Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....