗಳು ಅಮೆರಿಕಾದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ಜನಾಂಗದ ವ್ಯಕ್ತಿಯನ್ನು ಪೊಲೀಸರು ನಡುರಸ್ತೆಯಲ್ಲಿ ಕೊಂದಿರುವುದರ ವಿರುದ್ದ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದವು. ಅಮೆರಿಕಾದಲ್ಲಂತೂ ವೈಟ್ ಹೌಸ್ ಮುಂದೆ ಭಾರಿ ಪ್ರತಿಭಟನೆ ನಡೆದು ಅಧ್ಯಕ್ಷ ಬಂಕರ್ ನಲ್ಲಿ ಅಡಗಿ ಕುಳಿತ ಘಟನೆ ಕೂಡಾ ನಡೆದಿತ್ತು.

ತೂತುಕುಡಿಯ ಸಾಥನಂಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬವರು ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಾರೆ ಜೊತೆಗೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಅವರಿಬ್ಬರನ್ನು ಬಂಧಿಸಿ ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದರು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಂಬೇಡ್ಕರ್ ವಾದಿ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇಮಾನಿ, “ಆತ್ಮೀಯ ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ಅಥವಾ ನಿಮ್ಮ ಇನ್ಸ್ಟಾಗ್ರಾಮ್ ಕ್ರಿಯಾಶೀಲತೆ ಇತರ ದೇಶಗಳಿಗೆ ಮಾತ್ರ ಸೀಮಿತವಾಗಿದೆಯೇ ? ಭಾರತದ ಜಾರ್ಜ್ ಫ್ಲಾಯ್ಡ್ ಗಳು ತುಂಬಾ ಹೆಚ್ಚಿದ್ದಾರೆ. ಇಂತಹ ಪೊಲೀಸ್ ಹಿಂಸೆ ಹಾಗೂ ಲೈಂಗಿಕ ಕಿರುಕುಳದ ಕಥೆ ಹೃದಯ ವಿದ್ರಾವಕವಾಗಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಲಕ್ಷಗಳನ್ನು ಬಿಡಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಅಮೆರಿಕದಂತೆಯೇ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆಯೇ ? ಅಮೆರಿಕಾದ ಸಂಸದರು ಮಾಡಿದಂತೆ ನಮ್ಮ ಸರ್ಕಾರ ಹೆಚ್ಚು ಮಾನವೀಯ ಕಾನೂನುಗಳನ್ನು ಮಾಡುತ್ತಾರೆಯೇ ? ಇದು ನಮ್ಮ ‘ವಿಕಾಸ’ –  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪೊಲೀಸರ ಈ ಕ್ರೌರ್ಯವೂ ಭೀಕರ ಅಪರಾಧವಾಗಿದೆ. ನಮ್ಮ ರಕ್ಷಕರು ದಬ್ಬಾಳಿಕೆಗಾರರಾಗಿ ಬದಲಾದಾ ದುರಂತವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ರೇಡಿಯೊ ಜಾಕಿ ಸುಚಿತ್ರ ಟ್ವೀಟ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್ ಕೆಂಗಡರನ್ ಟ್ವೀಟ್ ಮಾಡಿ “ನಾವು ಈ ವ್ಯವಸ್ಥೆಗಳನ್ನು ನಂಬಲು ಪ್ರಾರಂಭಿಸುವ ದಿನವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಪೊಲೀಸರು ದೌರ್ಜನ್ಯ  ಎಸಗುವ ಚಿತ್ರಗಳನ್ನು ಹಾಕಿದ್ದಾರೆ.

ಆಟೊನಿ ಎಂಬವರು ಟ್ವೀಟ್ ಮಾಡಿ “ಭಾರತದ ಜಾರ್ಜ್ ಪ್ಲಾಯ್ಡ್ ಗಳಿಗೆ ನ್ಯಾಯ ಬೇಕು” ಎಂದು ಹೇಳಿದ್ದಾರೆ. ಅಮೆರಿಕಾದ ಪೊಲೀಸರ ವಶದಲ್ಲಿ ಜಾರ್ಜ್ ಫ್ಯಾಯ್ಡ್ ಸಾವಿಗೀಡಾದಂತೆ, ಭಾರತದ ತಂದೆ ಹಾಗೂ ಮಗ ಕೂಡಾ ಸತ್ತಿದ್ದಾರೆ ಎಂದು ಅವರು ಚಿತ್ರದಲ್ಲಿ ಬರೆದಿದ್ದಾರೆ.


ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...