Homeಅಂತರಾಷ್ಟ್ರೀಯಅಲ್ಪಸಂಖ್ಯಾತರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ: ಭಾರತಕ್ಕೆ ಅಮೇರಿಕಾದ ಕಠಿಣ ಸಂದೇಶ

ಅಲ್ಪಸಂಖ್ಯಾತರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ: ಭಾರತಕ್ಕೆ ಅಮೇರಿಕಾದ ಕಠಿಣ ಸಂದೇಶ

- Advertisement -
- Advertisement -

ಮಧ್ಯ ಮತ್ತು ದಕ್ಷಿಣ ಏಷ್ಯಾದೊಂದಿಗೆ ವ್ಯವಹರಿಸುವ ಹಿರಿಯ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ರಾಜತಾಂತ್ರಿಕ, ಆಲಿಸ್ ಜಿ ವೆಲ್ಸ್ ಅವರು ಕೋವಿಡ್ 19 ಅನ್ನು ಬಳಸಿ ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಅವರು ಟ್ವೀಟ್‌ನಲ್ಲಿ, “ಯಾವುದೇ ಸಮಯದಲ್ಲಿ ಹಾಗೂ ಯಾವುದೇ ಸ್ಥಳದಲ್ಲಿ ಜನಾಂಗೀಯ ಅಥವಾ ಧಾರ್ಮಿಕ ಅಲ್ಪಸಂಖ್ಯಾತರನ್ನು ಕಳಂಕಿತಗೊಳಿಸುವುದು ಸ್ವೀಕಾರಾರ್ಹವಲ್ಲ. ಕೊವಿಡ್ 19 ರ ಆತಂಕ ಮತ್ತು ಭಯ ನಮ್ಮನ್ನು ವಿಭಜಿಸಲು ಬಿಡಬಾರದು …” ಎಂದು ಬರೆದಿದ್ದಾರೆ.

ಲಾರ್ಜ್ ಫಾರ್ ಇಂಟರ್ನ್ಯಾಷನಲ್ ರಿಲೀಜಿಯಸ್ ಫ್ರೀಡಂ ಇದರ ಅಮೆರಿಕಾ ರಾಯಭಾರಿ ಸ್ಯಾಮ್ ಬ್ರೌನ್ಬ್ಯಾಕ್ ಭಾರತದಲ್ಲಿ ‘ಕರೋನಾ ಜಿಹಾದ್’ ಹ್ಯಾಶ್‌ಟ್ಯಾಗ್ ಟ್ರೆಂಡ್ “ದುರದೃಷ್ಟಕರ” ಎಂದು ಹೇಳಿದ್ದಾರೆ.

“ಸರ್ಕಾರಗಳು ತಪ್ಪು ಮಾಡುತ್ತಿದೆ. ಸರ್ಕಾರಗಳು ಇದನ್ನು ನಿಯಂತ್ರಿಸಬೇಕು ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳು ಕೊರೊನ ವೈರಸ್‌ನ ಮೂಲವಲ್ಲ ಎಂದು ಸ್ಪಷ್ಟವಾಗಿ ಹೇಳಬೇಕು” ಎಂದು ಅವರು ಹೇಳಿದ್ದರು.

ಸರ್ಕಾರದ ಮೇಲೆ ಹೊಣೆಗಾರಿಕೆಯನ್ನು ಹೇರುತ್ತಿರುವಾಗ, “ಆತಿಥೇಯ ಸರ್ಕಾರಗಳು ಅದನ್ನು ಆಕ್ರಮಣಕಾರಿಯಾಗಿ ಹಿಂದಕ್ಕೆ ತಳ್ಳುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು. ಆದರೆ ಈ ವಿಷಯದ ಬಗ್ಗೆ ಅವರು ಇನ್ನೂ ಭಾರತೀಯ ಅಧಿಕಾರಿಗಳೊಂದಿಗೆ ಯಾವುದೇ ನಿರ್ದಿಷ್ಟ ಸಂಭಾಷಣೆ ನಡೆಸಿಲ್ಲ ಎಂದು ಅವರು ಹೇಳಿದರು.

ಮಾರ್ಚ್ ಮೊದಲಾರ್ಧದಲ್ಲಿ ಧಾರ್ಮಿಕ ಸಭೆ ನಡೆದ ದೆಹಲಿಯ ನಿಜಾಮುದ್ದೀನ್‌ನಿಂದ ಕೋವಿಡ್ -19 ರ ಹರಡುವಿಕೆ ವರದಿಯಾದ ನಂತರ, ಈ ಘಟನೆಯಲ್ಲಿ ಭಾಗವಹಿಸಿದ ತಬ್ಲೀಘಿ ಜಮಾಅತ್ ಸದಸ್ಯರ ವಿರುದ್ಧ ಮಾತ್ರವಲ್ಲದೆ ಇಡೀ ಮುಸ್ಲಿಂ ಸಮುದಾಯವನ್ನು ಹೊಣೆಯನ್ನಾಗಹಿ ಮಾಡಲಾಗುತ್ತಿದೆ.

ದೇಶದಲ್ಲಿ ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಕೋವಿಡ್ -19 ಅನ್ನು ಹರಡುತ್ತಿದೆ ಎನ್ನುವಂತೆ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ. ಎಷ್ಟರಮಟ್ಟಿಗೆಂದರೆ, ಸ್ವತಃ ಪೊಲೀಸರೇ ಮಾಧ್ಯಮಗಳಿಗೆ ಸುಳ್ಳು ಸುದ್ದಿಗಳನ್ನು ವರದಿ ಮಾಡದಿರಿ ಎಂದು ಹೇಳತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...