Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...