Homeಕರ್ನಾಟಕಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

- Advertisement -
- Advertisement -

ಫರಾನ್ ಖಾನ್ ಎಂಬ 24ರ ಹರೆಯದ ಯುವಕನೋರ್ವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚುವ ಮೂಲಕ ಕೊಲ್ಲುವ ಯತ್ನ ಮಾಡಿದ್ದಾನೆ. ನವೆಂಬರ್ 17ರ ಭಾನುವಾರ ತಡರಾತ್ರಿ ಮೈಸೂರಿನಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗಳಾದ ತನ್ವೀರ್ ಸೇಠ್ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನೆ ನಡೆದ ಮಾರನೆಯ ದಿನದಿಂದಲೇ ಎಂದಿನಂತೆ ಆ ಯುವಕ ಕೊಲೆ ಮಾಡಲು ಮುಂದಾಗಿದ್ದು ಏಕೆ ಎನ್ನುವುದರ ಕುರಿತು ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ಕೇಳಿಬರುತ್ತಿವೆ. ಪೊಲೀಸ್ ತನಿಖೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಏನನ್ನೂ ಇನ್ನು ಖಚಿತಪಡಿಸಿಲ್ಲ. ಆದರೆ ರಾಜಕೀಯ ಮುಖಂಡರು ಮಾತ್ರ ತಮ್ಮ ಊಹೆಗಳನ್ನೇ ಸತ್ಯವೆನ್ನುವ ಹಾಗೆ ಹರಿಯಬಿಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಲೆಯತ್ನವನ್ನು ಸೀದಾ ಪಿಎಫ್‍ಐ ಸಂಘಟನೆಯ ತಲೆಗೆ ಕಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆದರು. ಮೈಸೂರು, ಶಿವಮೊಗ್ಗ ಗಲಭೆಯಾಯಿತು. ಒಂದು ಕೊಲೆಯಾಯಿತು. ಈಗ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಗೂಂಡಾಗಿರಿ ಮಾಡಿದ ಪಿಎಫ್‍ಐಗೆ ರಕ್ಷಣೆ ಕೊಟ್ಟು ಅವರ ಮೇಲಿದ್ದ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯುವ ಮೂಲಕ ನೀವು ಅವರಿಗೆ ಪರೋಕ್ಷವಾಗಿ ಬೆಂಬಲ ಕೊಡುತ್ತಿದ್ದೀರಿ, ಇದಕ್ಕೆ ಸ್ಪಷ್ಟೀಕರಣ ನೀಡಿ ಎಂದು ಏಕಕಾಲಕ್ಕೆ ಪಿಎಫ್‍ಐ ಅನ್ನು, ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ಗುಂಡು ಹೊಡೆದಿದ್ದಾರೆ.

ಅದನ್ನೇ ಕಾದು ಕುಳಿತಿದ್ದ ಟಿವಿವಾಹಿನಿಗಳು ಪಿಎಫ್‍ಐ ಬ್ಯಾನ್ ಮಾಡಬೇಕು ಎಂಬ ಬೊಂಬಡ ಬಜಾಯಿಸಲು ಶುರುಮಾಡಿದ್ದಾರೆ. ಪಿಎಫ್‍ಐ ಮೇಲೆ ಸಾಕಷ್ಟು ದೂರುಗಳಿವೆ, ಚಾರ್ಜ್‍ಶೀಟ್ ಇವೆ ಎಂದೆಲ್ಲಾ ಮಾತಾಡಿ ಅದಕ್ಕೂ ಐಸಿಸ್‍ಗೂ ಲಿಂಕ್ ಮಾಡಲು ಹೊರಟಿದ್ದಾರೆ. ಅಯೋಧ್ಯೆ ತೀರ್ಪನ್ನು ತನ್ವೀರ್ ಸೇಠ್ ಸ್ವಾಗತಿಸಿದ್ದರು. ಅದಕ್ಕಾಗಿ ಪಿಎಫ್‍ಐ ಕಾರ್ಯಕರ್ತ ಅವರ ಮೇಲೆ ಕೊಲೆಯತ್ನ ನಡೆಸಿದ್ದಾನೆ ಎಂದೂ ಹೇಳಿಬಿಟ್ಟರು.

ವಾಸ್ತವ ಸಂಗತಿಗಳನ್ನು ಅವಲೋಕಿಸಿದರೆ ಈ ಕೊಲೆಗೆ ಪಿಎಫ್‍ಐ ಕಾರಣವಿದ್ದಂತೆ ಕಾಣುತ್ತಿಲ್ಲ. ಏಕೆಂದರೆ ಯಾವುದೇ ಕೊಲೆ ಮಾಡಬೇಕಾದರೆ ಅದರಿಂದ ಅವರಿಗೆ ಲಾಭವಾಗಬೇಕು. ಹಾಗಾದಾಗ ಅಂತಹ ಯತ್ನ ಮಾಡುತ್ತಾರೆ ಎನ್ನಬಹುದು. ಸದ್ಯ ತನ್ವೀರ್ ಸೇಠ್‍ರವರನ್ನು ಪಿಎಫ್‍ಐನ ಚುನಾವಣಾ ವೇದಿಕೆಯಾದ ಎಸ್‍ಡಿಪಿಐ ರಾಜಕೀಯವಾಗಿ ಎದುರಿಸಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಅವರ ಕೊಲೆ ಅಥವಾ ಅವರ ಮೇಲಿನ ಹಲ್ಲೆಯಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಿರುವಾಗ ಅವರೇಕೆ ಕೊಲ್ಲಲು ಹೋಗುತ್ತಾರೆ ಎಂಬುದು ನರಸಿಂಹರಾಜ ಕ್ಷೇತ್ರದ ಜನರ ಮಾತು.

ಇನ್ನು ಕೊಲೆಯತ್ನದ ಆರೋಪಿ ಫರಾನ್ ಖಾನ್ ತನ್ವೀರ್ ಸೇಠ್‍ಗೂ ಆಪ್ತ, ಎಸ್‍ಡಿಪಿಐಗೂ ಆಪ್ತ. ಜೊತೆಗೆ ಜೆಡಿಎಸ್‍ಗೂ ಆಪ್ತನೆಂದರೆ ಇವರಲ್ಲಿ ಯಾರು ಕಾಸು ಕೊಟ್ಟರೂ ಸಹ ಅವರ ಕಾರ್ಯಕ್ರಮಗಳಿಗೆ ಜನ ಕರೆದುಕೊಂಡು ಹೋಗುವುದು ಅವನ ಕಾಯಕ. ಆತ ಪಿಎಫ್‍ಐ ಕಾರ್ಯಕ್ರಮ ದಲ್ಲಿದ್ದ ಫೋಟೋಗಳು ಹೊರ ಬೀಳುತ್ತಿದ್ದಂತೆ, ಪಿಎಫ್‍ಐ ಸ್ವತಃ ತನ್ವೀರ್ ಸೇಠ್‍ರೊಂದಿಗೇ ಆತನಿರುವ ಫೋಟೋಗಳನ್ನು ಹೊರಬಿಟ್ಟಿತು. ಹೀಗಿರುವಾಗ ತನಗೊಂದು ಉದ್ಯೋಗ ಕೊಡಿ ಎಂದು ಪದೇ ಪದೇ ಗೆದ್ದ ತನ್ವೀರ್ ಸೇಠ್ ಬಳಿ ದುಂಬಾಲು ಬಿದ್ದಿದ್ದ ಎನ್ನಲಾಗುತ್ತಿದೆ. ಅವರು ಸೂಕ್ತ ಉದ್ಯೋಗ ಕೊಡಿಸಿಲ್ಲ. ಅದೇ ಸಮಯಕ್ಕೆ ತಾನು ಸೆಲೆಬ್ರಿಟಿಗಳನ್ನು ಕೊಲ್ಲುವ ಮೂಲಕ ಫೇಮಸ್ ಆಗಬೇಕು ಎಂದು ತನ್ನ ಗೆಳೆಯರೊಂದಿಗೆ ಆಗಾಗ ಹೇಳಿಕೊಳ್ಳುತ್ತಿದ್ದ ಎಂದೂ ವರದಿಗಳು ಬಂದಿವೆ. ಹಾಗೆ ನೋಡಿದರೆ ಈತ ಹತಾಶ ವ್ಯಕ್ತಿಯಂತೆ ಕಂಡುಬರುತ್ತಾನೆ. ಇಂತಹ ಸ್ಥಿಮಿತತೆ ಇಲ್ಲದವ ಮಾಡಿದ ಆ ಒಂದು ಯತ್ನ ಈಗ ನೂರಾರು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸ್ವತಃ ಆತನು ಭಾವಿಸಿರಲಿಲ್ಲವೇನೋ?

ಪಿಎಫ್‍ಐ ಬ್ಯಾನ್ ಸಾಧ್ಯವೇ?

ಪಿಎಫ್‍ಐ, ಎಸ್‍ಡಿಪಿಐ ಮೇಲೆ ಕೇಸುಗಳಿಲ್ಲವೇನೆಂದಲ್ಲ. ಅವರು ಹಿಂಸೆಗಿಳಿದಿದ್ದಾರೆ ಎಂದು ಮಂಗಳೂರು, ಕೇರಳದಲ್ಲಿ ಪದೇ ಪದೇ ಆರೋಪಗಳು ಬರುವುದು ನಿಜ. ಹಾಗೆಂದ ಮಾತ್ರಕ್ಕೆ ಸಂಘಟನೆಯೊಂದನ್ನು ಬ್ಯಾನ್ ಮಾಡಲು ಸಾಧ್ಯವೇ? ಸಹಜವಾಗಿ ಚರ್ಚೆ ಆರೆಸ್ಸೆಸ್‍ನತ್ತ ಹೊರಳುತ್ತದೆ. ಆರ್‍ಎಸ್‍ಎಸ್ ಮೇಲೆ ಎಷ್ಟು ಕೇಸುಗಳಿಲ್ಲ? ಅದು ಕೂಡ ಮೂರು ಬಾರಿ ಬ್ಯಾನ್ ಆಗಿದೆ ಮತ್ತು ಕಡೆಯ ಬಾರಿ ಕೋರ್ಟ್‍ನಲ್ಲಿ ಅದನ್ನು ಹಿಂಪಡೆಯಲಾಯಿತು. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದು ಇನ್ನೊಂದು ಹೆಸರಿನಲ್ಲಿ ತಲೆಎತ್ತುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯೇನು?

ಮೊನ್ನೆ ನಡೆದ ಮಂಗಳೂರು ಸ್ಥಳೀಯ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಲ್ಲದೇ ಹಲವೆಡೆ ಪೈಪೋಟಿ ನೀಡಿದೆ. ತನ್ವೀರ್ ಸೇಠ್‍ರವರು ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರದಲ್ಲಿಯೂ ಸಹ ಅದು ಕೆಲವೊಮ್ಮೆ ಎರಡನೇ ಸ್ಥಾನಕ್ಕೆ ಬಂದು ನಿಂತಿದ್ದಿದೆ. ಇನ್ನು ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವೆಯೂ ಮುಸ್ಲಿಂ ಮತಗಳ ವಿಚಾರದಲ್ಲಿ ಪೈಪೋಟಿ ಇದೆ. ಕಾಂಗ್ರೆಸ್ ಪಾಲಿಗಿದ್ದ ಮುಸ್ಲಿಂ ಮತಗಳಲ್ಲಿ ಒಂದಷ್ಟು ಪಾಲನ್ನು ಎಸ್‍ಡಿಪಿಐ ಪಡೆದುಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಎಸ್‍ಡಿಪಿಐ ಕಾರಣವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದ್ದಿದೆ. ಸಿಪಿಎಂ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಎಸ್‍ಡಿಪಿಐ ಅನ್ನು ವಿರೋಧಿಸುತ್ತವೆ.

ಅವೆಲ್ಲಾ ಚರ್ಚೆಗಳು ಈ ಸಂದರ್ಭದಲ್ಲಿ ಮತ್ತೊಮ್ಮೆ ಮೇಲೆದ್ದಿವೆಯಾದರೂ, ಕೊಲೆಗೆ ಪಿಎಫ್‍ಐ ಕಾರಣವಿರಬಹುದೆಂಬ ತರ್ಕವನ್ನು ಬಹುತೇಕರು ಒಪ್ಪುತ್ತಿಲ್ಲ. ನಿಷ್ಪಕ್ಷಪಾತ ತನಿಖೆಯಷ್ಟೇ ಸತ್ಯವನ್ನು ಹೊರತರಬಲ್ಲುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...