Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...