Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...