Homeಮುಖಪುಟಯುವಕನನ್ನು ನರಬಲಿ ಕೊಟ್ಟು ವಾಮಾಚಾರ: ಇಬ್ಬರು ಆರೋಪಿಗಳ ಬಂಧನ

ಯುವಕನನ್ನು ನರಬಲಿ ಕೊಟ್ಟು ವಾಮಾಚಾರ: ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

22 ವರ್ಷದ ಯುವಕನನ್ನು ತಲೆ ಕಡಿದು ನರಬಲಿ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಗುರುವಾರ ನಡೆದಿದೆ.

ನರಸಿಂಗ್‌ಪುರದಲ್ಲಿ ಅಂಕಿತ್ ಕೌರವ್(22) ಎಂಬ ಯುವಕನನ್ನು ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಬ್ಬರು ತಂತ್ರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರೇಂದ್ರ ಕಚಿ(40) ಮತ್ತು ರಾಮು ಕಚಿ (45) ಎಂದು ಗುರುತಿಸಲಾಗಿದೆ.

ನ.4ರಂದು ಹೊಲವೊಂದರಲ್ಲಿ ಯುವಕನ ವಿರೂಪಗೊಂಡ ಮೃತದೇಹ ಪತ್ತೆಯಾಗಿತ್ತು.

ದುರಂತ ಮರಣದ ಸುಮಾರು 2 ವಾರಗಳ ಮೊದಲು ಅಂಕಿತ್ ಕೌರವ್ ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸಿತ್ತು. ಈ ವೇಳೆ ತಂತ್ರಿಗಳ ಸಹಾಯ ಪಡೆಯಲು ಕೌರವ್ ಮುಂದಾಗಿದ್ದಾನೆ. ಅವರು ಆತನಿಗೆ ಸಹಾಯ ಮಾಡಲು ಒಪ್ಪಿಕೊಂಡರು ಮತ್ತು ಆತನ ಬಲಗೈಯಿಂದ ಮಧ್ಯದ  ಬೆರಳನ್ನು ಕತ್ತರಿಸುವಂತೆ ಮನವೊಲಿಸಿದ್ದಾರೆ.

ಟೇಕಪುರ ಗ್ರಾಮಕ್ಕೆ ಕೌರವ್‌ನನ್ನು ಕರೆದೊಯ್ದಿದ್ದು, ಆರೋಪಿಗಳು ಆತನಿಗೆ ನಿದ್ರೆ ಮಾತ್ರೆಗಳನ್ನು ನೀಡಿ ಬಳಿಕ ಹರಿತವಾದ ಆಯುಧದಿಂದ ಆತನ ರುಂಡವನ್ನು ಕತ್ತರಿಸಿದ್ದಾರೆ. ಬೆರಳು, ಕೈಗಳನ್ನು ಕೂಡ ಕತ್ತರಿಸಿದ್ದಾರೆ.

ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಘಟನೆ ನಡೆದ ರಾತ್ರಿ  ಸಂತ್ರಸ್ತ ಆರೋಪಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿರುವುದನ್ನು ಕಂಡುಕೊಂಡಿದ್ದಾರೆ. ಸಿಹೋರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಯುವಕ ಅಂಕಿತ್ ಕೌರವನ  ಕುಟುಂಬದ ಸದಸ್ಯರ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿತ್ತು. ಅಸಹಾಯಕರಾದ ಕುಟುಂಬವು ತಂತ್ರಿ ಸುರೇಂದ್ರ ಕಚಿ ಅವರ ಸಹಾಯವನ್ನು ಕೋರಿದ್ದಾರೆ. ಈ ವೇಳೆ ಅವರು ಹಣ ಬರುವ ಧಾರ್ಮಿಕ ಕ್ರಿಯೆಗಳನ್ನು ಮಾಡಲು ಸೂಚಿಸಿದ್ದಾರೆ. ಅಂಕಿತ್‌ಗೆ ಬೆರಳನ್ನು ತ್ಯಾಗ ಮಾಡುವಂತೆ ಸೂಚಿಸಿದ್ದಾರೆ. ನಂತರ ನ.3 ರಂದು ಧಾರ್ಮಿಕ ಕ್ರಿಯೆಯನ್ನು ನಿಗದಿಪಡಿಸಿ ತಂತ್ರಿ ಪ್ರಸಾದದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ ಅಂಕಿತ್‌ಗೆ ನೀಡಿದ್ದಾನೆ. ಪ್ರಜ್ಞೆ ಕಳೆದುಕೊಂಡ ಅಂಕಿತ್‌ ತಲೆಯನ್ನು ಕೊಡಲಿಯಿಂದ ಕತ್ತರಿಸಿ, ಬೆರಳುಗಳನ್ನು ಬೇರ್ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಅಂಕಿತ್‌ನ ಕುಟುಂಬಸ್ಥರು ಆತನ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು  ತನಿಖೆ ನಡೆಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 201, 120 (ಬಿ) ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...