Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...