Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...