Homeಕರ್ನಾಟಕಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

- Advertisement -
- Advertisement -

’ಹೊಸ ಧರ್ಮಗಳ ಉದಯ’ ಎಂಬ ಪಾಠದಲ್ಲಿ ’ವೈದಿಕ ಧರ್ಮದಲ್ಲಿನ ದಬ್ಬಾಳಿಕೆಯಿಂದ ಬೇಸತ್ತು ಭಾರತದಲ್ಲಿ ಶೋಷಿತ ಜಾತಿಗಳಿಗೆ ಸೇರಿದವರು ಹೊಸ ಧರ್ಮಗಳಿಗೆ ಸೇರಿದರು’ ಎಂದಿದೆ ಎಂಬ ಕಾರಣಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದರ ಕುರಿತು ಹುಯಿಲೆದ್ದಿತ್ತು. ನಂತರ ಟಿಪ್ಪು ಸುಲ್ತಾನರ ಕುರಿತ ಪಾಠಗಳನ್ನು ಬದಲಿಸುತ್ತೇವೆ ಎಂದರು. ಆನಂತರ ಎಡಪಂಥೀಯರ ಕೆಲವು ಪಠ್ಯಗಳಿದ್ದವು ಎಂದೂ ಹೇಳಿದರು. (ಅಂತಹ ಎಡಪಂಥೀಯರಾದ ಡಾ.ಜಿ.ರಾಮಕೃಷ್ಣ ಅವರು ಬರೆದದ್ದು ಇನ್ನೊಬ್ಬ ಎಡಪಂಥೀಯ ಭಗತ್ ಸಿಂಗ್ ಬಗೆಗೆ ಆಗಿತ್ತು). ಆದರೆ ಮಾಡಿದ್ದು ಮಾತ್ರ ಬೇರೆ. ಈ ಪಠ್ಯಪುಸ್ತಕ ಪರಿಷ್ಕರಣವಾದಿಗಳು ತೆಗೆದ ಹಲವು ಪಾಠಗಳು ಈಗಾಗಲೇ ಚರ್ಚೆಗೆ ಒಳಗಾಗಿವೆ. ಹಾಗಾಗಿ ಅದರ ಬಗ್ಗೆ ಹೆಚ್ಚು ಹೇಳಹೋಗುವುದಿಲ್ಲ. ಸೇರಿಸಿರುವ ಸಂಗತಿಗಳು ನಿಸ್ಸಂದೇಹವಾಗಿ ಅಪಾಯಕಾರಿಯಾದುದಾಗಿವೆ.

ಬಿಜೆಪಿ ಮತ್ತು ಅದರ ಪರಿವಾರವು ನಾರಾಯಣಗುರುಗಳನ್ನು, ಕುವೆಂಪು ಅವರನ್ನು, ಬಾಬಾಸಾಹೇಬ್ ಅಂಬೇಡ್ಕರರನ್ನು, ಮಹಾತ್ಮಾ ಗಾಂಧಿಯವರನ್ನು ತಮ್ಮ ಚಿಂತನೆಯ ಶತ್ರುಗಳೆಂದು ಸಹಜವಾಗಿಯೇ ಭಾವಿಸಿದ್ದಾರೆ. ಹೊರಗೆ ಹೇಳಲಾಗದ್ದನ್ನು ತಮ್ಮ ಶಾಖೆಗಳಲ್ಲಿ ಹೇಳಿಕೊಳ್ಳುತ್ತಾರೆ. ಶಾಖೆಗಳಲ್ಲಿ ಗೋಡ್ಸೆಯ ’ಆರಾಧನೆ’ ಇರುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಅಪಾರ ಪ್ರಮಾಣದ ಸುಳ್ಳುಗಳನ್ನು ಅಲ್ಲಿ ಬಿತ್ತರಿಸಲಾಗುತ್ತದೆ. ಅಂತಹ ಸುಳ್ಳುಗಳನ್ನು ಬೇರೆಬೇರೆ ಪ್ರಮಾಣದಲ್ಲಿ ಸಮಾಜದಲ್ಲೂ ಹರಡಲಾಗಿದೆ. ನಿಧಾನಕ್ಕೆ ಅವುಗಳಿಗೆ ಮಾನ್ಯತೆ ಸಿಕ್ಕಂತೆಲ್ಲಾ ಬಹಿರಂಗವಾಗಿಯೂ ಮಾತನಾಡತೊಡಗುತ್ತಾರೆ. ಇದು ಅವರು ಬಳಸುತ್ತಾ ಬಂದಿರುವ ವಿಧಾನ Modus operandi.

ಅಂತಹದ್ದರಲ್ಲಿ ಒಂದು ಅಂಶ 10ನೇ ತರಗತಿಯ ಸಮಾಜವಿಜ್ಞಾನ ಪಠ್ಯದಲ್ಲಿ ಇದೆ. ಅದರ ’ಅಂತಿಮ’ ಪಿಡಿಎಫ್ ಪ್ರತಿ ಈಗ ಲಭ್ಯವಿದ್ದು, ಅದೀಗ ಎಲ್ಲೆಲ್ಲೂ ಓಡಾಡುತ್ತಿದೆ. ಭಾರತ ಒಕ್ಕೂಟ ವ್ಯವಸ್ಥೆಯಲ್ಲಿನ ವಿವಿಧ ಭಾಷಾವಾರು ಪ್ರಾಂತಗಳ ಹಕ್ಕುಗಳು ಸಾಮಾನ್ಯವಾಗಿ ಬಿಜೆಪಿ ಮತ್ತದರ ಪರಿವಾರಕ್ಕೆ ಯಾವಾಗಲೂ ಅಪಥ್ಯ. ಅದನ್ನು ಹೊಸಕುವ ಕಾರಣಕ್ಕೇ ಜಿಎಸ್‌ಟಿ ಮಾತ್ರವಲ್ಲದೇ ಹಲವು ರೀತಿಯ ನೀತಿಗಳನ್ನು ಬಿಜೆಪಿ ಜಾರಿಗೆ ತಂದಿರುವುದನ್ನು ನಾವು ನೋಡುತ್ತೇವೆ. ಮೊದಲು ಚಿಂತನೆಯನ್ನು ಹರಿಯಬಿಡಬೇಕು, ನಂತರ ಸಾರ್ವಜನಿಕ ಮಾನ್ಯತೆ ಪಡೆದುಕೊಳ್ಳುವುದು ಮತ್ತು ಅಂತಿಮವಾಗಿ ಅದನ್ನೇ ಅಧಿಕೃತ ಸರ್ಕಾರಿ ನೀತಿ ಮಾಡುವುದು ಗುರಿ. ಈಗಾಗಲೇ ರಾಜ್ಯಗಳ ಹಕ್ಕುಗಳನ್ನು ಸಾಕಷ್ಟು ಕಿತ್ತುಕೊಂಡಿದ್ದರೂ, ರಾಜ್ಯಗಳ ಅಸ್ಮಿತೆಯನ್ನು ಅಳಿಸುವುದು ಸುಲಭವಲ್ಲ. ಅದನ್ನು ಮಾಡಲು ಈಗ ಪಠ್ಯಪುಸ್ತಕವನ್ನೂ ಬಳಸಿಕೊಂಡಿರುವುದು ಎದ್ದು ಕಾಣುತ್ತದೆ. ಕರ್ನಾಟಕತ್ವ ಅಥವಾ ಪ್ರಾದೇಶಿಕ ಚಿಂತನೆಯ ವಿರುದ್ಧ ಎಳೆಯ ಮಕ್ಕಳಲ್ಲೇ ಅಭಿಪ್ರಾಯ ಮೂಡಿಸುವುದು ಅವರ ಉದ್ದೇಶವಾಗಿದೆ. ಅದರ ಭಾಗವಾಗಿ 10ನೇ ತರಗತಿಯ ಸಮಾಜಶಾಸ್ತ್ರ ಪುಸ್ತಕದ ರಾಜ್ಯಶಾಸ್ತ್ರ ಅಧ್ಯಾಯ 6ರಲ್ಲಿ (ಪುಟ ಸಂಖ್ಯೆ 56) ಹೀಗೆ ಹೇಳಲಾಗುತ್ತದೆ.

’ಒಂದು ನಿರ್ದಿಷ್ಟ ಜನಸಮುದಾಯ ತಾವು ವಾಸಿಸುವ ಪ್ರದೇಶವನ್ನೇ ಅತ್ಯಂತ ಗಾಢವಾಗಿ ಪ್ರೀತಿಸಿ, ಕೇವಲ ಆ ಭಾಗದ ಬಗ್ಗೆಯೇ ಅತಿಯಾದ ಅಭಿಮಾನವನ್ನು ಬೆಳೆಸಿಕೊಂಡರೆ ಅದನ್ನು ಪ್ರಾದೇಶಿಕವಾದ ಎಂದು ಕರೆಯಬಹುದು. ಭಾರತದಂತಹ ವಿಶಾಲ ರಾಷ್ಟ್ರ ಸಹಜವಾಗಿ ಹಲವಾರು ಪ್ರಾದೇಶಿಕ ವಿಭಿನ್ನತೆಯನ್ನು ಹೊಂದಿದ ದೇಶ. ಒಂದು ನಿರ್ದಿಷ್ಟ ಹಂತದವರೆಗೆ ಈ ಪ್ರಾದೇಶಿಕವಾದ ಸಹನೆಗೆ ಯೋಗ್ಯ ಎನಿಸುತ್ತದೆ. ತಮ್ಮದೇ ಪ್ರದೇಶದ ಸರ್ವತೋಮುಖ ಬೆಳವಣಿಗೆಗೆ ಪ್ರಯತ್ನಿಸಲು ಈ ಭಾವನೆ ಪ್ರೇರಣೆ ನೀಡುತ್ತದೆ. ಆದರೆ ಈ ಪ್ರಾದೇಶಿಕ ಮನೋಭಾವ ತೀರಾ ಹೆಚ್ಚು ಎನಿಸಿದರೆ ಅದು ರಾಷ್ಟ್ರದ ಏಕತೆ ಹಾಗೂ ಹಿತಾಸಕ್ತಿಗಳಿಗೆ ಧಕ್ಕೆ ಒದಗಿಸುತ್ತದೆ. ಆದುದರಿಂದ ಆಯಾಯಾ ಪ್ರದೇಶದ ಜನಸಮುದಾಯ ತಮ್ಮದೇ ಪ್ರಾದೇಶಿಕ ಮನೋಭಾವ ಹೊಂದುವ ಜೊತೆಜೊತೆಗೇ ಸಮಗ್ರ ದೇಶದ ಪ್ರಗತಿಯ ಬಗೆಗೂ ಚಿಂತನೆ ಹರಿಸುವಿಕೆ ಅತ್ಯಗತ್ಯ.

ಆಯಾ ಪ್ರದೇಶಗಳ ಚಾರಿತ್ರಿಕ ಹಿನ್ನೆಲೆ, ಸಾಮಾಜಿಕ ಕಟ್ಟುಪಾಡುಗಳು, ಆರ್ಥಿಕ ವಿಚಾರಗಳು, ಸಾಂಸ್ಕೃತಿಕ ವಿಭಿನ್ನತೆಗಳು ಹಾಗೂ ಭೌಗೋಳಿಕ ಪರಿಸರ-ಅಲ್ಲಿನ ಜನಸಮುದಾಯದಲ್ಲಿ ಪ್ರಾದೇಶಿಕವಾದವನ್ನು ಸಹಜವಾಗಿ ಬೆಳೆಸುತ್ತದೆ. ಅತಿಯಾದ ಭಾಷಾಭಿಮಾನವೂ ರಾಷ್ಟ್ರೀಯವಾದದ ವಿರುದ್ಧ ಸಂಕುಚಿತ ಮನೋಭಾವವನ್ನು ಬೆಳೆಸುತ್ತದೆ. ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ. ಇತ್ತೀಚೆಗೆ ಆಂಧ್ರಪ್ರದೇಶದಲ್ಲಿನ ತೆಲಂಗಾಣದ ಭಾಗದ ಪ್ರಾದೇಶಿಕವಾದ ಹೋರಾಟವನ್ನು ಗಮನಿಸಬಹುದು. ದೇಶದ ಇನ್ನಿತರ ಭಾಗಗಳಲ್ಲಿ ನಡೆಯುತ್ತಿರುವ ಪ್ರಾದೇಶಿಕವಾದದ ಹೋರಾಟಗಳು ಕೂಡಾ ದೇಶದ ಅಭಿವೃದ್ಧಿ(ಗೆ) ತೊಡಕಾಗುವ ಸಾಧ್ಯತೆಗಳಿವೆ.’

ಮೇಲ್ನೋಟಕ್ಕೆ ’ಅತಿಯಾದ’ ಪ್ರಾದೇಶಿಕ ಮನೋಭಾವದ ಕುರಿತು ಹೇಳುತ್ತಿದ್ದಾರೆ ಎನಿಸಿದರೂ, ಅಂತಹ ಅತಿಯ ಅಪಾಯವನ್ನು ವಿವರಿಸಲು ಅವರು ಮುಂದಿಡುತ್ತಿರುವ ಉದಾಹರಣೆ ತೆಲಂಗಾಣದ್ದಾಗಿದೆ. ಅದನ್ನು ಪ್ರಸ್ತಾಪಿಸುವ ಹಿಂದಿನ ವಾಕ್ಯದಲ್ಲಿ ’ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ’ ಎಂದು ಹೇಳಲಾಗಿದೆ. ಒಂದು ವೇಳೆ ವಾದಕ್ಕಾಗಿ ತೆಲಂಗಾಣ ಹೋರಾಟದಲ್ಲಿ ಅತಿ ಇತ್ತು ಎಂದು ಒಪ್ಪಿಕೊಂಡರೂ, ಅದರಲ್ಲಿ ’ದೇಶದ ಏಕತೆಗೆ ಧಕ್ಕೆ ಉಂಟಾಗುವ’ ಯಾವ ಅಂಶವಿತ್ತು? ಅವರು ಕೇಳುತ್ತಿದ್ದದ್ದು ಮತ್ತು ಪಡೆದುಕೊಂಡಿದ್ದು ಪ್ರತ್ಯೇಕ ರಾಜ್ಯವನ್ನು ಮಾತ್ರ.

ಅಷ್ಟೇ ಅಲ್ಲದೇ, ಈ ದೇಶದಲ್ಲಿ ಇರುವ ವಿಭಿನ್ನತೆಗಳು ’ಸಹಜವಾಗಿ’ ಪ್ರಾದೇಶಿಕವಾದವನ್ನು ಬೆಳೆಸುತ್ತವೆ ಎಂದು ಈ ಪಠ್ಯದಲ್ಲಿ ಹೇಳಲಾಗುತ್ತದೆ. ಒಂದೆಡೆ ಪ್ರಾದೇಶಿಕವಾದವು ಈ ದೇಶವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಒಂದು ಎಂದು ಪಾಠದ ಆರಂಭದಲ್ಲೇ ಹೇಳಲಾಗಿದೆ; ನಂತರ ಅದನ್ನು ದೇಶದ ಏಕತೆಗೆ ಧಕ್ಕೆ ಎನ್ನಲಾಗುತ್ತದೆ; ಜೊತೆಜೊತೆಗೇ ವಿಭಿನ್ನತೆಗಳು ’ಸಹಜವಾಗಿ’ ಇಂತಹ ಒಂದು ಸವಾಲನ್ನು ದೇಶದ ಮುಂದೊಡ್ಡುತ್ತವೆ ಎಂದು ಬಿಂಬಿಸಲಾಗಿದೆ.

ರಾಷ್ಟ್ರೀಯವಾದದ ಕುರಿತು, ಇಡೀ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಯಾರಿಗೆ ಪಾಠ ಹೇಳಲಾಗುತ್ತದೆ? ಯಾರು ದೊಡ್ಡ ಪ್ರಮಾಣದ ಸಂಪನ್ಮೂಲ ಸೃಷ್ಟಿಸಿ, ಒಕ್ಕೂಟ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಕೊಡುಗೆ ನೀಡುತ್ತಾ ಇಡೀ ದೇಶದ ಅಭಿವೃದ್ಧಿಗೂ ಕಾರಣರಾಗುತ್ತಿದ್ದಾರೋ ಅವರಿಗೆ. ಅಂದರೆ ತಮಿಳುನಾಡು, ಕರ್ನಾಟಕದಂತಹ ರಾಜ್ಯಗಳಿಗೆ. ಇದನ್ನು ಕರ್ನಾಟಕದ ಶಾಲಾ ಪಠ್ಯಗಳಲ್ಲೇ ತುರುಕುವ ಧಾರ್ಷ್ಟ್ಯವನ್ನು ಪ್ರದರ್ಶಿಸಲು ಸಾಧ್ಯವಾಗಿರುವುದು ಈ ನಾಡಿನ ದುರಂತ.

ಅಂದರೆ ಪಠ್ಯಪುಸ್ತಕ ಪರಿಷ್ಕರಣೆಯೆಂಬುದು ಒಂದು ಬಹುಮುಖಿ ದಾಳಿಯಾಗಿದೆ. ಇದನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿರುವವರೂ ಈ ಬಹುಮುಖಿ ಆಯಾಮವನ್ನು ಅರಿತುಕೊಂಡು ತಿರುಗೇಟು ನೀಡುವುದು ಅತ್ಯಗತ್ಯವಾದುದಾಗಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಮತ್ತು ಮತೀಯವಾದ; ಬ್ರಾಹ್ಮಣವಾದಿ ಮೌಲ್ಯಗಳನ್ನು ಹೇರುವ, ಉಳಿದವರನ್ನು ದಮನಕ್ಕೆ ಗುರಿಮಾಡುವ ಹಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...