Homeಮುಖಪುಟತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ವಿರುದ್ಧದ ಕೆಟ್ಟ ಕಾಮೆಂಟ್‌ಗಳನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

- Advertisement -
- Advertisement -

ಪರ-ವಿರೋಧ ಚರ್ಚೆಗಳ ನಡುವೆ ಅಂತರ್-ಧರ್ಮೀಯ ಕುಟುಂಬಗಳ ಸೌಹಾರ್ದತೆ ಬಿಂಬಿಸುವ, ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ‘ಏಕತ್ವಂ’ ಜಾಹೀರಾತನ್ನು ಕಂಪನಿಯು ತೆಗೆದುಹಾಕಿದೆ. ಆದರೂ ಆಭರಣ ಮಳಿಗೆಗಳಿಗೆ ಬೆದರಿಕೆ ಕರೆಗಳು ಹೋಗುತ್ತಿರುವ ಕುರಿತು ವರದಿಯಾಗಿದೆ.

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ತನಿಷ್ಕ್ ಜುವೆಲ್ಲರಿ ಶಾಪ್‌ ಅನ್ನು ಗುರುಯಾಗಿಸಿಕೊಂಡು ಕೆಲವು ಗುಂಪುಗಳು ಬೆದರಿಕೆ ಕರೆಗಳನ್ನು ಮಾಡುತ್ತಿವೆ ಎಂದು ವರದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಂಗ್ ಆದ ನಂತರ ಜಾಹೀರಾತನ್ನು ಹಿಂಪಡೆಯಲಾಗಿತ್ತು.

“ಕೆಲವು ಜನರಿಗೆ ಜಾಹೀರಾತು ಇಷ್ಟವಾಗಿಲ್ಲ. ಕೆಲ ಸಮುದಾಯದವರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ಆರೋಪಿಸಿ ಕೆಲವು ಅಂಗಡಿ ಮಾಲೀಕರಿಗೆ ಬೆದರಿಕೆ ಕರೆಗಳು ಬಂದಿವೆ. ಪೊಲೀಸರು ನಿಯಮಿತವಾಗಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ. ಯಾವುದೇ ದರೋಡೆ, ಗಲಭೆ, ಪ್ರತಿಭಟನೆ ಅಥವಾ ದಾಳಿ ನಡೆದಿಲ್ಲ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೋಮವಾರ(ಅ.12) ರಾತ್ರಿ ತನಿಷ್ಕ್ ಅವರ ಗಾಂಧಿಧಾಮ್ ಅಂಗಡಿಯ ವ್ಯವಸ್ಥಾಪಕರಿಂದ ಕ್ಷಮೆಯಾಚನೆ ಟಿಪ್ಪಣಿ ಬರೆಯುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. “ಜಾಹೀರಾತು ನಾಚಿಕೆಗೇಡಿನ ಸಂಗತಿಯಾಗಿದೆ ಮತ್ತು ನಾವು ಕ್ಷಮೆಯಾಚಿಸುತ್ತೇವೆ ” ಎಂದು ವ್ಯವಸ್ಥಾಪಕರು ಬರೆದಿರುವ ಹೇಳಿಕೆಯನ್ನು ಬರೆಸಿಕೊಂಡ ದುಷ್ಕರ್ಮಿಗಳ ಗುಂಪು ಅದನ್ನು ಅಂಗಡಿಯಲ್ಲಿ ಅಂಟಿಸಿದೆ ಎಂದು ತಿಳಿದುಬಂದಿದೆ.

ct7fd6ko
PC: NDTV

ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆ ಗರ್ಭಿಣಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವರು ಕೆಟ್ಟ ಟ್ರೋಲಿಂಗ್ ಮಾಡಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...