Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...