Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...