Homeಮುಖಪುಟತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದ ಎನ್ನಲಾಗಿದೆ.

- Advertisement -
- Advertisement -

ಕುಖ್ಯಾತ ದರೋಡೆಕೋರನೊಬ್ಬ ಸೋಮವಾರ ಚೆನ್ನೈನ ವಂಡಲೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕಕ್ಕೆ ಸೇರಲು ಪ್ರಯತ್ನಿಸಿದ್ದು, ಆದರೆ ಪೊಲೀಸರನ್ನು ನೋಡಿದ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ.

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದರು ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸೂರ್ಯ ಪಾಲ್ಗೊಳ್ಳಲಿದ್ದಾನೆ ಎಂದು ಚೆಂಗಲ್ಪಟ್ಟು ಜಿಲ್ಲಾ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಆ ಸ್ಥಳಕ್ಕೆ ತೆರಳಿದರು. ಆದರೆ, ಪೋಲೀಸರು ಬಂದುದ್ದನ್ನು ಗಮನಿಸಿದ ಆತ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ.

ಈ ಕುರಿತು ಟ್ವೀಟ್ ಮಾಡಿರುವ ಪತ್ರಕರ್ತ ಶರವಣನ್, “ವಂಡಲೂರು ಬಳಿ, ಭಾಜಾಪ ನಾಯಕ ಎಲ್.ಮುರುಗನ್ ಅವರ ಮುಂದಾಳತ್ವದಲ್ಲಿ, ಬಿಜೆಪಿ ಸೇರುವುದಕ್ಕೆ ಬಂದಿದ್ದ ಪ್ರಬಲ ರೌಡಿ ನೆರ್ಕುಂಡ್ರಂ ಸೂರ್ಯ(7 ಕೊಲೆ ಸೇರಿದಂತೆ 52 ಪ್ರಕರಣಗಳು) ಪೋಲೀಸರನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಇತ್ತೀಚೆಗೆ ದಕ್ಷಿಣ ಚೆನ್ನೈನ ಕುಖ್ಯಾತ ದಾದಾ ಕಲ್ವೆಟ್ಟು ರವಿ ಭಾಜಾಪದೊಂದಿಗೆ ಸೇರಿಕೊಂಡಿದ್ದಾನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಈ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ, ಚಾಕು ಇಟ್ಟುಕೊಂಡಿದ್ದ ಇತರೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಸೂರ್ಯನೊಂದಿಗೆ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ದಿ ಹಿಂದು ವರದಿ ಮಾಡಿದೆ.

ಆರು ಆರೋಪಿಗಳೊಂದಿಗೆ ಪಕ್ಷದ ಇಬ್ಬರು ಸದಸ್ಯರನ್ನು ಸಹ ಬಂಧಿಸಲಾಗಿರುವುದರಿಂದ, ಪೊಲೀಸ್ ಠಾಣೆಯ ಹೊರಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ತಮಿಳುನಾಡು ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಪತ್ರಿಕೆಗೆ ತಿಳಿಸಿದ್ದಾರೆ. “ಆ ಇಬ್ಬರು ಮಾತ್ರ ನಮ್ಮ ಪಕ್ಷದ ಸದಸ್ಯರು. ಆ ಆರು ಜನರ ಬಿಡುಗಡೆಯನ್ನು ನಾವು ಬಯಸಲಿಲ್ಲ” ಎಂದು ಅವರು ಹೇಳಿದರು.

ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರುತ್ತಿರುವುದರ ಬಗ್ಗೆ ರಾಘವನ್ ಅವರನ್ನು ಪ್ರಶ್ನಿಸಿದಾಗ, “ನೂರಾರು ಜನರು ಬಿಜೆಪಿಗೆ ಸೇರುತ್ತಿರುವುದರಿಂದ ಪ್ರತಿಯೊಬ್ಬರ ವಿವರಗಳನ್ನು ಪರಿಶೀಲಿಸುವುದು ಕಷ್ಟ. ಸದಸ್ಯರ ಒಳಹರಿವು ಹೆಚ್ಚಾಗಿದ್ದಾಗ ಈ ರೀತಿಯ ಒಂದೆರೆಡು ಪ್ರಕರಣಗಳು ಜರುಗಿವೆ. ಈ ಬಗ್ಗೆ ನಾವು ಜಾಗರೂಕರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಕೆ.ಅಣ್ಣಾಮಲೈ

“ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರಲು ಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಕಾಳಜಿ ವಹಿಸುತ್ತದೆಯೇ” ಎಂದು ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸೂರ್ಯ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕಗಳ ಬಳಕೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹಳಷ್ಟು ರೌಡಿ ಹಿನ್ನೆಲೆಯ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಬಿಜೆಪಿ ಸೇರಿದರೆ ತಮ್ಮ ಮೇಲಿನ ಪ್ರಕರಣಗಳನ್ನು ಕೈಬಿಡಲಾಗುತ್ತದೆ ಎಂಬ ಆಮಿಷ ಒಡ್ಡಲಾಗುತ್ತಿದೆ ಎಂಬ ವದಂತಿ ಸಹ ಚಾಲ್ತಿಯಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...