Homeಮುಖಪುಟತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?. ಇದು ನಮ್ಮ “ವಿಕಾಸ” -  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ ಎಂದು ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಿಡಿ ಕಾರಿದ್ದಾರೆ.

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯೂ ಭಾರತದ ಜಾರ್ಜ್ ಫ್ಲಾಯ್ಡ್ ಪ್ರಕರಣ ಎಂದು ಹೇಳಿ #GeorgeFloydofIndia ಹಾಗೂ #JusticeForJeyarajAndFenix ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ತಿಂಗಳು ಅಮೆರಿಕಾದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ಜನಾಂಗದ ವ್ಯಕ್ತಿಯನ್ನು ಪೊಲೀಸರು ನಡುರಸ್ತೆಯಲ್ಲಿ ಕೊಂದಿರುವುದರ ವಿರುದ್ದ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದವು. ಅಮೆರಿಕಾದಲ್ಲಂತೂ ವೈಟ್ ಹೌಸ್ ಮುಂದೆ ಭಾರಿ ಪ್ರತಿಭಟನೆ ನಡೆದು ಅಧ್ಯಕ್ಷ ಬಂಕರ್ ನಲ್ಲಿ ಅಡಗಿ ಕುಳಿತ ಘಟನೆ ಕೂಡಾ ನಡೆದಿತ್ತು.

ತೂತುಕುಡಿಯ ಸಾಥನಂಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬವರು ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಾರೆ ಜೊತೆಗೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಅವರಿಬ್ಬರನ್ನು ಬಂಧಿಸಿ ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದರು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಂಬೇಡ್ಕರ್ ವಾದಿ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇಮಾನಿ, “ಆತ್ಮೀಯ ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ಅಥವಾ ನಿಮ್ಮ ಇನ್ಸ್ಟಾಗ್ರಾಮ್ ಕ್ರಿಯಾಶೀಲತೆ ಇತರ ದೇಶಗಳಿಗೆ ಮಾತ್ರ ಸೀಮಿತವಾಗಿದೆಯೇ ? ಭಾರತದ ಜಾರ್ಜ್ ಫ್ಲಾಯ್ಡ್ ಗಳು ತುಂಬಾ ಹೆಚ್ಚಿದ್ದಾರೆ. ಇಂತಹ ಪೊಲೀಸ್ ಹಿಂಸೆ ಹಾಗೂ ಲೈಂಗಿಕ ಕಿರುಕುಳದ ಕಥೆ ಹೃದಯ ವಿದ್ರಾವಕವಾಗಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಲಕ್ಷಗಳನ್ನು ಬಿಡಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಅಮೆರಿಕದಂತೆಯೇ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆಯೇ ? ಅಮೆರಿಕಾದ ಸಂಸದರು ಮಾಡಿದಂತೆ ನಮ್ಮ ಸರ್ಕಾರ ಹೆಚ್ಚು ಮಾನವೀಯ ಕಾನೂನುಗಳನ್ನು ಮಾಡುತ್ತಾರೆಯೇ ? ಇದು ನಮ್ಮ ‘ವಿಕಾಸ’ –  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪೊಲೀಸರ ಈ ಕ್ರೌರ್ಯವೂ ಭೀಕರ ಅಪರಾಧವಾಗಿದೆ. ನಮ್ಮ ರಕ್ಷಕರು ದಬ್ಬಾಳಿಕೆಗಾರರಾಗಿ ಬದಲಾದಾ ದುರಂತವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ರೇಡಿಯೊ ಜಾಕಿ ಸುಚಿತ್ರ ಟ್ವೀಟ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್ ಕೆಂಗಡರನ್ ಟ್ವೀಟ್ ಮಾಡಿ “ನಾವು ಈ ವ್ಯವಸ್ಥೆಗಳನ್ನು ನಂಬಲು ಪ್ರಾರಂಭಿಸುವ ದಿನವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಪೊಲೀಸರು ದೌರ್ಜನ್ಯ  ಎಸಗುವ ಚಿತ್ರಗಳನ್ನು ಹಾಕಿದ್ದಾರೆ.

ಆಟೊನಿ ಎಂಬವರು ಟ್ವೀಟ್ ಮಾಡಿ “ಭಾರತದ ಜಾರ್ಜ್ ಪ್ಲಾಯ್ಡ್ ಗಳಿಗೆ ನ್ಯಾಯ ಬೇಕು” ಎಂದು ಹೇಳಿದ್ದಾರೆ. ಅಮೆರಿಕಾದ ಪೊಲೀಸರ ವಶದಲ್ಲಿ ಜಾರ್ಜ್ ಫ್ಯಾಯ್ಡ್ ಸಾವಿಗೀಡಾದಂತೆ, ಭಾರತದ ತಂದೆ ಹಾಗೂ ಮಗ ಕೂಡಾ ಸತ್ತಿದ್ದಾರೆ ಎಂದು ಅವರು ಚಿತ್ರದಲ್ಲಿ ಬರೆದಿದ್ದಾರೆ.


ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...