Homeಮುಖಪುಟಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

- Advertisement -
- Advertisement -

‘ಮಿಸ್ ಯೂನಿವರ್ಸ್-2021’ ಹರ್ನಾಜ್ ಸಂಧು ಅವರು ಹಿಜಾಬ್ ವಿಷಯ ಸೇರಿದಂತೆ ಹುಡುಗಿಯರನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದಾರೆ. ‘ಮಹಿಳೆಯರು ಆಯ್ಕೆಮಾಡಿದ ರೀತಿಯಲ್ಲಿ ಬದುಕಲು ಬಿಡಿ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ನೀಡಿರುವ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಿಜಾಬ್‌ ಕುರಿತು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಂಧು ಅವರು ತಮ್ಮ ಅಭಿಪ್ರಾಯಗಳನ್ನು ಈ ವಿಡಿಯೊದಲ್ಲಿ ಹೇಳಿದ್ದಾರೆ. ‘ಮಿಸ್ ಯೂನಿವರ್ಸ್ 2021’ ರ ಹೋಮ್‌ಕಮಿಂಗ್ ಗೌರವಾರ್ಥವಾಗಿ ಮಾರ್ಚ್ 17 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುವ ಮೊದಲು, ಸಂಘಟಕರು ಮಧ್ಯಪ್ರವೇಶಿಸಿ ವರದಿಗಾರರಿಗೆ ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಹಾಗೂ ಅವರ ಸಾಧನೆ ಬಗ್ಗೆ ಪ್ರಶ್ನಿಸುವಂತೆ ಕೇಳಿಕೊಂಡರು. ಆದರೂ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದಲ್ಲಿ ಹುಡುಗಿಯರು ಅದೆಷ್ಟು ಬಾರಿ ಗುರಿಯಾಗುತ್ತಾರೆ ಎಂದು ತನ್ನ ವೇದನೆಯನ್ನು ವ್ಯಕ್ತಪಡಿಸಿದರು.

“ಪ್ರಾಮಾಣಿಕವಾಗಿ, ನೀವು ಯಾವಾಗಲೂ ಹುಡುಗಿಯರನ್ನು ಏಕೆ ಟಾರ್ಗೆಟ್ ಮಾಡುತ್ತೀರಿ? ಈಗಲೂ ನೀವು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ. ಹಾಗೆ, ಹಿಜಾಬ್ ವಿಷಯದಲ್ಲೂ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹುಡುಗಿಯರು ಅವರು ಆಯ್ಕೆ ಮಾಡಿದ ರೀತಿಯಲ್ಲಿ ಬದುಕಲಿ. ಅವರು ತನ್ನ ಗುರಿಯನ್ನು ತಲುಪಲಿ. ಹುಡುಗಿಯರು ಹಾರಾಡಲಿ, ಅವರ ರೆಕ್ಕೆಗಳನ್ನು ಕತ್ತರಿಸಬೇಡಿ” ಎಂದು ಸಂಧು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ಇತ್ತೀಚೆಗೆ ವಜಾಗೊಳಿಸಿತ್ತು. ಹಿಜಾಬ್‌ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಉಡುಗೆ ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುಕ್ಕಟೆಯಾಗಿ ಈ ರೀತಿಯಲ್ಲಾದರೂ ಪಬ್ಲಿಸಿಟಿ ಪಡೆಯೋಕ್ಕೆ ಇಂತಹ ಹೇಳಿಕೆಗಳನ್ನ ಕೊಡುತ್ತಿರುವುದು ನಾಚಿಕೆಗೇಡಿನ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...