Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...