Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

- Advertisement -
- Advertisement -

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್ ಜಿಲ್ಲೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅದರ ಕಾರ್ಮಿಕನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಕಾರ್ಮಿಕ ಸಂಘಟನೆಯ ಹತ್ತು ಸದಸ್ಯರನ್ನು ಬಂಧಿಲಾಗಿದ್ದು, ಬುಧವಾರ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್ ಇಂಡಿಯಾ ಉತ್ಪಾದನಾ ಘಟಕದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಏಚೂರ್ ಗ್ರಾಮದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಟೆಂಟ್‌ಗಳನ್ನು ಬುಧವಾರ ಪೊಲೀಸರು ಕೆಡವಿದ್ದಾರೆ. ಆದರೆ, ಕಾರ್ಮಿಕರು ತೆರೆದ ಜಾಗದಲ್ಲಿ ಪ್ರತಿಭಟನೆ ಮುಂದುವರಿಸಿದ್ದು, ಪೊಲೀಸರು ಮತ್ತೊಂದು ಸುತ್ತಿನ ಬಂಧನಕ್ಕೆ ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಎಷ್ಟು ಜನರನ್ನು ಬಂಧಿಸಲಾಗಿದೆ ಅಥವಾ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲಎಂದು ಸ್ಕ್ರಾಲ್.ಕಾಂ ವರದಿ ಹೇಳಿದೆ. ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಇಂಡಿಯಾ ಗೃಹೋಪಯೋಗಿ ಕಾರ್ಖಾನೆಯ ಬಹುತೇಕ ಕಾರ್ಮಿಕರು ಸೆಪ್ಟೆಂಬರ್ 9 ರಿಂದ ಮುಷ್ಕರ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರತಿಭಟನೆಯು ಭಾರತದಲ್ಲಿ ಇತ್ತಿಚೆಗೆ ನಡೆಯುತ್ತಿರುವ ಅತಿದೊಡ್ಡ ಮುಷ್ಕರಗಳಲ್ಲಿ ಒಂದಾಗಿದೆ.

ಇದನ್ನೂಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ಉತ್ತಮ ಕೆಲಸದ ಪರಿಸ್ಥಿತಿಗಳು, ಹೆಚ್ಚಿನ ವೇತನ ಮತ್ತು ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಎಂಬ ತಮ್ಮ ಕಾರ್ಮಿಕ ಒಕ್ಕೂಟದ ಮಾನ್ಯತೆಗಾಗಿ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಟೋಬರ್ 2 ರಂದು, 900 ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದರು.

ಅಕ್ಟೋಬರ್ 3ರಂದು ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಟ್ರೇಡ್ ಯೂನಿಯನ್ ಆಕ್ಟ್ ಅಡಿಯಲ್ಲಿ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಅನ್ನು ನೋಂದಾಯಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ನಿರ್ಧರಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ.

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಇದು ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ಹೊಂದಿದೆ.

ಇದನ್ನೂಓದಿ: ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಸೆಪ್ಟೆಂಬರ್ 16 ರಂದು, ಪೊಲೀಸರು 104 ಮುಷ್ಕರ ನಿರತ ಕಾರ್ಮಿಕರನ್ನು ಕಾರ್ಖಾನೆಯಲ್ಲಿ ಸುಮಾರು ಒಂದು ದಿನ ಬಂಧಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ಪ್ರತಿಭಟನೆಯು ಎರಡನೇ ತಿಂಗಳಿಗೆ ಪ್ರವೇಶಿಸುತ್ತಿದ್ದಂತೆ, ಬುಧವಾರದಂದು ಕಾರ್ಮಿಕರು ಸ್ಯಾಮ್‌ಸಂಗ್ ನೀಡಿದ ಪರಿಹಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕಂಪನಿಯು ಕಾರ್ಮಿಕರಿಗೆ ಮಾರ್ಚ್ ವರೆಗೆ ಮಾಸಿಕ 5,000 ರೂ.ಗಳ ಪ್ರೋತ್ಸಾಹಧನ, ಹೆಚ್ಚಿನ ಹವಾನಿಯಂತ್ರಿತ ಬಸ್ಸುಗಳು, ವೈವಿಧ್ಯಮಯ ಕೆಫೆಟೇರಿಯಾ ಮೆನು ಮತ್ತು ಹೆರಿಗೆಯ ಸಂದರ್ಭದಲ್ಲಿ ಸುಮಾರು 2,000 ರೂ.ಗಳ ಉಡುಗೊರೆ ಕಾರ್ಡ್ ಅನ್ನು ನೀಡಿತ್ತು. ಆದರೆ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್‌ಗೆ ಮಾನ್ಯತೆ ನೀಡಲು ಕಂಪನಿಯು ಯಾವುದೇ ಇಚ್ಛೆಯನ್ನು ತೋರಿಸದ ಕಾರಣ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕ ಸಂಘವು ಕಂಪೆನಿಯ ಪ್ರಸ್ತಾಪವನ್ನು ತಿರಸ್ಕರಿಸಿತು.

ಭಾನುವಾರದಂದು ರಾಜ್ಯ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರು ಸ್ಯಾಮ್‌ಸಂಗ್‌ನ ಆಡಳಿತವು “ಗಮನಾರ್ಹವಾದ ವೇತನ ಹೆಚ್ಚಳ ಮತ್ತು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಂತೆ ತಮ್ಮ ಉದ್ಯೋಗಿಗಳು ಎತ್ತಿರುವ ಪ್ರಮುಖ ಬೇಡಿಕೆಗಳಿಗೆ ಸಮ್ಮತಿಸಿದೆ ಮತ್ತು ಉಳಿದ ಉದ್ಯೋಗಿಗಳು ಕೆಲಸಕ್ಕೆ ಮರಳಿದ ನಂತರ ಇತರ ಕೆಲವು ಬೇಡಿಕೆಗಳನ್ನು ಪರಿಗಣಿಸಲು ಸಹ ಒಪ್ಪಿಕೊಂಡಿದೆ” ಎಂದು ಹೇಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...