Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...