Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...