Homeಮುಖಪುಟಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

- Advertisement -
- Advertisement -

‘ಮಿಸ್ ಯೂನಿವರ್ಸ್-2021’ ಹರ್ನಾಜ್ ಸಂಧು ಅವರು ಹಿಜಾಬ್ ವಿಷಯ ಸೇರಿದಂತೆ ಹುಡುಗಿಯರನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದಾರೆ. ‘ಮಹಿಳೆಯರು ಆಯ್ಕೆಮಾಡಿದ ರೀತಿಯಲ್ಲಿ ಬದುಕಲು ಬಿಡಿ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ನೀಡಿರುವ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಿಜಾಬ್‌ ಕುರಿತು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಂಧು ಅವರು ತಮ್ಮ ಅಭಿಪ್ರಾಯಗಳನ್ನು ಈ ವಿಡಿಯೊದಲ್ಲಿ ಹೇಳಿದ್ದಾರೆ. ‘ಮಿಸ್ ಯೂನಿವರ್ಸ್ 2021’ ರ ಹೋಮ್‌ಕಮಿಂಗ್ ಗೌರವಾರ್ಥವಾಗಿ ಮಾರ್ಚ್ 17 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುವ ಮೊದಲು, ಸಂಘಟಕರು ಮಧ್ಯಪ್ರವೇಶಿಸಿ ವರದಿಗಾರರಿಗೆ ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಹಾಗೂ ಅವರ ಸಾಧನೆ ಬಗ್ಗೆ ಪ್ರಶ್ನಿಸುವಂತೆ ಕೇಳಿಕೊಂಡರು. ಆದರೂ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದಲ್ಲಿ ಹುಡುಗಿಯರು ಅದೆಷ್ಟು ಬಾರಿ ಗುರಿಯಾಗುತ್ತಾರೆ ಎಂದು ತನ್ನ ವೇದನೆಯನ್ನು ವ್ಯಕ್ತಪಡಿಸಿದರು.

“ಪ್ರಾಮಾಣಿಕವಾಗಿ, ನೀವು ಯಾವಾಗಲೂ ಹುಡುಗಿಯರನ್ನು ಏಕೆ ಟಾರ್ಗೆಟ್ ಮಾಡುತ್ತೀರಿ? ಈಗಲೂ ನೀವು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ. ಹಾಗೆ, ಹಿಜಾಬ್ ವಿಷಯದಲ್ಲೂ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹುಡುಗಿಯರು ಅವರು ಆಯ್ಕೆ ಮಾಡಿದ ರೀತಿಯಲ್ಲಿ ಬದುಕಲಿ. ಅವರು ತನ್ನ ಗುರಿಯನ್ನು ತಲುಪಲಿ. ಹುಡುಗಿಯರು ಹಾರಾಡಲಿ, ಅವರ ರೆಕ್ಕೆಗಳನ್ನು ಕತ್ತರಿಸಬೇಡಿ” ಎಂದು ಸಂಧು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ಇತ್ತೀಚೆಗೆ ವಜಾಗೊಳಿಸಿತ್ತು. ಹಿಜಾಬ್‌ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಉಡುಗೆ ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುಕ್ಕಟೆಯಾಗಿ ಈ ರೀತಿಯಲ್ಲಾದರೂ ಪಬ್ಲಿಸಿಟಿ ಪಡೆಯೋಕ್ಕೆ ಇಂತಹ ಹೇಳಿಕೆಗಳನ್ನ ಕೊಡುತ್ತಿರುವುದು ನಾಚಿಕೆಗೇಡಿನ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...