Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

- Advertisement -
- Advertisement -

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್ ಜಿಲ್ಲೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅದರ ಕಾರ್ಮಿಕನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಕಾರ್ಮಿಕ ಸಂಘಟನೆಯ ಹತ್ತು ಸದಸ್ಯರನ್ನು ಬಂಧಿಲಾಗಿದ್ದು, ಬುಧವಾರ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್ ಇಂಡಿಯಾ ಉತ್ಪಾದನಾ ಘಟಕದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಏಚೂರ್ ಗ್ರಾಮದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಟೆಂಟ್‌ಗಳನ್ನು ಬುಧವಾರ ಪೊಲೀಸರು ಕೆಡವಿದ್ದಾರೆ. ಆದರೆ, ಕಾರ್ಮಿಕರು ತೆರೆದ ಜಾಗದಲ್ಲಿ ಪ್ರತಿಭಟನೆ ಮುಂದುವರಿಸಿದ್ದು, ಪೊಲೀಸರು ಮತ್ತೊಂದು ಸುತ್ತಿನ ಬಂಧನಕ್ಕೆ ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಎಷ್ಟು ಜನರನ್ನು ಬಂಧಿಸಲಾಗಿದೆ ಅಥವಾ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲಎಂದು ಸ್ಕ್ರಾಲ್.ಕಾಂ ವರದಿ ಹೇಳಿದೆ. ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಇಂಡಿಯಾ ಗೃಹೋಪಯೋಗಿ ಕಾರ್ಖಾನೆಯ ಬಹುತೇಕ ಕಾರ್ಮಿಕರು ಸೆಪ್ಟೆಂಬರ್ 9 ರಿಂದ ಮುಷ್ಕರ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರತಿಭಟನೆಯು ಭಾರತದಲ್ಲಿ ಇತ್ತಿಚೆಗೆ ನಡೆಯುತ್ತಿರುವ ಅತಿದೊಡ್ಡ ಮುಷ್ಕರಗಳಲ್ಲಿ ಒಂದಾಗಿದೆ.

ಇದನ್ನೂಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ಉತ್ತಮ ಕೆಲಸದ ಪರಿಸ್ಥಿತಿಗಳು, ಹೆಚ್ಚಿನ ವೇತನ ಮತ್ತು ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಎಂಬ ತಮ್ಮ ಕಾರ್ಮಿಕ ಒಕ್ಕೂಟದ ಮಾನ್ಯತೆಗಾಗಿ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಟೋಬರ್ 2 ರಂದು, 900 ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದರು.

ಅಕ್ಟೋಬರ್ 3ರಂದು ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಟ್ರೇಡ್ ಯೂನಿಯನ್ ಆಕ್ಟ್ ಅಡಿಯಲ್ಲಿ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಅನ್ನು ನೋಂದಾಯಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ನಿರ್ಧರಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ.

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಇದು ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ಹೊಂದಿದೆ.

ಇದನ್ನೂಓದಿ: ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಸೆಪ್ಟೆಂಬರ್ 16 ರಂದು, ಪೊಲೀಸರು 104 ಮುಷ್ಕರ ನಿರತ ಕಾರ್ಮಿಕರನ್ನು ಕಾರ್ಖಾನೆಯಲ್ಲಿ ಸುಮಾರು ಒಂದು ದಿನ ಬಂಧಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ಪ್ರತಿಭಟನೆಯು ಎರಡನೇ ತಿಂಗಳಿಗೆ ಪ್ರವೇಶಿಸುತ್ತಿದ್ದಂತೆ, ಬುಧವಾರದಂದು ಕಾರ್ಮಿಕರು ಸ್ಯಾಮ್‌ಸಂಗ್ ನೀಡಿದ ಪರಿಹಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕಂಪನಿಯು ಕಾರ್ಮಿಕರಿಗೆ ಮಾರ್ಚ್ ವರೆಗೆ ಮಾಸಿಕ 5,000 ರೂ.ಗಳ ಪ್ರೋತ್ಸಾಹಧನ, ಹೆಚ್ಚಿನ ಹವಾನಿಯಂತ್ರಿತ ಬಸ್ಸುಗಳು, ವೈವಿಧ್ಯಮಯ ಕೆಫೆಟೇರಿಯಾ ಮೆನು ಮತ್ತು ಹೆರಿಗೆಯ ಸಂದರ್ಭದಲ್ಲಿ ಸುಮಾರು 2,000 ರೂ.ಗಳ ಉಡುಗೊರೆ ಕಾರ್ಡ್ ಅನ್ನು ನೀಡಿತ್ತು. ಆದರೆ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್‌ಗೆ ಮಾನ್ಯತೆ ನೀಡಲು ಕಂಪನಿಯು ಯಾವುದೇ ಇಚ್ಛೆಯನ್ನು ತೋರಿಸದ ಕಾರಣ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕ ಸಂಘವು ಕಂಪೆನಿಯ ಪ್ರಸ್ತಾಪವನ್ನು ತಿರಸ್ಕರಿಸಿತು.

ಭಾನುವಾರದಂದು ರಾಜ್ಯ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರು ಸ್ಯಾಮ್‌ಸಂಗ್‌ನ ಆಡಳಿತವು “ಗಮನಾರ್ಹವಾದ ವೇತನ ಹೆಚ್ಚಳ ಮತ್ತು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಂತೆ ತಮ್ಮ ಉದ್ಯೋಗಿಗಳು ಎತ್ತಿರುವ ಪ್ರಮುಖ ಬೇಡಿಕೆಗಳಿಗೆ ಸಮ್ಮತಿಸಿದೆ ಮತ್ತು ಉಳಿದ ಉದ್ಯೋಗಿಗಳು ಕೆಲಸಕ್ಕೆ ಮರಳಿದ ನಂತರ ಇತರ ಕೆಲವು ಬೇಡಿಕೆಗಳನ್ನು ಪರಿಗಣಿಸಲು ಸಹ ಒಪ್ಪಿಕೊಂಡಿದೆ” ಎಂದು ಹೇಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...