Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...