Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...