Homeಮುಖಪುಟತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ವಿರುದ್ಧದ ಕೆಟ್ಟ ಕಾಮೆಂಟ್‌ಗಳನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

- Advertisement -
- Advertisement -

ಪರ-ವಿರೋಧ ಚರ್ಚೆಗಳ ನಡುವೆ ಅಂತರ್-ಧರ್ಮೀಯ ಕುಟುಂಬಗಳ ಸೌಹಾರ್ದತೆ ಬಿಂಬಿಸುವ, ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ‘ಏಕತ್ವಂ’ ಜಾಹೀರಾತನ್ನು ಕಂಪನಿಯು ತೆಗೆದುಹಾಕಿದೆ. ಆದರೂ ಆಭರಣ ಮಳಿಗೆಗಳಿಗೆ ಬೆದರಿಕೆ ಕರೆಗಳು ಹೋಗುತ್ತಿರುವ ಕುರಿತು ವರದಿಯಾಗಿದೆ.

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ತನಿಷ್ಕ್ ಜುವೆಲ್ಲರಿ ಶಾಪ್‌ ಅನ್ನು ಗುರುಯಾಗಿಸಿಕೊಂಡು ಕೆಲವು ಗುಂಪುಗಳು ಬೆದರಿಕೆ ಕರೆಗಳನ್ನು ಮಾಡುತ್ತಿವೆ ಎಂದು ವರದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಂಗ್ ಆದ ನಂತರ ಜಾಹೀರಾತನ್ನು ಹಿಂಪಡೆಯಲಾಗಿತ್ತು.

“ಕೆಲವು ಜನರಿಗೆ ಜಾಹೀರಾತು ಇಷ್ಟವಾಗಿಲ್ಲ. ಕೆಲ ಸಮುದಾಯದವರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ಆರೋಪಿಸಿ ಕೆಲವು ಅಂಗಡಿ ಮಾಲೀಕರಿಗೆ ಬೆದರಿಕೆ ಕರೆಗಳು ಬಂದಿವೆ. ಪೊಲೀಸರು ನಿಯಮಿತವಾಗಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ. ಯಾವುದೇ ದರೋಡೆ, ಗಲಭೆ, ಪ್ರತಿಭಟನೆ ಅಥವಾ ದಾಳಿ ನಡೆದಿಲ್ಲ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೋಮವಾರ(ಅ.12) ರಾತ್ರಿ ತನಿಷ್ಕ್ ಅವರ ಗಾಂಧಿಧಾಮ್ ಅಂಗಡಿಯ ವ್ಯವಸ್ಥಾಪಕರಿಂದ ಕ್ಷಮೆಯಾಚನೆ ಟಿಪ್ಪಣಿ ಬರೆಯುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. “ಜಾಹೀರಾತು ನಾಚಿಕೆಗೇಡಿನ ಸಂಗತಿಯಾಗಿದೆ ಮತ್ತು ನಾವು ಕ್ಷಮೆಯಾಚಿಸುತ್ತೇವೆ ” ಎಂದು ವ್ಯವಸ್ಥಾಪಕರು ಬರೆದಿರುವ ಹೇಳಿಕೆಯನ್ನು ಬರೆಸಿಕೊಂಡ ದುಷ್ಕರ್ಮಿಗಳ ಗುಂಪು ಅದನ್ನು ಅಂಗಡಿಯಲ್ಲಿ ಅಂಟಿಸಿದೆ ಎಂದು ತಿಳಿದುಬಂದಿದೆ.

ct7fd6ko
PC: NDTV

ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆ ಗರ್ಭಿಣಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವರು ಕೆಟ್ಟ ಟ್ರೋಲಿಂಗ್ ಮಾಡಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...