Homeಕರ್ನಾಟಕಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

- Advertisement -
- Advertisement -

’ಹೊಸ ಧರ್ಮಗಳ ಉದಯ’ ಎಂಬ ಪಾಠದಲ್ಲಿ ’ವೈದಿಕ ಧರ್ಮದಲ್ಲಿನ ದಬ್ಬಾಳಿಕೆಯಿಂದ ಬೇಸತ್ತು ಭಾರತದಲ್ಲಿ ಶೋಷಿತ ಜಾತಿಗಳಿಗೆ ಸೇರಿದವರು ಹೊಸ ಧರ್ಮಗಳಿಗೆ ಸೇರಿದರು’ ಎಂದಿದೆ ಎಂಬ ಕಾರಣಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದರ ಕುರಿತು ಹುಯಿಲೆದ್ದಿತ್ತು. ನಂತರ ಟಿಪ್ಪು ಸುಲ್ತಾನರ ಕುರಿತ ಪಾಠಗಳನ್ನು ಬದಲಿಸುತ್ತೇವೆ ಎಂದರು. ಆನಂತರ ಎಡಪಂಥೀಯರ ಕೆಲವು ಪಠ್ಯಗಳಿದ್ದವು ಎಂದೂ ಹೇಳಿದರು. (ಅಂತಹ ಎಡಪಂಥೀಯರಾದ ಡಾ.ಜಿ.ರಾಮಕೃಷ್ಣ ಅವರು ಬರೆದದ್ದು ಇನ್ನೊಬ್ಬ ಎಡಪಂಥೀಯ ಭಗತ್ ಸಿಂಗ್ ಬಗೆಗೆ ಆಗಿತ್ತು). ಆದರೆ ಮಾಡಿದ್ದು ಮಾತ್ರ ಬೇರೆ. ಈ ಪಠ್ಯಪುಸ್ತಕ ಪರಿಷ್ಕರಣವಾದಿಗಳು ತೆಗೆದ ಹಲವು ಪಾಠಗಳು ಈಗಾಗಲೇ ಚರ್ಚೆಗೆ ಒಳಗಾಗಿವೆ. ಹಾಗಾಗಿ ಅದರ ಬಗ್ಗೆ ಹೆಚ್ಚು ಹೇಳಹೋಗುವುದಿಲ್ಲ. ಸೇರಿಸಿರುವ ಸಂಗತಿಗಳು ನಿಸ್ಸಂದೇಹವಾಗಿ ಅಪಾಯಕಾರಿಯಾದುದಾಗಿವೆ.

ಬಿಜೆಪಿ ಮತ್ತು ಅದರ ಪರಿವಾರವು ನಾರಾಯಣಗುರುಗಳನ್ನು, ಕುವೆಂಪು ಅವರನ್ನು, ಬಾಬಾಸಾಹೇಬ್ ಅಂಬೇಡ್ಕರರನ್ನು, ಮಹಾತ್ಮಾ ಗಾಂಧಿಯವರನ್ನು ತಮ್ಮ ಚಿಂತನೆಯ ಶತ್ರುಗಳೆಂದು ಸಹಜವಾಗಿಯೇ ಭಾವಿಸಿದ್ದಾರೆ. ಹೊರಗೆ ಹೇಳಲಾಗದ್ದನ್ನು ತಮ್ಮ ಶಾಖೆಗಳಲ್ಲಿ ಹೇಳಿಕೊಳ್ಳುತ್ತಾರೆ. ಶಾಖೆಗಳಲ್ಲಿ ಗೋಡ್ಸೆಯ ’ಆರಾಧನೆ’ ಇರುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಅಪಾರ ಪ್ರಮಾಣದ ಸುಳ್ಳುಗಳನ್ನು ಅಲ್ಲಿ ಬಿತ್ತರಿಸಲಾಗುತ್ತದೆ. ಅಂತಹ ಸುಳ್ಳುಗಳನ್ನು ಬೇರೆಬೇರೆ ಪ್ರಮಾಣದಲ್ಲಿ ಸಮಾಜದಲ್ಲೂ ಹರಡಲಾಗಿದೆ. ನಿಧಾನಕ್ಕೆ ಅವುಗಳಿಗೆ ಮಾನ್ಯತೆ ಸಿಕ್ಕಂತೆಲ್ಲಾ ಬಹಿರಂಗವಾಗಿಯೂ ಮಾತನಾಡತೊಡಗುತ್ತಾರೆ. ಇದು ಅವರು ಬಳಸುತ್ತಾ ಬಂದಿರುವ ವಿಧಾನ Modus operandi.

ಅಂತಹದ್ದರಲ್ಲಿ ಒಂದು ಅಂಶ 10ನೇ ತರಗತಿಯ ಸಮಾಜವಿಜ್ಞಾನ ಪಠ್ಯದಲ್ಲಿ ಇದೆ. ಅದರ ’ಅಂತಿಮ’ ಪಿಡಿಎಫ್ ಪ್ರತಿ ಈಗ ಲಭ್ಯವಿದ್ದು, ಅದೀಗ ಎಲ್ಲೆಲ್ಲೂ ಓಡಾಡುತ್ತಿದೆ. ಭಾರತ ಒಕ್ಕೂಟ ವ್ಯವಸ್ಥೆಯಲ್ಲಿನ ವಿವಿಧ ಭಾಷಾವಾರು ಪ್ರಾಂತಗಳ ಹಕ್ಕುಗಳು ಸಾಮಾನ್ಯವಾಗಿ ಬಿಜೆಪಿ ಮತ್ತದರ ಪರಿವಾರಕ್ಕೆ ಯಾವಾಗಲೂ ಅಪಥ್ಯ. ಅದನ್ನು ಹೊಸಕುವ ಕಾರಣಕ್ಕೇ ಜಿಎಸ್‌ಟಿ ಮಾತ್ರವಲ್ಲದೇ ಹಲವು ರೀತಿಯ ನೀತಿಗಳನ್ನು ಬಿಜೆಪಿ ಜಾರಿಗೆ ತಂದಿರುವುದನ್ನು ನಾವು ನೋಡುತ್ತೇವೆ. ಮೊದಲು ಚಿಂತನೆಯನ್ನು ಹರಿಯಬಿಡಬೇಕು, ನಂತರ ಸಾರ್ವಜನಿಕ ಮಾನ್ಯತೆ ಪಡೆದುಕೊಳ್ಳುವುದು ಮತ್ತು ಅಂತಿಮವಾಗಿ ಅದನ್ನೇ ಅಧಿಕೃತ ಸರ್ಕಾರಿ ನೀತಿ ಮಾಡುವುದು ಗುರಿ. ಈಗಾಗಲೇ ರಾಜ್ಯಗಳ ಹಕ್ಕುಗಳನ್ನು ಸಾಕಷ್ಟು ಕಿತ್ತುಕೊಂಡಿದ್ದರೂ, ರಾಜ್ಯಗಳ ಅಸ್ಮಿತೆಯನ್ನು ಅಳಿಸುವುದು ಸುಲಭವಲ್ಲ. ಅದನ್ನು ಮಾಡಲು ಈಗ ಪಠ್ಯಪುಸ್ತಕವನ್ನೂ ಬಳಸಿಕೊಂಡಿರುವುದು ಎದ್ದು ಕಾಣುತ್ತದೆ. ಕರ್ನಾಟಕತ್ವ ಅಥವಾ ಪ್ರಾದೇಶಿಕ ಚಿಂತನೆಯ ವಿರುದ್ಧ ಎಳೆಯ ಮಕ್ಕಳಲ್ಲೇ ಅಭಿಪ್ರಾಯ ಮೂಡಿಸುವುದು ಅವರ ಉದ್ದೇಶವಾಗಿದೆ. ಅದರ ಭಾಗವಾಗಿ 10ನೇ ತರಗತಿಯ ಸಮಾಜಶಾಸ್ತ್ರ ಪುಸ್ತಕದ ರಾಜ್ಯಶಾಸ್ತ್ರ ಅಧ್ಯಾಯ 6ರಲ್ಲಿ (ಪುಟ ಸಂಖ್ಯೆ 56) ಹೀಗೆ ಹೇಳಲಾಗುತ್ತದೆ.

’ಒಂದು ನಿರ್ದಿಷ್ಟ ಜನಸಮುದಾಯ ತಾವು ವಾಸಿಸುವ ಪ್ರದೇಶವನ್ನೇ ಅತ್ಯಂತ ಗಾಢವಾಗಿ ಪ್ರೀತಿಸಿ, ಕೇವಲ ಆ ಭಾಗದ ಬಗ್ಗೆಯೇ ಅತಿಯಾದ ಅಭಿಮಾನವನ್ನು ಬೆಳೆಸಿಕೊಂಡರೆ ಅದನ್ನು ಪ್ರಾದೇಶಿಕವಾದ ಎಂದು ಕರೆಯಬಹುದು. ಭಾರತದಂತಹ ವಿಶಾಲ ರಾಷ್ಟ್ರ ಸಹಜವಾಗಿ ಹಲವಾರು ಪ್ರಾದೇಶಿಕ ವಿಭಿನ್ನತೆಯನ್ನು ಹೊಂದಿದ ದೇಶ. ಒಂದು ನಿರ್ದಿಷ್ಟ ಹಂತದವರೆಗೆ ಈ ಪ್ರಾದೇಶಿಕವಾದ ಸಹನೆಗೆ ಯೋಗ್ಯ ಎನಿಸುತ್ತದೆ. ತಮ್ಮದೇ ಪ್ರದೇಶದ ಸರ್ವತೋಮುಖ ಬೆಳವಣಿಗೆಗೆ ಪ್ರಯತ್ನಿಸಲು ಈ ಭಾವನೆ ಪ್ರೇರಣೆ ನೀಡುತ್ತದೆ. ಆದರೆ ಈ ಪ್ರಾದೇಶಿಕ ಮನೋಭಾವ ತೀರಾ ಹೆಚ್ಚು ಎನಿಸಿದರೆ ಅದು ರಾಷ್ಟ್ರದ ಏಕತೆ ಹಾಗೂ ಹಿತಾಸಕ್ತಿಗಳಿಗೆ ಧಕ್ಕೆ ಒದಗಿಸುತ್ತದೆ. ಆದುದರಿಂದ ಆಯಾಯಾ ಪ್ರದೇಶದ ಜನಸಮುದಾಯ ತಮ್ಮದೇ ಪ್ರಾದೇಶಿಕ ಮನೋಭಾವ ಹೊಂದುವ ಜೊತೆಜೊತೆಗೇ ಸಮಗ್ರ ದೇಶದ ಪ್ರಗತಿಯ ಬಗೆಗೂ ಚಿಂತನೆ ಹರಿಸುವಿಕೆ ಅತ್ಯಗತ್ಯ.

ಆಯಾ ಪ್ರದೇಶಗಳ ಚಾರಿತ್ರಿಕ ಹಿನ್ನೆಲೆ, ಸಾಮಾಜಿಕ ಕಟ್ಟುಪಾಡುಗಳು, ಆರ್ಥಿಕ ವಿಚಾರಗಳು, ಸಾಂಸ್ಕೃತಿಕ ವಿಭಿನ್ನತೆಗಳು ಹಾಗೂ ಭೌಗೋಳಿಕ ಪರಿಸರ-ಅಲ್ಲಿನ ಜನಸಮುದಾಯದಲ್ಲಿ ಪ್ರಾದೇಶಿಕವಾದವನ್ನು ಸಹಜವಾಗಿ ಬೆಳೆಸುತ್ತದೆ. ಅತಿಯಾದ ಭಾಷಾಭಿಮಾನವೂ ರಾಷ್ಟ್ರೀಯವಾದದ ವಿರುದ್ಧ ಸಂಕುಚಿತ ಮನೋಭಾವವನ್ನು ಬೆಳೆಸುತ್ತದೆ. ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ. ಇತ್ತೀಚೆಗೆ ಆಂಧ್ರಪ್ರದೇಶದಲ್ಲಿನ ತೆಲಂಗಾಣದ ಭಾಗದ ಪ್ರಾದೇಶಿಕವಾದ ಹೋರಾಟವನ್ನು ಗಮನಿಸಬಹುದು. ದೇಶದ ಇನ್ನಿತರ ಭಾಗಗಳಲ್ಲಿ ನಡೆಯುತ್ತಿರುವ ಪ್ರಾದೇಶಿಕವಾದದ ಹೋರಾಟಗಳು ಕೂಡಾ ದೇಶದ ಅಭಿವೃದ್ಧಿ(ಗೆ) ತೊಡಕಾಗುವ ಸಾಧ್ಯತೆಗಳಿವೆ.’

ಮೇಲ್ನೋಟಕ್ಕೆ ’ಅತಿಯಾದ’ ಪ್ರಾದೇಶಿಕ ಮನೋಭಾವದ ಕುರಿತು ಹೇಳುತ್ತಿದ್ದಾರೆ ಎನಿಸಿದರೂ, ಅಂತಹ ಅತಿಯ ಅಪಾಯವನ್ನು ವಿವರಿಸಲು ಅವರು ಮುಂದಿಡುತ್ತಿರುವ ಉದಾಹರಣೆ ತೆಲಂಗಾಣದ್ದಾಗಿದೆ. ಅದನ್ನು ಪ್ರಸ್ತಾಪಿಸುವ ಹಿಂದಿನ ವಾಕ್ಯದಲ್ಲಿ ’ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ’ ಎಂದು ಹೇಳಲಾಗಿದೆ. ಒಂದು ವೇಳೆ ವಾದಕ್ಕಾಗಿ ತೆಲಂಗಾಣ ಹೋರಾಟದಲ್ಲಿ ಅತಿ ಇತ್ತು ಎಂದು ಒಪ್ಪಿಕೊಂಡರೂ, ಅದರಲ್ಲಿ ’ದೇಶದ ಏಕತೆಗೆ ಧಕ್ಕೆ ಉಂಟಾಗುವ’ ಯಾವ ಅಂಶವಿತ್ತು? ಅವರು ಕೇಳುತ್ತಿದ್ದದ್ದು ಮತ್ತು ಪಡೆದುಕೊಂಡಿದ್ದು ಪ್ರತ್ಯೇಕ ರಾಜ್ಯವನ್ನು ಮಾತ್ರ.

ಅಷ್ಟೇ ಅಲ್ಲದೇ, ಈ ದೇಶದಲ್ಲಿ ಇರುವ ವಿಭಿನ್ನತೆಗಳು ’ಸಹಜವಾಗಿ’ ಪ್ರಾದೇಶಿಕವಾದವನ್ನು ಬೆಳೆಸುತ್ತವೆ ಎಂದು ಈ ಪಠ್ಯದಲ್ಲಿ ಹೇಳಲಾಗುತ್ತದೆ. ಒಂದೆಡೆ ಪ್ರಾದೇಶಿಕವಾದವು ಈ ದೇಶವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಒಂದು ಎಂದು ಪಾಠದ ಆರಂಭದಲ್ಲೇ ಹೇಳಲಾಗಿದೆ; ನಂತರ ಅದನ್ನು ದೇಶದ ಏಕತೆಗೆ ಧಕ್ಕೆ ಎನ್ನಲಾಗುತ್ತದೆ; ಜೊತೆಜೊತೆಗೇ ವಿಭಿನ್ನತೆಗಳು ’ಸಹಜವಾಗಿ’ ಇಂತಹ ಒಂದು ಸವಾಲನ್ನು ದೇಶದ ಮುಂದೊಡ್ಡುತ್ತವೆ ಎಂದು ಬಿಂಬಿಸಲಾಗಿದೆ.

ರಾಷ್ಟ್ರೀಯವಾದದ ಕುರಿತು, ಇಡೀ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಯಾರಿಗೆ ಪಾಠ ಹೇಳಲಾಗುತ್ತದೆ? ಯಾರು ದೊಡ್ಡ ಪ್ರಮಾಣದ ಸಂಪನ್ಮೂಲ ಸೃಷ್ಟಿಸಿ, ಒಕ್ಕೂಟ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಕೊಡುಗೆ ನೀಡುತ್ತಾ ಇಡೀ ದೇಶದ ಅಭಿವೃದ್ಧಿಗೂ ಕಾರಣರಾಗುತ್ತಿದ್ದಾರೋ ಅವರಿಗೆ. ಅಂದರೆ ತಮಿಳುನಾಡು, ಕರ್ನಾಟಕದಂತಹ ರಾಜ್ಯಗಳಿಗೆ. ಇದನ್ನು ಕರ್ನಾಟಕದ ಶಾಲಾ ಪಠ್ಯಗಳಲ್ಲೇ ತುರುಕುವ ಧಾರ್ಷ್ಟ್ಯವನ್ನು ಪ್ರದರ್ಶಿಸಲು ಸಾಧ್ಯವಾಗಿರುವುದು ಈ ನಾಡಿನ ದುರಂತ.

ಅಂದರೆ ಪಠ್ಯಪುಸ್ತಕ ಪರಿಷ್ಕರಣೆಯೆಂಬುದು ಒಂದು ಬಹುಮುಖಿ ದಾಳಿಯಾಗಿದೆ. ಇದನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿರುವವರೂ ಈ ಬಹುಮುಖಿ ಆಯಾಮವನ್ನು ಅರಿತುಕೊಂಡು ತಿರುಗೇಟು ನೀಡುವುದು ಅತ್ಯಗತ್ಯವಾದುದಾಗಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಮತ್ತು ಮತೀಯವಾದ; ಬ್ರಾಹ್ಮಣವಾದಿ ಮೌಲ್ಯಗಳನ್ನು ಹೇರುವ, ಉಳಿದವರನ್ನು ದಮನಕ್ಕೆ ಗುರಿಮಾಡುವ ಹಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...