Homeಮುಖಪುಟಭ್ರಷ್ಟಾಚಾರ ರಹಿತ ಭಾರತದಲ್ಲಿ ಏನಾಗುತ್ತಿದೆ: ಪ್ರಧಾನಿಗೆ ನಟಿ ತನುಶ್ರೀ ದತ್ ಪ್ರಶ್ನೆ

ಭ್ರಷ್ಟಾಚಾರ ರಹಿತ ಭಾರತದಲ್ಲಿ ಏನಾಗುತ್ತಿದೆ: ಪ್ರಧಾನಿಗೆ ನಟಿ ತನುಶ್ರೀ ದತ್ ಪ್ರಶ್ನೆ

- Advertisement -
- Advertisement -

ಭ್ರಷ್ಟಾಚಾರ ರಹಿತ ಭಾರತದಲ್ಲಿ ಏನಾಗುತ್ತಿದೆ ಎಂದು ಬಾಲಿವುಡ್ ನಟಿ ತನುಶ್ರೀ ದತ್ ಪ್ರಧಾನಿ ಮೋದಿಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಕೇಳಿದ್ದಾರೆ. ತನುಶ್ರೀ ದತ್, ಬಾಲಿವುಡ್ ನಟ ನಾನಾ ಪಾಟೇಕರ್ ತಮ್ಮ ಮೇಲೆ ಲೈಗಿಂಕ ದೌರ್ಜನ್ಯ ಮಾಡಿದ್ದಾರೆಂದು ಮೀ ಟೂ ಅಡಿ ಪ್ರಕರಣ ದಾಖಲಿಸಿದ್ದರು. ಈ ಆರೋಪ ದುರುದ್ದೇಶದಿಂದ ಕೂಡಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷಾಧಾರಗಳು ಇಲ್ಲ ಎಂದು ಪೊಲೀಸರು ಕೇಸ್ ಕೈಬಿಟ್ಟಿದ್ದು, ತನುಶ್ರೀ ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.

ಪ್ರಧಾನಿ ಮೋದಿಯವರು ಭ್ರಷ್ಟಾಚಾರ ನಿರ್ಮೂಲನೆಯೇ ತಮ್ಮ ಆಧ್ಯ ಗುರಿಯೆಂದು ಹೇಳಿದ್ದರು. ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವುದಾಗಿ ಮಾಧ್ಯಮಗಳೂ ಬಿಂಬಿಸಿದ್ದವು. ಮೋದಿಯವರ ಭ್ರಷ್ಟಾಚಾರ ವಿರೋಧಿ ಕೆಲಸಗಳನ್ನು ನೋಡಿದ್ದ ನಟಿ ತಮ್ಮ ಪ್ರಕರಣದಲ್ಲಿ ಅದನ್ನು ನೆನಪಿಸಿಕೊಂಡಿದ್ದಾರೆ. ಅದರಂತೆ ತಮ್ಮ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದ್ದು, ಆರೋಪಿಯನ್ನು ರಕ್ಷಿಸುವ ಉದ್ದೇಶದಿಂದ ಪೊಲೀಸರು ತಮ್ಮ ಎಫ್‍ಐಆರ್ ಅನ್ನು ತಿರುಚಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಭ್ರಷ್ಟಾಚಾರ ರಹಿತ ಭಾರತದಲ್ಲಿ ಏನಾಗುತ್ತಿದೆ? ಉತ್ತರಿಸಿ ಮೋದೀಜಿ ಎಂದು ಪ್ರಶ್ನೆ ಕೇಳಿದ್ದಾರೆ.

2008ರಲ್ಲಿ ನಿರ್ಮಾಣಗೊಂಡ ‘ಹಾರ್ನ್ ಓಕೆ ಪ್ಲೀಸ್’ ಸಿನಿಮಾದ ವಿಶೇಷ ಹಾಡಿನ ಶೂಟಿಂಗ್ ವೇಳೆ ಲೈಂಗಿಕ ಕಿರುಕಳ ನೀಡಲಾಗಿತ್ತು ಎಂದು ತನುಶ್ರೀ ಹೇಳಿದ್ದಾರೆ. ಈ ಬಗ್ಗೆ 2018ರ ಅಕ್ಟೋಬರ್‍ನಲ್ಲಿ ಎಫ್‍ಐಆರ್ ದಾಖಲಿಸಿದ್ದೆ. ಅಲ್ಲದೆ 2008ರಲ್ಲಿ ಸಿನಿಮಾ ಮತ್ತು ಕಿರುತೆರೆ ಕಲಾವಿದರ ಸಂಘಕ್ಕೂ ದೂರು ನೀಡಿದ್ದೆ. ಸಂಘ ಕ್ಷಮೆ ಕೂಡ ಕೇಳಿತ್ತು. ಆದರೆ ಆದರೆ ಪೋಲಿಸರು ಆರೋಪಿಯನ್ನು ರಕ್ಷಿಸಲು ಎಫ್‍ಐಆರ್ ಅನ್ನೇ ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆಣ್ಣುಮಗಳೊಬ್ಬಳಿಗೆ ಅಪರಾಧಿಯಿಂದ ಸರಣಿ ದೌರ್ಜನ್ಯ ನಡೆಸಿದೆ. ಸಾರ್ವಜನಿಕ ಸ್ಥಳಗಳಲ್ಲಿಯೇ ಹಲ್ಲೆಗೆ ಯತ್ನಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಸಾಕ್ಷಾ ಕೊರತೆ ಎಂದು ಹೇಳುತ್ತಿದ್ದಾರೆ. ಇದೇನಾ ರಾಮರಾಜ್ಯ? ಈ ದೇಶದಲ್ಲಿ ಯಾವಾಗಲೂ ಅಧರ್ಮವೇ ಗೆಲ್ಲುತ್ತದಯೇ? ಉತ್ತರ ಕೊಡಿ ಮೋದಿಜೀ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...