Homeಮುಖಪುಟನಮ್ಮ ಫೋನ್‌ ಟ್ಯಾಪ್‌ ಮಾಡಿ ಅದನ್ನು ಆದಿತ್ಯನಾಥ್‌ ಕೇಳುತ್ತಿದ್ದಾರೆ: ಅಖಿಲೇಶ್‌ ಆರೋಪ

ನಮ್ಮ ಫೋನ್‌ ಟ್ಯಾಪ್‌ ಮಾಡಿ ಅದನ್ನು ಆದಿತ್ಯನಾಥ್‌ ಕೇಳುತ್ತಿದ್ದಾರೆ: ಅಖಿಲೇಶ್‌ ಆರೋಪ

- Advertisement -
- Advertisement -

ತಮ್ಮ ನಾಲ್ವರು ನಿಕಟವರ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಒಂದು ದಿನದ ನಂತರ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ನಾಯಕರ ಫೋನ್‌ಗಳು ಮತ್ತು ಅವರ ಕಚೇರಿಯ ದೂರವಾಣಿಗಳನ್ನು ಕದ್ದಾಲಿಸುತ್ತಿದ್ದಾರೆ ಎಂದು ಭಾನುವಾರ ಆರೋಪಿಸಿದ್ದಾರೆ. ‘ಮುಖ್ಯಮಂತ್ರಿ ಪ್ರತಿ ಸಂಜೆ ಧ್ವನಿಮುದ್ರಿಕೆಗಳನ್ನು ಆಲಿಸುತ್ತಾರೆ’ ಎಂದಿರುವ ಅಖಿಲೇಶ್‌‌ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ ಮೇಲೆ ಗಂಭೀರ ಆರೋಪ ಹೊರಿಸಿದ್ದಾರೆ.

ಐಟಿ ದಾಳಿಗಳ ಬಗ್ಗೆ ಮಾತನಾಡಿದ ಅವರು, ಇದು ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂಬುದರ ಸೂಚನೆಯಾಗಿದೆ ಎಂದಿದ್ದಾರೆ. ಅಖಿಲೇಶ್ ಅವರ ಖಾಸಗಿ ಕಾರ್ಯದರ್ಶಿ ಗಜೇಂದ್ರ ಯಾದವ್, ವಕ್ತಾರ ರಾಜೀವ್ ರೈ, ಪಕ್ಷದ ನಾಯಕ ಮನೋಜ್ ಯಾದವ್ ಮತ್ತು ಸ್ನೇಹಿತ ಮತ್ತು ಉದ್ಯಮಿ ರಾಹುಲ್ ಭಾಸಿನ್ ಸೇರಿದಂತೆ ಎಸ್‌ಪಿ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ಶನಿವಾರ ಸರಣಿ ದಾಳಿ ನಡೆಸಿತ್ತು.

ಇದನ್ನೂ ಓದಿ: ಚುನಾವಣೆ ಬಂದಿದೆ, ಮುಂದಕ್ಕೆ ಇಡಿ, ಸಿಬಿಐ ಬರುತ್ತದೆ: ಐಟಿ ದಾಳಿ ಬಗ್ಗೆ ಅಖಿಲೇಶ್‌ ಯಾದವ್‌

ಮುಖ್ಯಮಂತ್ರಿ ಆದಿತ್ಯನಾಥ್ ಅವರು “ಅನುಪಯೋಗಿ” ಎಂದು ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಶನಿವಾರವಷ್ಟೇ, ಪ್ರಧಾನಿ ನರೇಂದ್ರ ಮೋದಿ, ‘ಯುಪಿ ಪ್ಲಸ್‌‌ ಯೋಗಿ, ಉಪಯೋಗಿ’ ಎಂದು ಆದಿತ್ಯನಾಥ್‌ ಅವರನ್ನು ಬಣ್ಣಿಸಿದ್ದರು.

“ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಮಾಡಿದಂತೆ ಬಿಜೆಪಿ ಈಗ ಕೆಲಸ ಮಾಡಲು ಪ್ರಾರಂಭಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಅವರ ತಂತ್ರಗಳು ಹೆಚ್ಚಾಗುತ್ತವೆ. ಈ ವರ್ಷದ ಆರಂಭದಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಇದೇ ರೀತಿಯ ತಂತ್ರಗಳನ್ನು ಪ್ರಯೋಗಿಸಿತ್ತು. ಆದರೆ ಅದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ” ಎಂದು ಅಖಿಲೇಶ್‌ ಹೇಳಿದ್ದಾರೆ.

“ಈಗ ತೆರಿಗೆ ಇಲಾಖೆ ಬಂದಿದೆ… ಮುಂದೆ ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಬರಲಿದೆ ಮತ್ತು ಅದರ ಸಿಬಿಐ ಕೂಡಾ ಬರಲಿದೆ. ಆದರೆ ಸೈಕಲ್ (ಸಮಾಜವಾದಿ ಪಕ್ಷದ ಚುನಾವಣಾ ಚಿಹ್ನೆ) ಮಾತ್ರ ನಿಲ್ಲುವುದಿಲ್ಲ” ಎಂದು ಅಖಿಲೇಶ್ ಮತ್ತೇ ಉಚ್ಛರಿಸಿದ್ದಾರೆ.

ಕೆಟ್ಟ ನಾಟಕವಾಡುತ್ತಿರುವ ಅಧಿಕಾರಿಗಳ ಬಗ್ಗೆ ನನಗೆ ಅರಿವಿದೆ ಎಂದು ಹೇಳಿದ ಅಖಿಲೇಶ್, “ಅಧಿಕಾರಕ್ಕೆ ಬಂದ ಮೇಲೆ ಅವರೊಂದಿಗೆ ಸೂಕ್ತ ರೀತಿಯಲ್ಲಿ ವ್ಯವಹರಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...