Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...