Homeಮುಖಪುಟಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

- Advertisement -
- Advertisement -

‘ಮಿಸ್ ಯೂನಿವರ್ಸ್-2021’ ಹರ್ನಾಜ್ ಸಂಧು ಅವರು ಹಿಜಾಬ್ ವಿಷಯ ಸೇರಿದಂತೆ ಹುಡುಗಿಯರನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದಾರೆ. ‘ಮಹಿಳೆಯರು ಆಯ್ಕೆಮಾಡಿದ ರೀತಿಯಲ್ಲಿ ಬದುಕಲು ಬಿಡಿ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ನೀಡಿರುವ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಿಜಾಬ್‌ ಕುರಿತು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಂಧು ಅವರು ತಮ್ಮ ಅಭಿಪ್ರಾಯಗಳನ್ನು ಈ ವಿಡಿಯೊದಲ್ಲಿ ಹೇಳಿದ್ದಾರೆ. ‘ಮಿಸ್ ಯೂನಿವರ್ಸ್ 2021’ ರ ಹೋಮ್‌ಕಮಿಂಗ್ ಗೌರವಾರ್ಥವಾಗಿ ಮಾರ್ಚ್ 17 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುವ ಮೊದಲು, ಸಂಘಟಕರು ಮಧ್ಯಪ್ರವೇಶಿಸಿ ವರದಿಗಾರರಿಗೆ ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಹಾಗೂ ಅವರ ಸಾಧನೆ ಬಗ್ಗೆ ಪ್ರಶ್ನಿಸುವಂತೆ ಕೇಳಿಕೊಂಡರು. ಆದರೂ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದಲ್ಲಿ ಹುಡುಗಿಯರು ಅದೆಷ್ಟು ಬಾರಿ ಗುರಿಯಾಗುತ್ತಾರೆ ಎಂದು ತನ್ನ ವೇದನೆಯನ್ನು ವ್ಯಕ್ತಪಡಿಸಿದರು.

“ಪ್ರಾಮಾಣಿಕವಾಗಿ, ನೀವು ಯಾವಾಗಲೂ ಹುಡುಗಿಯರನ್ನು ಏಕೆ ಟಾರ್ಗೆಟ್ ಮಾಡುತ್ತೀರಿ? ಈಗಲೂ ನೀವು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ. ಹಾಗೆ, ಹಿಜಾಬ್ ವಿಷಯದಲ್ಲೂ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹುಡುಗಿಯರು ಅವರು ಆಯ್ಕೆ ಮಾಡಿದ ರೀತಿಯಲ್ಲಿ ಬದುಕಲಿ. ಅವರು ತನ್ನ ಗುರಿಯನ್ನು ತಲುಪಲಿ. ಹುಡುಗಿಯರು ಹಾರಾಡಲಿ, ಅವರ ರೆಕ್ಕೆಗಳನ್ನು ಕತ್ತರಿಸಬೇಡಿ” ಎಂದು ಸಂಧು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ಇತ್ತೀಚೆಗೆ ವಜಾಗೊಳಿಸಿತ್ತು. ಹಿಜಾಬ್‌ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಉಡುಗೆ ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುಕ್ಕಟೆಯಾಗಿ ಈ ರೀತಿಯಲ್ಲಾದರೂ ಪಬ್ಲಿಸಿಟಿ ಪಡೆಯೋಕ್ಕೆ ಇಂತಹ ಹೇಳಿಕೆಗಳನ್ನ ಕೊಡುತ್ತಿರುವುದು ನಾಚಿಕೆಗೇಡಿನ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....