Homeಮುಖಪುಟತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದ ಎನ್ನಲಾಗಿದೆ.

- Advertisement -
- Advertisement -

ಕುಖ್ಯಾತ ದರೋಡೆಕೋರನೊಬ್ಬ ಸೋಮವಾರ ಚೆನ್ನೈನ ವಂಡಲೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕಕ್ಕೆ ಸೇರಲು ಪ್ರಯತ್ನಿಸಿದ್ದು, ಆದರೆ ಪೊಲೀಸರನ್ನು ನೋಡಿದ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ.

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದರು ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸೂರ್ಯ ಪಾಲ್ಗೊಳ್ಳಲಿದ್ದಾನೆ ಎಂದು ಚೆಂಗಲ್ಪಟ್ಟು ಜಿಲ್ಲಾ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಆ ಸ್ಥಳಕ್ಕೆ ತೆರಳಿದರು. ಆದರೆ, ಪೋಲೀಸರು ಬಂದುದ್ದನ್ನು ಗಮನಿಸಿದ ಆತ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ.

ಈ ಕುರಿತು ಟ್ವೀಟ್ ಮಾಡಿರುವ ಪತ್ರಕರ್ತ ಶರವಣನ್, “ವಂಡಲೂರು ಬಳಿ, ಭಾಜಾಪ ನಾಯಕ ಎಲ್.ಮುರುಗನ್ ಅವರ ಮುಂದಾಳತ್ವದಲ್ಲಿ, ಬಿಜೆಪಿ ಸೇರುವುದಕ್ಕೆ ಬಂದಿದ್ದ ಪ್ರಬಲ ರೌಡಿ ನೆರ್ಕುಂಡ್ರಂ ಸೂರ್ಯ(7 ಕೊಲೆ ಸೇರಿದಂತೆ 52 ಪ್ರಕರಣಗಳು) ಪೋಲೀಸರನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಇತ್ತೀಚೆಗೆ ದಕ್ಷಿಣ ಚೆನ್ನೈನ ಕುಖ್ಯಾತ ದಾದಾ ಕಲ್ವೆಟ್ಟು ರವಿ ಭಾಜಾಪದೊಂದಿಗೆ ಸೇರಿಕೊಂಡಿದ್ದಾನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಈ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ, ಚಾಕು ಇಟ್ಟುಕೊಂಡಿದ್ದ ಇತರೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಸೂರ್ಯನೊಂದಿಗೆ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ದಿ ಹಿಂದು ವರದಿ ಮಾಡಿದೆ.

ಆರು ಆರೋಪಿಗಳೊಂದಿಗೆ ಪಕ್ಷದ ಇಬ್ಬರು ಸದಸ್ಯರನ್ನು ಸಹ ಬಂಧಿಸಲಾಗಿರುವುದರಿಂದ, ಪೊಲೀಸ್ ಠಾಣೆಯ ಹೊರಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ತಮಿಳುನಾಡು ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಪತ್ರಿಕೆಗೆ ತಿಳಿಸಿದ್ದಾರೆ. “ಆ ಇಬ್ಬರು ಮಾತ್ರ ನಮ್ಮ ಪಕ್ಷದ ಸದಸ್ಯರು. ಆ ಆರು ಜನರ ಬಿಡುಗಡೆಯನ್ನು ನಾವು ಬಯಸಲಿಲ್ಲ” ಎಂದು ಅವರು ಹೇಳಿದರು.

ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರುತ್ತಿರುವುದರ ಬಗ್ಗೆ ರಾಘವನ್ ಅವರನ್ನು ಪ್ರಶ್ನಿಸಿದಾಗ, “ನೂರಾರು ಜನರು ಬಿಜೆಪಿಗೆ ಸೇರುತ್ತಿರುವುದರಿಂದ ಪ್ರತಿಯೊಬ್ಬರ ವಿವರಗಳನ್ನು ಪರಿಶೀಲಿಸುವುದು ಕಷ್ಟ. ಸದಸ್ಯರ ಒಳಹರಿವು ಹೆಚ್ಚಾಗಿದ್ದಾಗ ಈ ರೀತಿಯ ಒಂದೆರೆಡು ಪ್ರಕರಣಗಳು ಜರುಗಿವೆ. ಈ ಬಗ್ಗೆ ನಾವು ಜಾಗರೂಕರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಕೆ.ಅಣ್ಣಾಮಲೈ

“ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರಲು ಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಕಾಳಜಿ ವಹಿಸುತ್ತದೆಯೇ” ಎಂದು ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸೂರ್ಯ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕಗಳ ಬಳಕೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹಳಷ್ಟು ರೌಡಿ ಹಿನ್ನೆಲೆಯ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಬಿಜೆಪಿ ಸೇರಿದರೆ ತಮ್ಮ ಮೇಲಿನ ಪ್ರಕರಣಗಳನ್ನು ಕೈಬಿಡಲಾಗುತ್ತದೆ ಎಂಬ ಆಮಿಷ ಒಡ್ಡಲಾಗುತ್ತಿದೆ ಎಂಬ ವದಂತಿ ಸಹ ಚಾಲ್ತಿಯಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...