Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...