Homeಕರ್ನಾಟಕಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

- Advertisement -
- Advertisement -

’ಹೊಸ ಧರ್ಮಗಳ ಉದಯ’ ಎಂಬ ಪಾಠದಲ್ಲಿ ’ವೈದಿಕ ಧರ್ಮದಲ್ಲಿನ ದಬ್ಬಾಳಿಕೆಯಿಂದ ಬೇಸತ್ತು ಭಾರತದಲ್ಲಿ ಶೋಷಿತ ಜಾತಿಗಳಿಗೆ ಸೇರಿದವರು ಹೊಸ ಧರ್ಮಗಳಿಗೆ ಸೇರಿದರು’ ಎಂದಿದೆ ಎಂಬ ಕಾರಣಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದರ ಕುರಿತು ಹುಯಿಲೆದ್ದಿತ್ತು. ನಂತರ ಟಿಪ್ಪು ಸುಲ್ತಾನರ ಕುರಿತ ಪಾಠಗಳನ್ನು ಬದಲಿಸುತ್ತೇವೆ ಎಂದರು. ಆನಂತರ ಎಡಪಂಥೀಯರ ಕೆಲವು ಪಠ್ಯಗಳಿದ್ದವು ಎಂದೂ ಹೇಳಿದರು. (ಅಂತಹ ಎಡಪಂಥೀಯರಾದ ಡಾ.ಜಿ.ರಾಮಕೃಷ್ಣ ಅವರು ಬರೆದದ್ದು ಇನ್ನೊಬ್ಬ ಎಡಪಂಥೀಯ ಭಗತ್ ಸಿಂಗ್ ಬಗೆಗೆ ಆಗಿತ್ತು). ಆದರೆ ಮಾಡಿದ್ದು ಮಾತ್ರ ಬೇರೆ. ಈ ಪಠ್ಯಪುಸ್ತಕ ಪರಿಷ್ಕರಣವಾದಿಗಳು ತೆಗೆದ ಹಲವು ಪಾಠಗಳು ಈಗಾಗಲೇ ಚರ್ಚೆಗೆ ಒಳಗಾಗಿವೆ. ಹಾಗಾಗಿ ಅದರ ಬಗ್ಗೆ ಹೆಚ್ಚು ಹೇಳಹೋಗುವುದಿಲ್ಲ. ಸೇರಿಸಿರುವ ಸಂಗತಿಗಳು ನಿಸ್ಸಂದೇಹವಾಗಿ ಅಪಾಯಕಾರಿಯಾದುದಾಗಿವೆ.

ಬಿಜೆಪಿ ಮತ್ತು ಅದರ ಪರಿವಾರವು ನಾರಾಯಣಗುರುಗಳನ್ನು, ಕುವೆಂಪು ಅವರನ್ನು, ಬಾಬಾಸಾಹೇಬ್ ಅಂಬೇಡ್ಕರರನ್ನು, ಮಹಾತ್ಮಾ ಗಾಂಧಿಯವರನ್ನು ತಮ್ಮ ಚಿಂತನೆಯ ಶತ್ರುಗಳೆಂದು ಸಹಜವಾಗಿಯೇ ಭಾವಿಸಿದ್ದಾರೆ. ಹೊರಗೆ ಹೇಳಲಾಗದ್ದನ್ನು ತಮ್ಮ ಶಾಖೆಗಳಲ್ಲಿ ಹೇಳಿಕೊಳ್ಳುತ್ತಾರೆ. ಶಾಖೆಗಳಲ್ಲಿ ಗೋಡ್ಸೆಯ ’ಆರಾಧನೆ’ ಇರುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಅಪಾರ ಪ್ರಮಾಣದ ಸುಳ್ಳುಗಳನ್ನು ಅಲ್ಲಿ ಬಿತ್ತರಿಸಲಾಗುತ್ತದೆ. ಅಂತಹ ಸುಳ್ಳುಗಳನ್ನು ಬೇರೆಬೇರೆ ಪ್ರಮಾಣದಲ್ಲಿ ಸಮಾಜದಲ್ಲೂ ಹರಡಲಾಗಿದೆ. ನಿಧಾನಕ್ಕೆ ಅವುಗಳಿಗೆ ಮಾನ್ಯತೆ ಸಿಕ್ಕಂತೆಲ್ಲಾ ಬಹಿರಂಗವಾಗಿಯೂ ಮಾತನಾಡತೊಡಗುತ್ತಾರೆ. ಇದು ಅವರು ಬಳಸುತ್ತಾ ಬಂದಿರುವ ವಿಧಾನ Modus operandi.

ಅಂತಹದ್ದರಲ್ಲಿ ಒಂದು ಅಂಶ 10ನೇ ತರಗತಿಯ ಸಮಾಜವಿಜ್ಞಾನ ಪಠ್ಯದಲ್ಲಿ ಇದೆ. ಅದರ ’ಅಂತಿಮ’ ಪಿಡಿಎಫ್ ಪ್ರತಿ ಈಗ ಲಭ್ಯವಿದ್ದು, ಅದೀಗ ಎಲ್ಲೆಲ್ಲೂ ಓಡಾಡುತ್ತಿದೆ. ಭಾರತ ಒಕ್ಕೂಟ ವ್ಯವಸ್ಥೆಯಲ್ಲಿನ ವಿವಿಧ ಭಾಷಾವಾರು ಪ್ರಾಂತಗಳ ಹಕ್ಕುಗಳು ಸಾಮಾನ್ಯವಾಗಿ ಬಿಜೆಪಿ ಮತ್ತದರ ಪರಿವಾರಕ್ಕೆ ಯಾವಾಗಲೂ ಅಪಥ್ಯ. ಅದನ್ನು ಹೊಸಕುವ ಕಾರಣಕ್ಕೇ ಜಿಎಸ್‌ಟಿ ಮಾತ್ರವಲ್ಲದೇ ಹಲವು ರೀತಿಯ ನೀತಿಗಳನ್ನು ಬಿಜೆಪಿ ಜಾರಿಗೆ ತಂದಿರುವುದನ್ನು ನಾವು ನೋಡುತ್ತೇವೆ. ಮೊದಲು ಚಿಂತನೆಯನ್ನು ಹರಿಯಬಿಡಬೇಕು, ನಂತರ ಸಾರ್ವಜನಿಕ ಮಾನ್ಯತೆ ಪಡೆದುಕೊಳ್ಳುವುದು ಮತ್ತು ಅಂತಿಮವಾಗಿ ಅದನ್ನೇ ಅಧಿಕೃತ ಸರ್ಕಾರಿ ನೀತಿ ಮಾಡುವುದು ಗುರಿ. ಈಗಾಗಲೇ ರಾಜ್ಯಗಳ ಹಕ್ಕುಗಳನ್ನು ಸಾಕಷ್ಟು ಕಿತ್ತುಕೊಂಡಿದ್ದರೂ, ರಾಜ್ಯಗಳ ಅಸ್ಮಿತೆಯನ್ನು ಅಳಿಸುವುದು ಸುಲಭವಲ್ಲ. ಅದನ್ನು ಮಾಡಲು ಈಗ ಪಠ್ಯಪುಸ್ತಕವನ್ನೂ ಬಳಸಿಕೊಂಡಿರುವುದು ಎದ್ದು ಕಾಣುತ್ತದೆ. ಕರ್ನಾಟಕತ್ವ ಅಥವಾ ಪ್ರಾದೇಶಿಕ ಚಿಂತನೆಯ ವಿರುದ್ಧ ಎಳೆಯ ಮಕ್ಕಳಲ್ಲೇ ಅಭಿಪ್ರಾಯ ಮೂಡಿಸುವುದು ಅವರ ಉದ್ದೇಶವಾಗಿದೆ. ಅದರ ಭಾಗವಾಗಿ 10ನೇ ತರಗತಿಯ ಸಮಾಜಶಾಸ್ತ್ರ ಪುಸ್ತಕದ ರಾಜ್ಯಶಾಸ್ತ್ರ ಅಧ್ಯಾಯ 6ರಲ್ಲಿ (ಪುಟ ಸಂಖ್ಯೆ 56) ಹೀಗೆ ಹೇಳಲಾಗುತ್ತದೆ.

’ಒಂದು ನಿರ್ದಿಷ್ಟ ಜನಸಮುದಾಯ ತಾವು ವಾಸಿಸುವ ಪ್ರದೇಶವನ್ನೇ ಅತ್ಯಂತ ಗಾಢವಾಗಿ ಪ್ರೀತಿಸಿ, ಕೇವಲ ಆ ಭಾಗದ ಬಗ್ಗೆಯೇ ಅತಿಯಾದ ಅಭಿಮಾನವನ್ನು ಬೆಳೆಸಿಕೊಂಡರೆ ಅದನ್ನು ಪ್ರಾದೇಶಿಕವಾದ ಎಂದು ಕರೆಯಬಹುದು. ಭಾರತದಂತಹ ವಿಶಾಲ ರಾಷ್ಟ್ರ ಸಹಜವಾಗಿ ಹಲವಾರು ಪ್ರಾದೇಶಿಕ ವಿಭಿನ್ನತೆಯನ್ನು ಹೊಂದಿದ ದೇಶ. ಒಂದು ನಿರ್ದಿಷ್ಟ ಹಂತದವರೆಗೆ ಈ ಪ್ರಾದೇಶಿಕವಾದ ಸಹನೆಗೆ ಯೋಗ್ಯ ಎನಿಸುತ್ತದೆ. ತಮ್ಮದೇ ಪ್ರದೇಶದ ಸರ್ವತೋಮುಖ ಬೆಳವಣಿಗೆಗೆ ಪ್ರಯತ್ನಿಸಲು ಈ ಭಾವನೆ ಪ್ರೇರಣೆ ನೀಡುತ್ತದೆ. ಆದರೆ ಈ ಪ್ರಾದೇಶಿಕ ಮನೋಭಾವ ತೀರಾ ಹೆಚ್ಚು ಎನಿಸಿದರೆ ಅದು ರಾಷ್ಟ್ರದ ಏಕತೆ ಹಾಗೂ ಹಿತಾಸಕ್ತಿಗಳಿಗೆ ಧಕ್ಕೆ ಒದಗಿಸುತ್ತದೆ. ಆದುದರಿಂದ ಆಯಾಯಾ ಪ್ರದೇಶದ ಜನಸಮುದಾಯ ತಮ್ಮದೇ ಪ್ರಾದೇಶಿಕ ಮನೋಭಾವ ಹೊಂದುವ ಜೊತೆಜೊತೆಗೇ ಸಮಗ್ರ ದೇಶದ ಪ್ರಗತಿಯ ಬಗೆಗೂ ಚಿಂತನೆ ಹರಿಸುವಿಕೆ ಅತ್ಯಗತ್ಯ.

ಆಯಾ ಪ್ರದೇಶಗಳ ಚಾರಿತ್ರಿಕ ಹಿನ್ನೆಲೆ, ಸಾಮಾಜಿಕ ಕಟ್ಟುಪಾಡುಗಳು, ಆರ್ಥಿಕ ವಿಚಾರಗಳು, ಸಾಂಸ್ಕೃತಿಕ ವಿಭಿನ್ನತೆಗಳು ಹಾಗೂ ಭೌಗೋಳಿಕ ಪರಿಸರ-ಅಲ್ಲಿನ ಜನಸಮುದಾಯದಲ್ಲಿ ಪ್ರಾದೇಶಿಕವಾದವನ್ನು ಸಹಜವಾಗಿ ಬೆಳೆಸುತ್ತದೆ. ಅತಿಯಾದ ಭಾಷಾಭಿಮಾನವೂ ರಾಷ್ಟ್ರೀಯವಾದದ ವಿರುದ್ಧ ಸಂಕುಚಿತ ಮನೋಭಾವವನ್ನು ಬೆಳೆಸುತ್ತದೆ. ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ. ಇತ್ತೀಚೆಗೆ ಆಂಧ್ರಪ್ರದೇಶದಲ್ಲಿನ ತೆಲಂಗಾಣದ ಭಾಗದ ಪ್ರಾದೇಶಿಕವಾದ ಹೋರಾಟವನ್ನು ಗಮನಿಸಬಹುದು. ದೇಶದ ಇನ್ನಿತರ ಭಾಗಗಳಲ್ಲಿ ನಡೆಯುತ್ತಿರುವ ಪ್ರಾದೇಶಿಕವಾದದ ಹೋರಾಟಗಳು ಕೂಡಾ ದೇಶದ ಅಭಿವೃದ್ಧಿ(ಗೆ) ತೊಡಕಾಗುವ ಸಾಧ್ಯತೆಗಳಿವೆ.’

ಮೇಲ್ನೋಟಕ್ಕೆ ’ಅತಿಯಾದ’ ಪ್ರಾದೇಶಿಕ ಮನೋಭಾವದ ಕುರಿತು ಹೇಳುತ್ತಿದ್ದಾರೆ ಎನಿಸಿದರೂ, ಅಂತಹ ಅತಿಯ ಅಪಾಯವನ್ನು ವಿವರಿಸಲು ಅವರು ಮುಂದಿಡುತ್ತಿರುವ ಉದಾಹರಣೆ ತೆಲಂಗಾಣದ್ದಾಗಿದೆ. ಅದನ್ನು ಪ್ರಸ್ತಾಪಿಸುವ ಹಿಂದಿನ ವಾಕ್ಯದಲ್ಲಿ ’ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ’ ಎಂದು ಹೇಳಲಾಗಿದೆ. ಒಂದು ವೇಳೆ ವಾದಕ್ಕಾಗಿ ತೆಲಂಗಾಣ ಹೋರಾಟದಲ್ಲಿ ಅತಿ ಇತ್ತು ಎಂದು ಒಪ್ಪಿಕೊಂಡರೂ, ಅದರಲ್ಲಿ ’ದೇಶದ ಏಕತೆಗೆ ಧಕ್ಕೆ ಉಂಟಾಗುವ’ ಯಾವ ಅಂಶವಿತ್ತು? ಅವರು ಕೇಳುತ್ತಿದ್ದದ್ದು ಮತ್ತು ಪಡೆದುಕೊಂಡಿದ್ದು ಪ್ರತ್ಯೇಕ ರಾಜ್ಯವನ್ನು ಮಾತ್ರ.

ಅಷ್ಟೇ ಅಲ್ಲದೇ, ಈ ದೇಶದಲ್ಲಿ ಇರುವ ವಿಭಿನ್ನತೆಗಳು ’ಸಹಜವಾಗಿ’ ಪ್ರಾದೇಶಿಕವಾದವನ್ನು ಬೆಳೆಸುತ್ತವೆ ಎಂದು ಈ ಪಠ್ಯದಲ್ಲಿ ಹೇಳಲಾಗುತ್ತದೆ. ಒಂದೆಡೆ ಪ್ರಾದೇಶಿಕವಾದವು ಈ ದೇಶವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಒಂದು ಎಂದು ಪಾಠದ ಆರಂಭದಲ್ಲೇ ಹೇಳಲಾಗಿದೆ; ನಂತರ ಅದನ್ನು ದೇಶದ ಏಕತೆಗೆ ಧಕ್ಕೆ ಎನ್ನಲಾಗುತ್ತದೆ; ಜೊತೆಜೊತೆಗೇ ವಿಭಿನ್ನತೆಗಳು ’ಸಹಜವಾಗಿ’ ಇಂತಹ ಒಂದು ಸವಾಲನ್ನು ದೇಶದ ಮುಂದೊಡ್ಡುತ್ತವೆ ಎಂದು ಬಿಂಬಿಸಲಾಗಿದೆ.

ರಾಷ್ಟ್ರೀಯವಾದದ ಕುರಿತು, ಇಡೀ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಯಾರಿಗೆ ಪಾಠ ಹೇಳಲಾಗುತ್ತದೆ? ಯಾರು ದೊಡ್ಡ ಪ್ರಮಾಣದ ಸಂಪನ್ಮೂಲ ಸೃಷ್ಟಿಸಿ, ಒಕ್ಕೂಟ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಕೊಡುಗೆ ನೀಡುತ್ತಾ ಇಡೀ ದೇಶದ ಅಭಿವೃದ್ಧಿಗೂ ಕಾರಣರಾಗುತ್ತಿದ್ದಾರೋ ಅವರಿಗೆ. ಅಂದರೆ ತಮಿಳುನಾಡು, ಕರ್ನಾಟಕದಂತಹ ರಾಜ್ಯಗಳಿಗೆ. ಇದನ್ನು ಕರ್ನಾಟಕದ ಶಾಲಾ ಪಠ್ಯಗಳಲ್ಲೇ ತುರುಕುವ ಧಾರ್ಷ್ಟ್ಯವನ್ನು ಪ್ರದರ್ಶಿಸಲು ಸಾಧ್ಯವಾಗಿರುವುದು ಈ ನಾಡಿನ ದುರಂತ.

ಅಂದರೆ ಪಠ್ಯಪುಸ್ತಕ ಪರಿಷ್ಕರಣೆಯೆಂಬುದು ಒಂದು ಬಹುಮುಖಿ ದಾಳಿಯಾಗಿದೆ. ಇದನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿರುವವರೂ ಈ ಬಹುಮುಖಿ ಆಯಾಮವನ್ನು ಅರಿತುಕೊಂಡು ತಿರುಗೇಟು ನೀಡುವುದು ಅತ್ಯಗತ್ಯವಾದುದಾಗಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಮತ್ತು ಮತೀಯವಾದ; ಬ್ರಾಹ್ಮಣವಾದಿ ಮೌಲ್ಯಗಳನ್ನು ಹೇರುವ, ಉಳಿದವರನ್ನು ದಮನಕ್ಕೆ ಗುರಿಮಾಡುವ ಹಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...