Homeಮುಖಪುಟಯುವಕನನ್ನು ನರಬಲಿ ಕೊಟ್ಟು ವಾಮಾಚಾರ: ಇಬ್ಬರು ಆರೋಪಿಗಳ ಬಂಧನ

ಯುವಕನನ್ನು ನರಬಲಿ ಕೊಟ್ಟು ವಾಮಾಚಾರ: ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

22 ವರ್ಷದ ಯುವಕನನ್ನು ತಲೆ ಕಡಿದು ನರಬಲಿ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಗುರುವಾರ ನಡೆದಿದೆ.

ನರಸಿಂಗ್‌ಪುರದಲ್ಲಿ ಅಂಕಿತ್ ಕೌರವ್(22) ಎಂಬ ಯುವಕನನ್ನು ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಬ್ಬರು ತಂತ್ರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರೇಂದ್ರ ಕಚಿ(40) ಮತ್ತು ರಾಮು ಕಚಿ (45) ಎಂದು ಗುರುತಿಸಲಾಗಿದೆ.

ನ.4ರಂದು ಹೊಲವೊಂದರಲ್ಲಿ ಯುವಕನ ವಿರೂಪಗೊಂಡ ಮೃತದೇಹ ಪತ್ತೆಯಾಗಿತ್ತು.

ದುರಂತ ಮರಣದ ಸುಮಾರು 2 ವಾರಗಳ ಮೊದಲು ಅಂಕಿತ್ ಕೌರವ್ ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸಿತ್ತು. ಈ ವೇಳೆ ತಂತ್ರಿಗಳ ಸಹಾಯ ಪಡೆಯಲು ಕೌರವ್ ಮುಂದಾಗಿದ್ದಾನೆ. ಅವರು ಆತನಿಗೆ ಸಹಾಯ ಮಾಡಲು ಒಪ್ಪಿಕೊಂಡರು ಮತ್ತು ಆತನ ಬಲಗೈಯಿಂದ ಮಧ್ಯದ  ಬೆರಳನ್ನು ಕತ್ತರಿಸುವಂತೆ ಮನವೊಲಿಸಿದ್ದಾರೆ.

ಟೇಕಪುರ ಗ್ರಾಮಕ್ಕೆ ಕೌರವ್‌ನನ್ನು ಕರೆದೊಯ್ದಿದ್ದು, ಆರೋಪಿಗಳು ಆತನಿಗೆ ನಿದ್ರೆ ಮಾತ್ರೆಗಳನ್ನು ನೀಡಿ ಬಳಿಕ ಹರಿತವಾದ ಆಯುಧದಿಂದ ಆತನ ರುಂಡವನ್ನು ಕತ್ತರಿಸಿದ್ದಾರೆ. ಬೆರಳು, ಕೈಗಳನ್ನು ಕೂಡ ಕತ್ತರಿಸಿದ್ದಾರೆ.

ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಘಟನೆ ನಡೆದ ರಾತ್ರಿ  ಸಂತ್ರಸ್ತ ಆರೋಪಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿರುವುದನ್ನು ಕಂಡುಕೊಂಡಿದ್ದಾರೆ. ಸಿಹೋರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಯುವಕ ಅಂಕಿತ್ ಕೌರವನ  ಕುಟುಂಬದ ಸದಸ್ಯರ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿತ್ತು. ಅಸಹಾಯಕರಾದ ಕುಟುಂಬವು ತಂತ್ರಿ ಸುರೇಂದ್ರ ಕಚಿ ಅವರ ಸಹಾಯವನ್ನು ಕೋರಿದ್ದಾರೆ. ಈ ವೇಳೆ ಅವರು ಹಣ ಬರುವ ಧಾರ್ಮಿಕ ಕ್ರಿಯೆಗಳನ್ನು ಮಾಡಲು ಸೂಚಿಸಿದ್ದಾರೆ. ಅಂಕಿತ್‌ಗೆ ಬೆರಳನ್ನು ತ್ಯಾಗ ಮಾಡುವಂತೆ ಸೂಚಿಸಿದ್ದಾರೆ. ನಂತರ ನ.3 ರಂದು ಧಾರ್ಮಿಕ ಕ್ರಿಯೆಯನ್ನು ನಿಗದಿಪಡಿಸಿ ತಂತ್ರಿ ಪ್ರಸಾದದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ ಅಂಕಿತ್‌ಗೆ ನೀಡಿದ್ದಾನೆ. ಪ್ರಜ್ಞೆ ಕಳೆದುಕೊಂಡ ಅಂಕಿತ್‌ ತಲೆಯನ್ನು ಕೊಡಲಿಯಿಂದ ಕತ್ತರಿಸಿ, ಬೆರಳುಗಳನ್ನು ಬೇರ್ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಅಂಕಿತ್‌ನ ಕುಟುಂಬಸ್ಥರು ಆತನ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು  ತನಿಖೆ ನಡೆಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 201, 120 (ಬಿ) ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...