Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...