Homeಮುಖಪುಟತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದ ಎನ್ನಲಾಗಿದೆ.

- Advertisement -
- Advertisement -

ಕುಖ್ಯಾತ ದರೋಡೆಕೋರನೊಬ್ಬ ಸೋಮವಾರ ಚೆನ್ನೈನ ವಂಡಲೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕಕ್ಕೆ ಸೇರಲು ಪ್ರಯತ್ನಿಸಿದ್ದು, ಆದರೆ ಪೊಲೀಸರನ್ನು ನೋಡಿದ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ.

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದರು ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸೂರ್ಯ ಪಾಲ್ಗೊಳ್ಳಲಿದ್ದಾನೆ ಎಂದು ಚೆಂಗಲ್ಪಟ್ಟು ಜಿಲ್ಲಾ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಆ ಸ್ಥಳಕ್ಕೆ ತೆರಳಿದರು. ಆದರೆ, ಪೋಲೀಸರು ಬಂದುದ್ದನ್ನು ಗಮನಿಸಿದ ಆತ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ.

ಈ ಕುರಿತು ಟ್ವೀಟ್ ಮಾಡಿರುವ ಪತ್ರಕರ್ತ ಶರವಣನ್, “ವಂಡಲೂರು ಬಳಿ, ಭಾಜಾಪ ನಾಯಕ ಎಲ್.ಮುರುಗನ್ ಅವರ ಮುಂದಾಳತ್ವದಲ್ಲಿ, ಬಿಜೆಪಿ ಸೇರುವುದಕ್ಕೆ ಬಂದಿದ್ದ ಪ್ರಬಲ ರೌಡಿ ನೆರ್ಕುಂಡ್ರಂ ಸೂರ್ಯ(7 ಕೊಲೆ ಸೇರಿದಂತೆ 52 ಪ್ರಕರಣಗಳು) ಪೋಲೀಸರನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಇತ್ತೀಚೆಗೆ ದಕ್ಷಿಣ ಚೆನ್ನೈನ ಕುಖ್ಯಾತ ದಾದಾ ಕಲ್ವೆಟ್ಟು ರವಿ ಭಾಜಾಪದೊಂದಿಗೆ ಸೇರಿಕೊಂಡಿದ್ದಾನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಈ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ, ಚಾಕು ಇಟ್ಟುಕೊಂಡಿದ್ದ ಇತರೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಸೂರ್ಯನೊಂದಿಗೆ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ದಿ ಹಿಂದು ವರದಿ ಮಾಡಿದೆ.

ಆರು ಆರೋಪಿಗಳೊಂದಿಗೆ ಪಕ್ಷದ ಇಬ್ಬರು ಸದಸ್ಯರನ್ನು ಸಹ ಬಂಧಿಸಲಾಗಿರುವುದರಿಂದ, ಪೊಲೀಸ್ ಠಾಣೆಯ ಹೊರಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ತಮಿಳುನಾಡು ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಪತ್ರಿಕೆಗೆ ತಿಳಿಸಿದ್ದಾರೆ. “ಆ ಇಬ್ಬರು ಮಾತ್ರ ನಮ್ಮ ಪಕ್ಷದ ಸದಸ್ಯರು. ಆ ಆರು ಜನರ ಬಿಡುಗಡೆಯನ್ನು ನಾವು ಬಯಸಲಿಲ್ಲ” ಎಂದು ಅವರು ಹೇಳಿದರು.

ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರುತ್ತಿರುವುದರ ಬಗ್ಗೆ ರಾಘವನ್ ಅವರನ್ನು ಪ್ರಶ್ನಿಸಿದಾಗ, “ನೂರಾರು ಜನರು ಬಿಜೆಪಿಗೆ ಸೇರುತ್ತಿರುವುದರಿಂದ ಪ್ರತಿಯೊಬ್ಬರ ವಿವರಗಳನ್ನು ಪರಿಶೀಲಿಸುವುದು ಕಷ್ಟ. ಸದಸ್ಯರ ಒಳಹರಿವು ಹೆಚ್ಚಾಗಿದ್ದಾಗ ಈ ರೀತಿಯ ಒಂದೆರೆಡು ಪ್ರಕರಣಗಳು ಜರುಗಿವೆ. ಈ ಬಗ್ಗೆ ನಾವು ಜಾಗರೂಕರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಕೆ.ಅಣ್ಣಾಮಲೈ

“ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರಲು ಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಕಾಳಜಿ ವಹಿಸುತ್ತದೆಯೇ” ಎಂದು ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸೂರ್ಯ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕಗಳ ಬಳಕೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹಳಷ್ಟು ರೌಡಿ ಹಿನ್ನೆಲೆಯ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಬಿಜೆಪಿ ಸೇರಿದರೆ ತಮ್ಮ ಮೇಲಿನ ಪ್ರಕರಣಗಳನ್ನು ಕೈಬಿಡಲಾಗುತ್ತದೆ ಎಂಬ ಆಮಿಷ ಒಡ್ಡಲಾಗುತ್ತಿದೆ ಎಂಬ ವದಂತಿ ಸಹ ಚಾಲ್ತಿಯಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...